AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಮಂಜು-ದಿವ್ಯಾ ಫೋಟೋ; ಬಿಗ್​ ಬಾಸ್​ ಬಳಿಕ ಏನಿದು ಕಹಾನಿ?

ಗಣೇಶ ಚತುರ್ಥಿ ಆಚರಣೆಗಾಗಿ ಎಲ್ಲರೂ ಟ್ರೆಡಿಷನಲ್​ ಉಡುಗೆ ಧರಿಸಿ ಮಿಂಚಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಜೋಡಿ ಹೆಚ್ಚು ಗಮನ ಸೆಳೆದಿದೆ.

ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಮಂಜು-ದಿವ್ಯಾ ಫೋಟೋ; ಬಿಗ್​ ಬಾಸ್​ ಬಳಿಕ ಏನಿದು ಕಹಾನಿ?
ಮಂಜು ಪಾವಗಡ, ದಿವ್ಯಾ ಸುರೇಶ್
TV9 Web
| Edited By: |

Updated on: Sep 07, 2021 | 9:17 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಎಷ್ಟು ಆಪ್ತವಾಗಿದ್ದರು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅವರಿಬ್ಬರ ನಡುವಿನ ಸ್ನೇಹ-ಸಂಬಂಧವನ್ನು ಪ್ರೇಕ್ಷಕರು ನೂರಾರು ದಿನಗಳ ಕಾಲ ನೋಡಿದ್ದಾರೆ. ಬಿಗ್​ ಬಾಸ್​ ಶೋಗಾಗಿ ಮಾತ್ರ ಅವರು ಪರಸ್ಪರ ಕ್ಲೋಸ್​ ಆಗಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದು ಕೂಡ ಉಂಟು. ಆದರೆ ಆ ಟೀಕೆಯನ್ನು ಮಂಜು ಮತ್ತು ದಿವ್ಯಾ ಸುರೇಶ್​ ಸುಳ್ಳಾಗಿಸಿದ್ದಾರೆ. ಅಂದರೆ, ಬಿಗ್​ ಬಾಸ್​ನ ಆಚೆಗೂ ಕೂಡ ಅವರು ತಮ್ಮ ಬಾಂಧವ್ಯವನ್ನು ಮುಂದುವರಿಸಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಕೆಲವು ಫೋಟೋಗಳು ಈಗ ಸಖತ್​ ವೈರಲ್​ ಆಗುತ್ತಿವೆ.

ಪಕ್ಕಾ ಟ್ರೆಡಿಷನಲ್​ ಉಡುಗೆಯಲ್ಲಿ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಕಾಣಿಸಿಕೊಂಡಿದ್ದಾರೆ. ಮಂಜು ಭುಜದ ಮೇಲೆ ಕೈಯಿಟ್ಟು ಪೋಸ್​ ನೀಡಿರುವ ದಿವ್ಯಾ ನಗು ಬೀರಿದ್ದಾರೆ. ಈ ಫೋಟೋವನ್ನು ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಹಬ್ಬ ಮಾಡುತ್ತಿದ್ದಾರೆ. ಅಂದಹಾಗೆ, ಇದು ಕಲರ್ಸ್​ ಕನ್ನಡ ವಾಹಿನಿ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಕ್ಲಿಕ್ಕಿಸಿದ ಫೋಟೋ.

ಬಿಗ್​ ಬಾಸ್​ ಸ್ಪರ್ಧಿಗಳನ್ನೆಲ್ಲ ಜೊತೆ ಸೇರಿಸಿ, ಕಲರ್ಸ್​ ಕನ್ನಡ ವಾಹಿನಿಯು ಗಣೇಶೋತ್ಸವ ಆಚರಿಸಿದೆ. ಅದಕ್ಕೆ ‘ಬಿಗ್​ ಗಣೇಶೋತ್ಸವ’ ಎಂದು ಹೆಸರಿಡಲಾಗಿದೆ. ಹಬ್ಬದ ಆಚರಣೆಗಾಗಿ ಎಲ್ಲರೂ  ಟ್ರೆಡಿಷನಲ್​ ಉಡುಗೆ ಧರಿಸಿ ಮಿಂಚಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ದಿವ್ಯಾ ಸುರೇಶ್​ ಜೋಡಿ ಹೆಚ್ಚು ಗಮನ ಸೆಳೆದಿದೆ. ವೇದಿಕೆ ಮೇಲೆ ಭರಪೂರ ಮನರಂಜನೆ ಕೂಡ ನೀಡಲಾಗಿದೆ. ಮಂಜು ಪಾವಗಡ ಎಂದಿನಂತೆ ಕಾಮಿಡಿ ಕಚಗುಳಿ ಇಟ್ಟಿದ್ದಾರೆ. ಈ ಕಾರ್ಯಕ್ರಮ ಶುಕ್ರವಾರ (ಸೆ.10) ಮಧ್ಯಾಹ್ನ 1 ಗಂಟೆಗೆ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ.

ಈ ಸಂದರ್ಭದಲ್ಲಿ ದಿವ್ಯಾ ಸುರೇಶ್​ ಅವರು ತಾಯಿ ಮತ್ತು ಸಹೋದರನ ಜೊತೆ ಕ್ಲಿಕ್ಕಿಸಿಕೊಂಡ ಫೋಟೋ ಕೂಡ ವೈರಲ್​ ಆಗುತ್ತಿದೆ. ಅದೇ ಫ್ರೇಮ್​ನಲ್ಲಿ ಮಂಜು ಪಾವಗಡ ಸಹ ಇದ್ದಾರೆ ಎಂಬುದು ವಿಶೇಷ. ‘ಈ ಮೂವರು ನನ್ನ ಬದುಕಿನ ನಿಜವಾದ ಶಿಕ್ಷಕರು. ಹಲವು ರೀತಿಯಲ್ಲಿ ನೀವು ನನಗೆ ಸ್ಫೂರ್ತಿಯಾಗಿದ್ದೀರಿ. ನೀವು ನನ್ನ ಹೃದಯಕ್ಕೆ ತುಂಬ ಹತ್ತಿರವಾದವರು’ ಎಂದು ದಿವ್ಯಾ ಸುರೇಶ್​ ಕ್ಯಾಪ್ಷನ್​ ನೀಡಿದ್ದಾರೆ. ಸಾವಿರಾರು ಅಭಿಮಾನಿಗಳು ಈ ಫೋಟೋ ಕಂಡು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

ಅದ್ದೂರಿ ಮೆರವಣಿಗೆ, ಹೂವಿನ ಮಳೆ; ಪಾವಗಡದಲ್ಲಿ ಮಂಜುಗೆ ಸ್ವಾಗತ ಹೇಗಿತ್ತು ನೋಡಿ

ಶಿವರಾಜ್​ಕುಮಾರ್​ ಮನೆ ಮುಂದೆ ನಿಂತು ಮನದ ಮಾತು ಹಂಚಿಕೊಂಡ ಬಿಗ್​ ಬಾಸ್​ ವಿನ್ನರ್​ ಮಂಜು

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!