AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manju Pavagada: ನೆರವೇರಿತು ಮಂಜು ಪಾವಗಡ ನಿಶ್ಚಿತಾರ್ಥ; ಹುಡುಗಿ ಯಾರು?

ಹಾಸ್ಯ ಪಾತ್ರಗಳನ್ನು ಮಾಡಿಕೊಂಡು, ಹಾಸ್ಯ ರಿಯಾಲಿಟಿ ಶೋಗಳಲ್ಲಿ ಮಂಜು ಪಾವಗಡ ಭಾಗಿ ಆಗಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಭರ್ಜರಿ ಜನಪ್ರಿಯತೆ ನೀಡಿತು. ಅವರು ಈ ಸೀಸನ್​ನಲ್ಲಿ ವಿನ್ ಕೂಡ ಆದರು. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

Manju Pavagada: ನೆರವೇರಿತು ಮಂಜು ಪಾವಗಡ ನಿಶ್ಚಿತಾರ್ಥ; ಹುಡುಗಿ ಯಾರು?
ಮಂಜು ಪಾವಗಡ ನಿಶ್ಚಿತಾರ್ಥ
ರಾಜೇಶ್ ದುಗ್ಗುಮನೆ
|

Updated on: Oct 05, 2024 | 10:26 AM

Share

‘ಬಿಗ್ ಬಾಸ್ ಸೀಸನ್ 8’ರ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ ಅವರ ಬಾಳಲ್ಲಿ ಹುಡುಗಿಯ ಆಗಮನ ಆಗಿದೆ. ಮಂಜು ಹಾಗೂ ಆ ಹುಡುಗಿಯ ನಿಶ್ಚಿತಾರ್ಥ ಕೂಡ ನೆರವೇರಿದೆ. ಸೈಲೆಂಟ್ ಆಗಿ ಈ ಕಾರ್ಯಗಳು ನೆರವೇರಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಾಕಷ್ಟು ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಹಾಸ್ಯ ಪಾತ್ರಗಳನ್ನು ಮಾಡಿಕೊಂಡು, ಹಾಸ್ಯ ರಿಯಾಲಿಟಿ ಶೋಗಳಲ್ಲಿ ಮಂಜು ಪಾವಗಡ ಭಾಗಿ ಆಗಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಭರ್ಜರಿ ಜನಪ್ರಿಯತೆ ನೀಡಿತು. ಅವರು ಈ ಸೀಸನ್​ನಲ್ಲಿ ವಿನ್ ಕೂಡ ಆದರು. ಆ ಬಳಿಕ ಅವರು ಕಲರ್ಸ್ ಕನ್ನಡದ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿಯಲ್ಲಿ ನೆಗೆಟಿವ್ ರೋಲ್ ಮಾಡಿ ಫೇಮಸ್ ಆಗಿದ್ದಾರೆ. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ನಂದಿನಿ ಎಂಬುವವರ ಜೊತೆ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಬೆಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದಾರೆ. ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಜು ಅವರೇ ರಿವೀಲ್ ಮಾಡಬೇಕಿದೆ. ನವೆಂಬರ್​ನಲ್ಲಿ ಇವರ ವಿವಾಹ ನೆರವೇರಲಿದೆ ಎಂದು ವರದಿ ಆಗಿದೆ. ಇವರದ್ದು ಅರೇಂಜ್ ಮ್ಯಾರೆಜ್.

ಇದನ್ನೂ ಓದಿ: ‘ಬಿಗ್ ಬಾಸ್ ಅನ್ನ ತಿಂದವನಿಗೆ ಆ ಶೋ ಬಗ್ಗೆ ನಿಯತ್ತಿಲ್ಲ’; ಜಗದೀಶ್ ವಿರುದ್ಧ ಛೀಮಾರಿ 

ಮಂಜು ಪಾವಗಡ ಅವರ ನಿಶ್ಚಿತಾರ್ಥಕ್ಕೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಆಗಮಿಸಿದ್ದರು. ಮದುವೆಗೆ ಅವರು ಚಿತ್ರರಂಗದವರಿಗೆ ಆಮಂತ್ರಣ ನೀಡುವ ಸಾಧ್ಯತೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರದ್ದು ಅರೇಂಜ್ ಮ್ಯಾರೆಜ್ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ