AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಪಾವಗಡ ವಿವಾಹ; ನವಜೋಡಿಗೆ ಶುಭ ಹಾರೈಸಿದ ಶುಭಾ ಪೂಂಜಾ

ಆಪ್ತರು ಹಾಗೂ ಹಿರಿಯರ ಸಮ್ಮುಖದಲ್ಲಿ ಮಂಜು ಮದುವೆ ಆಗಿದ್ದಾರೆ. ಅವರ ಹುಟ್ಟೂರಾದ ಪಾವಗಡದಲ್ಲೇ ಈ ಮದುವೆ ನಡೆದಿದೆ. ಶುಭಾ ಪೂಂಜಾ ಸೇರಿ ಅನೇಕರು ಮದುವೆಯಲ್ಲಿ ಭಾಗಿ ಆದರು. ಶುಭಾ ಪೂಂಜಾ ಅವರು ಮಂಜು ಪಾವಗಡ ಅವರ ಕೆನ್ನೆಯನ್ನು ಹಿಂಡಿದ್ದಾರೆ.

ಮಂಜು ಪಾವಗಡ ವಿವಾಹ; ನವಜೋಡಿಗೆ ಶುಭ ಹಾರೈಸಿದ ಶುಭಾ ಪೂಂಜಾ
Follow us
ರಾಜೇಶ್ ದುಗ್ಗುಮನೆ
|

Updated on: Nov 14, 2024 | 2:17 PM

‘ಬಿಗ್ ಬಾಸ್ ಕನ್ನಡ ಸೀಸನ್  8’ರ ವಿನ್ನರ್ ಮಂಜು ಪಾವಗಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರಿಗೆ ಅನೇಕರ ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ಮಂಜು ಅವರು ಕೈ ಹಿಡಿದ ಹುಡುಗಿ ಚಿತ್ರರಂಗದ ಜೊತೆ ಯಾವುದೇ ನಂಟು ಹೊಂದಿಲ್ಲ ಅನ್ನೋದು ವಿಶೇಷ.

ಆಪ್ತರು ಹಾಗೂ ಹಿರಿಯರ ಸಮ್ಮುಖದಲ್ಲಿ ಮಂಜು ಮದುವೆ ಆಗಿದ್ದಾರೆ. ಅವರ ಹುಟ್ಟೂರಾದ ಪಾವಗಡದಲ್ಲೇ ಈ ಮದುವೆ ನಡೆದಿದೆ. ಶುಭಾ ಪೂಂಜಾ ಸೇರಿ ಅನೇಕರು ಮದುವೆಯಲ್ಲಿ ಭಾಗಿ ಆದರು. ಶುಭಾ ಪೂಂಜಾ ಅವರು ಮಂಜು ಪಾವಗಡ ಅವರ ಕೆನ್ನೆಯನ್ನು ಹಿಂಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಂಜು ಪಾವಗಡ ಅವರು ಹಾಸ್ಯ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಫೇಮಸ್ ಆದರು. ‘ಬಿಗ್ ಬಾಸ್ ಕನ್ನಡ ಸೀಸನ್ 8’ ವಿನ್ ಆಗಿ ಜನಪ್ರಿಯತೆ ಪಡೆದರು. ಆ ಸೀಸನ್​ನಲ್ಲಿ ಶುಭಾ ಪೂಂಜಾ ಕೂಡ ಭಾಗಿ ಆಗಿದ್ದರು. ಈ ಕಾರಣದಿಂದಲೇ ಮಂಜು ಅವರ ವಿವಾಹಕ್ಕೆ ಆಗಮಿಸಿ ಅವರು ವಿಶೇಷವಾಗಿ ಹಾರೈಸಿದ್ದಾರೆ. ಮಂಜು ಪಾವಗಡ ಅವರು ಕಲರ್ಸ್ ಕನ್ನಡದ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿಯಲ್ಲಿ ನೆಗೆಟಿವ್ ರೋಲ್ ಮಾಡಿ ಫೇಮಸ್ ಆಗಿದ್ದಾರೆ. ಈಗ ಅವರು ವಿವಾಹ ಆಗಿದ್ದಾರೆ.

ಮಂಜು ವಿವಾಹ ಆಗಿರೋದು ನಂದಿನಿ ಎಂಬುವವರ ಜೊತೆ. ಅವರು ಬೆಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಜು ಅವರೇ ರಿವೀಲ್ ಮಾಡಬೇಕಿದೆ.

ಇದನ್ನೂ ಓದಿ: ಮಂಜು ಪಾವಗಡ ಮದುವೆಯಲ್ಲಿ ಶುಭ ಪೂಂಜಾ, ವರನ ಕೆನ್ನೆ ಹಿಂಡಿದ ನಟಿ

ಮಂಜು ಪಾವಗಡ ಅವರು ಬಿಗ್ ಬಾಸ್​ನಲ್ಲಿ ಇದ್ದಾಗ ದಿವ್ಯಾ ಸುರೇಶ್ ಅವರ ಜೊತೆ ಆಪ್ತತೆ ಹೊಂದಿದ್ದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಇವರು ಮದುವೆ ಆಗಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಆದರೆ, ಇವರ ಗೆಳೆತನ ಬಿಗ್ ಬಾಸ್​ಗೆ ಮಾತ್ರ ಸೀಮಿತವಾಗಿತ್ತು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ಒಟ್ಟಾಗಿ ಕಾಣಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು