ನಿಶಾ ನರಸಪ್ಪ ಮನೆ ಬಳಿ ಹಣಕಳೆದುಕೊಂಡವರ ಗಲಾಟೆ, 1 ಕೋಟಿಗೂ ಹೆಚ್ಚು ವಂಚನೆ ಶಂಕೆ

Nisha Narasappa: ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರು ಹೇಳಿಕೊಂಡು ಲಕ್ಷಾಂತರ ಹಣ ವಂಚನೆ ಮಾಡಿದ್ದ ನಿಶಾ ನರಸಪ್ಪ ಅವರ ವಿರುದ್ಧ ಇನ್ನಷ್ಟು ದೂರುಗಳು ದಾಖಲಾಗಿವೆ.

ನಿಶಾ ನರಸಪ್ಪ ಮನೆ ಬಳಿ ಹಣಕಳೆದುಕೊಂಡವರ ಗಲಾಟೆ, 1 ಕೋಟಿಗೂ ಹೆಚ್ಚು ವಂಚನೆ ಶಂಕೆ
ನಿಶಾ ನರಸಪ್ಪ
Follow us
|

Updated on: Jul 16, 2023 | 3:51 PM

ಮಾಸ್ಟರ್ ಆನಂದ್ (Master Anand) ಪುತ್ರಿ, ಬಾಲಕಲಾವಿದೆ ವಂಶಿಕಾ (Vamshika) ಹೆಸರು ಹೇಳಿಕೊಂಡು ಲಕ್ಷಾಂತರ ಹಣ ವಂಚನೆ ಮಾಡಿರುವ ಪ್ರಕರಣ ಕೆಲವು ದಿನಗಳ ಹಿಂದಷ್ಟೆ ಬೆಳಕಿಗೆ ಬಂದು, ನಿಶಾ ಹೆಸರಿನ ಯುವತಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಕರಣ ಬಯಲಾದ ಬಳಿಕ ನಿಶಾ ನರಸಪ್ಪ ಮಾಡಿದ್ದ ಇನ್ನೂ ಹಲವು ವಂಚನೆಗಳು ಬಯಲಿಗೆ ಬಂದಿದ್ದು, ನಿಶಾಗೆ ಹಣ ಕೊಟ್ಟು ಕಳೆದುಕೊಂಡ ಹಲವರು ನಿಶಾ ನರಸಪ್ಪ ಮನೆಯ ಬಳಿ ಹೋಗಿ ಹಣ ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ. ಸುಮಾರು ಎರಡು ಕೋಟಿ ರೂಪಾಯಿ ವಂಚನೆಯನ್ನು ನಿಶಾ ನರಸಪ್ಪ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ನಿಶಾ ವಿರುದ್ಧ ದೂರು ದಾಖಲಾಗಿ ಸದಾಶಿವ ನಗರ ಪೊಲೀಸರು ನಿಶಾರನ್ನು ಬಂಧಿಸಿದ ಬಳಿಕ ನಿಶಾರಿಂದ ಮೋಸ ಹೋದ ಹಲವರು ಠಾಣೆಗೆ ಭೇಟಿ ನೀಡಿದ್ದಾರೆ. ಇನ್ನು ಕೆಲವರು ನಿಶಾ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ನಿಶಾರ ಕುಟುಂಬದವರೊಡನೆ ವಾಗ್ವಾದ ನಡೆಸಿದ್ದು ಹಣ ಮರಳಿಸುವಂತೆ ಒತ್ತಾಯಿಸಿದ್ದಾರೆ.

ನಿಶಾರ ಬಂಧನದ ಬಳಿಕ, ಈ ಯುವತಿ ಹಲವಾರು ಪೋಷಕರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇವೆಂಟ್ ಮಾಡುವ ಹೆಸರಲ್ಲಿ ಹಣ ಪಡೆದುಕೊಂಡು, ಆ ಬಳಿಕ ಮಕ್ಕಳನ್ನು ಟಿವಿ ಶೋಗೆ ಆಯ್ಕೆ ಮಾಡಿಸುವುದಾಗಿ, ಫ್ಯಾಷನ್ ಶೋಗೆ ಆಯ್ಕೆ ಮಾಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣವನ್ನು ನಿಶಾ ಹಲವರಿಂದ ಪಡೆದುಕೊಂಡಿದ್ದಾರೆ. ನಿಶಾರಿಂದ ಮೋಸ ಹೋದ ಕೆಲವರು ಈ ಹಿಂದೆ ಸಹ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ಕೆಲವರು ನಿಶಾರ ಮನೆಗೆ ಹೋಗಿ ಗಲಾಟೆ ಸಹ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ಕೆಲವು ಚಿತ್ರಗಳು, ವಿಡಿಯೋಗಳು ಇದೀಗ ವೈರಲ್ ಆಗುತ್ತಿವೆ.

ಇದನ್ನೂ ಓದಿ:ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿದ ಆರೋಪಿ ನಿಶಾ ನರಸಪ್ಪ ವಿರುದ್ಧ ದಾಖಲಾದ ಮತ್ತಷ್ಟು ದೂರುಗಳು

ನಿಶಾ ಮೇಲೆ ಈ ಹಿಂದೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಹಾಗೂ ಯಶವಂತಪುರ ಪೊಲೀಸ್ ಠಾಣೆಗಳಲ್ಲಿಯೂ ದೂರುಗಳು ದಾಖಲಾಗಿವೆ. ನಿಶಾ ತಮ್ಮ ಸಹೋದರನಿಂದ ಇಬ್ಬರಿಗೆ ಜೀವ ಬೆದರಿಕೆ ಹಾಕಿದ ಕುರಿತಾಗಿಯೂ ದೂರು ದಾಖಲಾಗಿತ್ತು. ಆದರೆ ಈಗ ವಂಶಿಕಾ ಹೆಸರಿನಲ್ಲಿ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದ ಬಳಿಕವಷ್ಟೆ ನಿಶಾರ ಬಂಧನವಾಗಿದೆ. ವಂಚನೆ ಹಣದಿಂದ ಐಶಾರಾಮಿ ಜೀವನ್ನು ನಿಶಾ ನರಸಪ್ಪ ಕಳೆಯುತ್ತಿದ್ದರು, ದುಬಾರಿ ಇನ್ನೋವಾ ಕಾರನ್ನು ಸಹ ನಿಶಾ ಖರೀದಿಸಿದ್ದರು.

ಮಾಸ್ಟರ್ ಆನಂದ್ ಪುತ್ರಿ ವಂಶಿಕಾರನ್ನು ಇವೆಂಟ್ ಒಂದಕ್ಕೆ ಕರೆದುಕೊಂಡು ಬರುವುದಾಗಿ ಹೇಳಿ ವ್ಯಕ್ತಿಯೊಬ್ಬರಿಂದ ನಿಶಾ ಹಣ ಪಡೆದಿದ್ದರಂತೆ. ಈ ವಿಷಯ ತಿಳಿದು ಮಾಸ್ಟರ್ ಆನಂದ್ ಹಾಗೂ ಅವರ ಪತ್ನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿಶಾರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು