AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalyani Kurale Jadhav: ರಸ್ತೆ ಅಪಘಾತಕ್ಕೆ ಖ್ಯಾತ ಕಿರುತೆರೆ ನಟಿ ಕಲ್ಯಾಣಿ ದುರ್ಮರಣ

Kalyani Kurale Jadhav Death: ಕಲ್ಯಾಣಿ ಕುರಳೆ ಜಾಧವ್​ ಅವರ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದಿದೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು,​ ಎಫ್​ಐಆರ್​ ದಾಖಲು ಮಾಡಿದ್ದಾರೆ.

Kalyani Kurale Jadhav: ರಸ್ತೆ ಅಪಘಾತಕ್ಕೆ ಖ್ಯಾತ ಕಿರುತೆರೆ ನಟಿ ಕಲ್ಯಾಣಿ ದುರ್ಮರಣ
ಕಲ್ಯಾಣಿ ಕುರಳೆ ಜಾಧವ್
TV9 Web
| Updated By: ಮದನ್​ ಕುಮಾರ್​|

Updated on: Nov 13, 2022 | 8:13 PM

Share

ಮರಾಠಿಯ ಹಲವಾರು ಸೀರಿಯಲ್​ಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ನಟಿ ಕಲ್ಯಾಣಿ ಕುರಳೆ ಜಾಧವ್​ (Kalyani Kurale Jadhav) ಅವರು ಕೊನೆಯುಸಿರು ಎಳೆದಿದ್ದಾರೆ. ಶನಿವಾರ (ನ.12) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ (Kalyani Kurale Jadhav Death) ಸುದ್ದಿ ತಿಳಿದು ಮರಾಠಿ ಕಿರುತೆರೆ ಲೋಕಕ್ಕೆ ಆಘಾತ ಆಗಿದೆ. ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ಕಲ್ಯಾಣಿ ಕುರಳೆ ಜಾಧವ್​ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ನ.12ರ ರಾತ್ರಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕಲ್ಯಾಣಿ ಅವರಿಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ಅವರು ನಿಧನರಾದರು ಎಂಬ ಮಾಹಿತಿ ಲಭ್ಯವಾಗಿದೆ.

ಕಲ್ಯಾಣಿ ಕುರಳೆ ಜಾಧವ್​ ಅವರು ‘ತುಜ್ಯಾತ್​ ಜೀವ್​ ರಂಗಲಾ’, ‘ದಕ್ಕಂಚ ರಾಜ ಜ್ಯೋತಿಬಾ’ ಮುಂತಾದ ಸೀರಿಯಲ್​ಗಳಲ್ಲಿ ನಟಿಸಿದ್ದರು. ಆ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ಕಲ್ಯಾಣಿ ಕುರಳೆ ಜಾಧವ್​ ಅವರಿಗೆ 32 ವರ್ಷ ವಯಸ್ಸಾಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಹಾಗೂ ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಕಿರುತೆರೆಯಲ್ಲಿ ನಟಿಸುತ್ತಿದ್ದ ಕಲ್ಯಾಣಿ ಕುರಳೆ ಜಾಧವ್​ ಅವರಿಗೆ ಅಭಿನಯದ ಜೊತೆಗೆ ಸ್ವಂತ ಬಿಸ್ನೆಸ್​ ಮಾಡುವ ತುಡಿತ ಕೂಡ ಇತ್ತು. ಇತ್ತೀಚೆಗೆ ಅವರು ರೆಸ್ಟೊರೆಂಟ್​ ಆರಂಭಿಸಿದ್ದರು. ಕೊಲ್ಹಾಪುರ ನಗರದ ರಾಜಾರಾಂಪುರಿ ಏರಿಯಾದಲ್ಲಿ ಅವರು ವಾಸವಾಗಿದ್ದರು. ಶನಿವಾರ ರಾತ್ರಿ ರೆಸ್ಟೋರೆಂಟ್​ ಕೆಲಸ ಮುಗಿಸಿ ವಾಪಸ್​ ಮನೆಗೆ ಬರುವಾಗ, ಕೊಲ್ಹಾಪುರ ನಗರದಿಂದ 20 ಕಿಲೋಮೀಟರ್​ ದೂರದಲ್ಲಿ ಈ ಅಪಘಾತ ಸಂಭವಿಸಿತು. ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ಖಚಿತಪಡಿಸಿದರು.

ಇದನ್ನೂ ಓದಿ
Image
Rahul Koli Death: ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ
Image
Breaking News: ಖ್ಯಾತ ನಟ ಅರುಣ್​ ಬಾಲಿ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ
Image
Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ
Image
Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ

ಕಲ್ಯಾಣಿ ಕುರಳೆ ಜಾಧವ್​ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್​ ಚಾಲಕನ ವಿರುದ್ಧ ಶಿರೋಲಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ ಹಾಗೂ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ