AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

ಬಿಎಂ​ಡಬ್ಲ್ಯು ಹಾಗೂ ಎಂಜಿ ಹೆಕ್ಟರ್​​ ಕಾರು ಮೇಘಾ ಶೆಟ್ಟಿ ಮನೆಗೆ ಬಂದಿದೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ
ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ
TV9 Web
| Edited By: |

Updated on: Aug 18, 2021 | 8:54 PM

Share

ನಟಿ ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡರು. ಅವರ ಖ್ಯಾತಿ ಕರ್ನಾಟಕದಾದ್ಯಂತ ಹಬ್ಬಿದೆ. ಈಗ ಅವರ ಮನೆಗೆ ಎರಡು ಐಷಾರಾಮಿ ಹೊಸ ಕಾರು ಆಗಮಿಸಿವೆ. ಈ ಬಗ್ಗೆ ಮೇಘಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದಾರೆ.

ಬಿಎಂ​ಡಬ್ಲ್ಯು ಹಾಗೂ ಎಂಜಿ ಹೆಕ್ಟರ್​​ ಕಾರು ಮೇಘಾ ಶೆಟ್ಟಿ ಮನೆಗೆ ಬಂದಿವೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಾಕಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಮೇಘಾ ಶೆಟ್ಟಿ ಹೊರ ನಡೆದಿದ್ದಾರೆ ಹಾಗೂ ಅವರು ಈ ಧಾರಾವಾಹಿಯಲ್ಲಿ ಮುಂದುವರಿಯುವುದಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿತ್ತು. ‘ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದಗಳು. ಈ ಗೊಂದಲದಿಂದ ವೀಕ್ಷಕರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಎಲ್ಲ ವೀಕ್ಷಕರಲ್ಲೂ ಕ್ಷಮೆ ಕೇಳುತ್ತಿದ್ದೇನೆ. ಇನ್ನು ಮುಂದೆ ಈ ರೀತಿ ಆಗಲ್ಲ’ ಎಂದಿದ್ದರು ಮೇಘಾ ಶೆಟ್ಟಿ.

‘ಮುಂದೆ ಈ ರೀತಿ ಸುದ್ದಿ ಕೇಳಿ ಬಂದರೆ ಅದಕ್ಕೆ ಗಮನಕೊಡಬೇಡಿ. ಮುಂದೆಯೂ ಇದೇ ರೀತಿ ಬೆಂಬಲಕೊಡಿ. ಜೊತೆ ಜೊತೆಯಲಿ ಧಾರಾವಾಹಿಯಿಂದ ನಾನು ಸಾಕಷ್ಟು ಪಡೆದುಕೊಂಡಿದ್ದೇನೆ. ಅದಕ್ಕೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ವಿಶ್ವಾಸ ಹೀಗೆ ಇರಲಿ’ ಎಂದು ಮೇಘಾ ಶೆಟ್ಟಿ ಕೋರಿದ್ದರು.

ಇದನ್ನೂ ಓದಿ: ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ

Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ?

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ