AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

ಬಿಎಂ​ಡಬ್ಲ್ಯು ಹಾಗೂ ಎಂಜಿ ಹೆಕ್ಟರ್​​ ಕಾರು ಮೇಘಾ ಶೆಟ್ಟಿ ಮನೆಗೆ ಬಂದಿದೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ
ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 18, 2021 | 8:54 PM

ನಟಿ ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡರು. ಅವರ ಖ್ಯಾತಿ ಕರ್ನಾಟಕದಾದ್ಯಂತ ಹಬ್ಬಿದೆ. ಈಗ ಅವರ ಮನೆಗೆ ಎರಡು ಐಷಾರಾಮಿ ಹೊಸ ಕಾರು ಆಗಮಿಸಿವೆ. ಈ ಬಗ್ಗೆ ಮೇಘಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದಾರೆ.

ಬಿಎಂ​ಡಬ್ಲ್ಯು ಹಾಗೂ ಎಂಜಿ ಹೆಕ್ಟರ್​​ ಕಾರು ಮೇಘಾ ಶೆಟ್ಟಿ ಮನೆಗೆ ಬಂದಿವೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಾಕಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಮೇಘಾ ಶೆಟ್ಟಿ ಹೊರ ನಡೆದಿದ್ದಾರೆ ಹಾಗೂ ಅವರು ಈ ಧಾರಾವಾಹಿಯಲ್ಲಿ ಮುಂದುವರಿಯುವುದಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿತ್ತು. ‘ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಸಂದರ್ಭದಲ್ಲಿ ಎಲ್ಲರಿಗೂ ಧನ್ಯವಾದಗಳು. ಈ ಗೊಂದಲದಿಂದ ವೀಕ್ಷಕರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಎಲ್ಲ ವೀಕ್ಷಕರಲ್ಲೂ ಕ್ಷಮೆ ಕೇಳುತ್ತಿದ್ದೇನೆ. ಇನ್ನು ಮುಂದೆ ಈ ರೀತಿ ಆಗಲ್ಲ’ ಎಂದಿದ್ದರು ಮೇಘಾ ಶೆಟ್ಟಿ.

‘ಮುಂದೆ ಈ ರೀತಿ ಸುದ್ದಿ ಕೇಳಿ ಬಂದರೆ ಅದಕ್ಕೆ ಗಮನಕೊಡಬೇಡಿ. ಮುಂದೆಯೂ ಇದೇ ರೀತಿ ಬೆಂಬಲಕೊಡಿ. ಜೊತೆ ಜೊತೆಯಲಿ ಧಾರಾವಾಹಿಯಿಂದ ನಾನು ಸಾಕಷ್ಟು ಪಡೆದುಕೊಂಡಿದ್ದೇನೆ. ಅದಕ್ಕೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ವಿಶ್ವಾಸ ಹೀಗೆ ಇರಲಿ’ ಎಂದು ಮೇಘಾ ಶೆಟ್ಟಿ ಕೋರಿದ್ದರು.

ಇದನ್ನೂ ಓದಿ: ವೀಕ್ಷಕರ ಬಳಿ ಕ್ಷಮೆ ಕೇಳಿದ ‘ಜೊತೆ ಜೊತೆಯಲಿ’ ನಟಿ ಮೇಘಾ ಶೆಟ್ಟಿ

Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ?

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್