AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ

ಮಹೇಶ್ ಬಾಬು ಅವರನ್ನು ಮೇಘಾ ಶೆಟ್ಟಿ ಭೇಟಿ ಮಾಡಿದ್ದು ಸಿನಿಮಾ ಉದ್ದೇಶಕ್ಕೆ ಇರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದರು. ಆದರೆ, ಆ ರೀತಿ ಏನು ಇಲ್ಲ

Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ
ಮೇಘಾ ಶೆಟ್ಟಿ-ಮಹೇಶ್ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 10, 2022 | 2:54 PM

ಮೇಘಾ ಶೆಟ್ಟಿ (Megha Shetty) ಅವರು ಶನಿವಾರ (ಏಪ್ರಿಲ್​ 9) ಮಹೇಶ್​ ಬಾಬು (Mahesh Babu) ಜತೆಗಿನ ಫೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು. ಈ ಫೋಟೋಗಳು ಅವರ ಅಭಿಮಾನಿ ಬಳಗದಲ್ಲಿ ಸಖತ್​ ವೈರಲ್ ಆಗಿತ್ತು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದೇಕೆ ಎನ್ನುವ ಪ್ರಶ್ನೆಗೆ ಮೇಘಾ ಶೆಟ್ಟಿ ಅವರು ಪೋಸ್ಟ್​ನಲ್ಲಿ ಉತ್ತರ ನೀಡಿರಲಿಲ್ಲ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಸಖತ್ ಖುಷಿಪಟ್ಟರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದೇಕೆ ಎಂಬ ಪ್ರಶ್ನೆಗೆ ‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial)  ನಟಿ ಉತ್ತರಿಸಿದ್ದಾರೆ.

ಸಾಮಾನ್ಯವಾಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡ ನಟ-ನಟಿಯರು ಒಟ್ಟಾಗಿ ಫೋಟೋಗೆ ಪೋಸ್​​ ನೀಡಿದರೆ ಸಾಕು, ಹೊಸ ಸಿನಿಮಾ ಬಗ್ಗೆ ವದಂತಿ ಹುಟ್ಟಿಕೊಳ್ಳುತ್ತದೆ. ಮಹೇಶ್ ಬಾಬು ಅವರನ್ನು ಮೇಘಾ ಶೆಟ್ಟಿ ಭೇಟಿ ಮಾಡಿದ್ದು ಸಿನಿಮಾ ಉದ್ದೇಶಕ್ಕೆ ಇರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದರು. ಆದರೆ, ಆ ರೀತಿ ಏನು ಇಲ್ಲ. ‘ಜಾಹೀರಾತೊಂದಕ್ಕಾಗಿ ನಾನು ಅವರನ್ನು ಭೇಟಿ ಮಾಡಿದ್ದೆ’ ಎಂದು ಮೇಘಾ ಶೆಟ್ಟಿ ಟಿವಿ9 ಕನ್ನಡ ಡಿಜಿಟಲ್​ಗೆ ತಿಳಿಸಿದ್ದಾರೆ.

ಮೇಘಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ 9.8 ಲಕ್ಷ ಹಿಂಬಾಲಕರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅಭಿಮಾನಿಗಳ ಜತೆ ಚರ್ಚೆ ನಡೆಸುವ ಅವರು, ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡುತ್ತಾರೆ.

ನಿರ್ಮಾಣದಲ್ಲೂ ಬ್ಯುಸಿ ಆದ ಮೇಘಾ

‘ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಿಂದ ಮೇಘಾ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಇದಲ್ಲದೆ, ಹಿರಿ ತೆರೆಯಿಂದಲೂ ಮೇಘಾಗೆ ಬೇಡಿಕೆ ಬರುತ್ತಿದ್ದು, ಕೆಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಮೇಘಾ ಶೆಟ್ಟಿಗೆ ನಿರ್ಮಾಣಕ್ಕೆ ಇಳಿದಿದ್ದಾರೆ. ‘ಕೆಂಡಸಂಪಿಗೆ’ ಎಂಬ ಧಾರಾವಾಹಿ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಮೇಘಾ ಶೆಟ್ಟಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:  ಮಹೇಶ್ ಬಾಬು ಜತೆ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ; ಗುಟ್ಟು ಬಿಟ್ಟುಕೊಡದ ನಟಿ

ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ