AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ

ಮಹೇಶ್ ಬಾಬು ಅವರನ್ನು ಮೇಘಾ ಶೆಟ್ಟಿ ಭೇಟಿ ಮಾಡಿದ್ದು ಸಿನಿಮಾ ಉದ್ದೇಶಕ್ಕೆ ಇರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದರು. ಆದರೆ, ಆ ರೀತಿ ಏನು ಇಲ್ಲ

Megha Shetty: ಮಹೇಶ್ ಬಾಬು ಭೇಟಿ ಹಿಂದಿನ ಉದ್ದೇಶ ತಿಳಿಸಿದ ನಟಿ ಮೇಘಾ ಶೆಟ್ಟಿ
ಮೇಘಾ ಶೆಟ್ಟಿ-ಮಹೇಶ್ ಬಾಬು
TV9 Web
| Edited By: |

Updated on: Apr 10, 2022 | 2:54 PM

Share

ಮೇಘಾ ಶೆಟ್ಟಿ (Megha Shetty) ಅವರು ಶನಿವಾರ (ಏಪ್ರಿಲ್​ 9) ಮಹೇಶ್​ ಬಾಬು (Mahesh Babu) ಜತೆಗಿನ ಫೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು. ಈ ಫೋಟೋಗಳು ಅವರ ಅಭಿಮಾನಿ ಬಳಗದಲ್ಲಿ ಸಖತ್​ ವೈರಲ್ ಆಗಿತ್ತು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದೇಕೆ ಎನ್ನುವ ಪ್ರಶ್ನೆಗೆ ಮೇಘಾ ಶೆಟ್ಟಿ ಅವರು ಪೋಸ್ಟ್​ನಲ್ಲಿ ಉತ್ತರ ನೀಡಿರಲಿಲ್ಲ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಸಖತ್ ಖುಷಿಪಟ್ಟರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದೇಕೆ ಎಂಬ ಪ್ರಶ್ನೆಗೆ ‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial)  ನಟಿ ಉತ್ತರಿಸಿದ್ದಾರೆ.

ಸಾಮಾನ್ಯವಾಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡ ನಟ-ನಟಿಯರು ಒಟ್ಟಾಗಿ ಫೋಟೋಗೆ ಪೋಸ್​​ ನೀಡಿದರೆ ಸಾಕು, ಹೊಸ ಸಿನಿಮಾ ಬಗ್ಗೆ ವದಂತಿ ಹುಟ್ಟಿಕೊಳ್ಳುತ್ತದೆ. ಮಹೇಶ್ ಬಾಬು ಅವರನ್ನು ಮೇಘಾ ಶೆಟ್ಟಿ ಭೇಟಿ ಮಾಡಿದ್ದು ಸಿನಿಮಾ ಉದ್ದೇಶಕ್ಕೆ ಇರಬಹುದು ಎಂದು ಕೆಲ ಅಭಿಮಾನಿಗಳು ಊಹಿಸಿದ್ದರು. ಆದರೆ, ಆ ರೀತಿ ಏನು ಇಲ್ಲ. ‘ಜಾಹೀರಾತೊಂದಕ್ಕಾಗಿ ನಾನು ಅವರನ್ನು ಭೇಟಿ ಮಾಡಿದ್ದೆ’ ಎಂದು ಮೇಘಾ ಶೆಟ್ಟಿ ಟಿವಿ9 ಕನ್ನಡ ಡಿಜಿಟಲ್​ಗೆ ತಿಳಿಸಿದ್ದಾರೆ.

ಮೇಘಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ 9.8 ಲಕ್ಷ ಹಿಂಬಾಲಕರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ಸಮಯ ಸಿಕ್ಕಾಗಲೆಲ್ಲ ಅಭಿಮಾನಿಗಳ ಜತೆ ಚರ್ಚೆ ನಡೆಸುವ ಅವರು, ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡುತ್ತಾರೆ.

ನಿರ್ಮಾಣದಲ್ಲೂ ಬ್ಯುಸಿ ಆದ ಮೇಘಾ

‘ಜೀ ಕನ್ನಡದಲ್ಲಿ ಪ್ರಸಾರ ಆಗುವ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಹೆಸರಿನ ಪಾತ್ರದಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಿಂದ ಮೇಘಾ ಶೆಟ್ಟಿಗೆ ಬೇಡಿಕೆ ಹೆಚ್ಚಿದೆ. ಇದಲ್ಲದೆ, ಹಿರಿ ತೆರೆಯಿಂದಲೂ ಮೇಘಾಗೆ ಬೇಡಿಕೆ ಬರುತ್ತಿದ್ದು, ಕೆಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಮೇಘಾ ಶೆಟ್ಟಿಗೆ ನಿರ್ಮಾಣಕ್ಕೆ ಇಳಿದಿದ್ದಾರೆ. ‘ಕೆಂಡಸಂಪಿಗೆ’ ಎಂಬ ಧಾರಾವಾಹಿ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಮೇಘಾ ಶೆಟ್ಟಿ ಅವರೇ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:  ಮಹೇಶ್ ಬಾಬು ಜತೆ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ; ಗುಟ್ಟು ಬಿಟ್ಟುಕೊಡದ ನಟಿ

ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!