Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಜಕ್ಕೂ ಅದು ಅನಿರೀಕ್ಷಿತವಾಗಿತ್ತು’; ಖುಷಿಯಿಂದ ಎಲ್ಲವನ್ನೂ ಹೇಳಿಕೊಂಡ ಮೇಘನಾ ರಾಜ್​

‘ನನ್ನಮ್ಮ ಸೂಪರ್​ ಸ್ಟಾರ್’​ ಹಾಗೂ ‘ಡಾನ್ಸಿಂಗ್ ಚಾಂಪಿಯನ್’ ಸಮ್ಮಿಲನದಲ್ಲಿ ಮಹಾ ಸಂಚಿಕೆ ಇಂದು (ಜನವರಿ 30) ಪ್ರಸಾರವಾಗಿದೆ. ಎರಡೂ ಶೋನ ಸ್ಪರ್ಧಿಗಳು ಒಂದೇ ವೇದಿಕೆ ಮೇಲೆ ಬಂದಿದ್ದರು. ಇದರಿಂದ ವೀಕ್ಷಕರಿಗೆ ಸಾಕಷ್ಟು ಮನರಂಜನೆ ಸಿಕ್ಕಿದೆ.

‘ನಿಜಕ್ಕೂ ಅದು ಅನಿರೀಕ್ಷಿತವಾಗಿತ್ತು’; ಖುಷಿಯಿಂದ ಎಲ್ಲವನ್ನೂ ಹೇಳಿಕೊಂಡ ಮೇಘನಾ ರಾಜ್​
ಮೇಘನಾ ರಾಜ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 30, 2022 | 9:36 PM

ನಟಿ ಮೇಘನಾ ರಾಜ್ ( Meghana Raj)​ ಪಾಲಿಗೆ 2020 ತುಂಬಾನೇ ಕರಾಳವಾಗಿತ್ತು. ಅವರ ಪತಿ ಚಿರಂಜೀವಿ ಸರ್ಜಾ (Chiranjeevi Sarja) ನಿಧನ ಹೊಂದಿದ್ದರು. ಇದು ಅವರಿಗೆ ಆಘಾತ ತಂದಿತ್ತು. ಈ ಘಟನೆ ನಡೆದು ಒಂದೂವರೆ ವರ್ಷದ ಮೇಲಾಗಿದೆ. ಆ ನೋವಿನ ಜತೆಯಲ್ಲಿ ಜೀವನ ಸಾಗಿಸುವುದನ್ನು ಮೇಘನಾ ರೂಢಿಸಿಕೊಂಡಿದ್ದಾರೆ. ಅವರು ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡಿದ್ದಾರೆ. ಮೇಘನಾ ಗೆಳೆಯ ಪನ್ನಗ ಭರಣ ನಿರ್ಮಾಣ ಮಾಡುತ್ತಿರುವ ಇನ್ನೂ ಹೆಸರಿಡದ ಚಿತ್ರಕ್ಕೆ ಅವರು ನಾಯಕಿ. ಇದರ ಜತೆಗೆ ಕಿರುತೆರೆ ಜಡ್ಜ್​ ಆಗಿಯೂ ಅವರು ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕಿರುತೆರೆ ಲೋಕಕ್ಕೆ ಕಾಲಿಟ್ಟಿದ್ದಾರೆ. ಇದು ನಿಜಕ್ಕೂ ಅನಿರೀಕ್ಷಿತವಾಗಿತ್ತು ಎಂದಿದ್ದಾರೆ ಮೇಘನಾ.

ಕಲರ್ಸ್​ ಕನ್ನಡ ವಾಹಿನಿಯ ಇನ್​ಸ್ಟಾಗ್ರಾಮ್​ನಲ್ಲಿ ಮೇಘನಾ ರಾಜ್​ ಲೈವ್​ ಬಂದಿದ್ದರು. ಈ ವೇಳೆ ಅವರು ಈ ವಿಚಾರ ಹಂಚಿಕೊಂಡಿದ್ದಾರೆ. ‘ನಾನು ಮೊದಲ ಬಾರಿಗೆ ರಿಯಾಲಿಟಿ ಶೋ ಜಡ್ಜ್​ ಆಗಿದ್ದೇನೆ. ಇದು ಅನಿರೀಕ್ಷಿತವಾಗಿತ್ತು. ‘ಡಾನ್ಸಿಂಗ್ ಚಾಂಪಿಯನ್’ ರಿಯಾಲಿಟಿ ಶೋನ ಓಪನಿಂಗ್​ ಸಂಚಿಕೆಗೆ ನಾನು ಅತಿಥಿ ಜಡ್ಜ್​ ಆಗಿದ್ದೆ. ಆ ಬಳಿಕ ಈ ಶೋಗೆ ಪರ್ಮನೆಂಟ್​ ಜಡ್ಜ್​ ಆಗುತ್ತೇನೆ ಎಂದು ಊಹಿಸಿರಲಿಲ್ಲ. ನೀವು ಕಂಬ್ಯಾಕ್​ ಮಾಡಿ ಎಂದು ಕೋರಿಕೊಂಡ್ರಿ. ಆ ಕೋರಿಕೆಯನ್ನು ಈಡೇರಿಸಿದ್ದೇನೆ’ ಎಂದಿದ್ದಾರೆ ಮೇಘನಾ.

‘ಕಲರ್ಸ್​ ಕನ್ನಡ ಸೆಟ್​ನಲ್ಲಿ ಪಾಸಿಟಿವ್​ ವೈಬ್​ ಇದೆ. ನಾಲ್ಕು ಎಪಿಸೋಡ್​ ಮುಗಿದಿದೆ. ಎಲ್ಲಾ ಸ್ಪರ್ಧಿಗಳ ಜತೆ ಒಂದೊಳ್ಳೆಯ ಬಾಂಡಿಂಗ್​ ಬೆಳೆದಿದೆ. ಈ ಶೋಗೆ ನಾನು ಜಡ್ಜ್​ ಆಗಿರುವುದಕ್ಕೆ ತುಂಬಾನೇ ಹೆಮ್ಮೆ ಇದೆ. ನಾನು ಜಡ್ಜ್​ ಆಗಿ ಡ್ಯಾನ್ಸ್​ ಅನ್ನು ಇಷ್ಟಪಡ್ತೀನಿ. ಒಂದು ವೇದಿಕೆಗೆ ಹೋಗಿ ಡ್ಯಾನ್ಸ್​ ಎಂಜಾಯ್​​ ಮಾಡಿ ತುಂಬಾ ಸಮಯ ಆಗಿತ್ತು. ಅದು ಇಲ್ಲಿ ಈಡೇರಿದೆ. ನನಗೆ ಡ್ಯಾನ್ಸ್​ ಮಾಡಬೇಕು ಎನ್ನುವ ಆಸೆ ಇದೆ. ಆದರೆ, ಅದನ್ನು ಹಿಡಿದಿಟ್ಟುಕೊಂಡಿದ್ದೇನೆ ಎಂದಿದ್ದಾರೆ ಅವರು.

‘ನನ್ನಮ್ಮ ಸೂಪರ್​ ಸ್ಟಾರ್’​ ಹಾಗೂ ‘ಡಾನ್ಸಿಂಗ್ ಚಾಂಪಿಯನ್’ ಸಮ್ಮಿಲನದಲ್ಲಿ ಮಹಾ ಸಂಚಿಕೆ ಇಂದು (ಜನವರಿ 30) ಪ್ರಸಾರವಾಗಿದೆ. ಎರಡೂ ಶೋನ ಸ್ಪರ್ಧಿಗಳು ಒಂದೇ ವೇದಿಕೆ ಮೇಲೆ ಬಂದಿದ್ದರು. ಇದರಿಂದ ವೀಕ್ಷಕರಿಗೆ ಸಾಕಷ್ಟು ಮನರಂಜನೆ ಸಿಕ್ಕಿದೆ. ಈ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನ್ನು ಆಡುತ್ತಿದ್ದಾರೆ. ಪನ್ನಗ ಭರಣ ನಿರ್ಮಾಣದ ಹೊಸ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ಇದರ ಜತೆಗೆ ‘ಶಬ್ದ’ ಹೆಸರಿನ ಹೊಸ ಸಿನಿಮಾದಲ್ಲಿ ಮೇಘನಾ ಬಣ್ಣ ಹಚ್ಚುತ್ತಿದ್ದಾರೆ. ಈ ಬಗ್ಗೆ ಇಂದು ಅವರು ಲೈವ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಡಾನ್ಸಿಂಗ್​ ಚಾಂಪಿಯನ್​ ಶೋನಲ್ಲಿ ಚಿರು-ರಾಯನ್​ ಬಗ್ಗೆ ಮೇಘನಾ ರಾಜ್​ ಸರ್ಜಾ ಹೃದಯಸ್ಪರ್ಶಿ ಮಾತು

ಹೇಗೆ ಸಾಗ್ತಿದೆ ಮೇಘನಾ ರಾಜ್​ ಕಮ್​ಬ್ಯಾಕ್​ ಜರ್ನಿ? ವಿಡಿಯೋ ಮೂಲಕ ಖುಷಿ ಹಂಚಿಕೊಂಡ ನಟಿ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ