AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ

ಒಂದಷ್ಟು ದಿನ ಮೈಕೆಲ್​ ಅಜಯ್​​ ಮತ್ತು ಈಶಾನಿ ಅವರು ದೊಡ್ಮನೆಯಲ್ಲಿ ಒಟ್ಟೊಟ್ಟಿಗೆ ಕಾಲ ಕಳೆದರು. ಆದರೆ ನಂತರದಲ್ಲಿ ಇಬ್ಬರ ನಡುವೆ ಮೈಮನಸ್ಸು ಮೂಡಲು ಆರಂಭ ಆಯಿತು. ಅಂತಿಮವಾಗಿ ಅವರು ಬ್ರೇಕಪ್​ ಮಾಡಿಕೊಂಡಿದ್ದಾರೆ. ಇದರಿಂದ ಬಿಗ್ ಬಾಸ್​ ಮನೆ ಬಿಟ್ಟು ಹೊರಗೆ ಬರಬೇಕು ಎಂಬಷ್ಟರಮಟ್ಟಿಗೆ ಈಶಾನಿಗೆ ನೋವಾಗಿದೆ.

ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ
ಮೈಕೆಲ್​ ಅಜಯ್​, ಈಶಾನಿ, ವಿನಯ್​ ಗೌಡ
ಮದನ್​ ಕುಮಾರ್​
|

Updated on: Nov 13, 2023 | 10:40 PM

Share

ಬಿಗ್​ ಬಾಸ್ (Bigg Boss Kannada)​ ಮನೆಯಲ್ಲಿ ಸಂಬಂಧಗಳು ಬೆಳೆಯುತ್ತವೆ. ಹಾಗೆಯೇ, ಬೆಳೆದ ಸಂಬಂಧಗಳು ಮುರಿದುಹೋಗುತ್ತವೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಮೈಕೆಲ್​ ಅಜಯ್​ ಮತ್ತು ಈಶಾನಿ (Eshani) ನಡುವೆ ಪ್ರೀತಿ ಹುಟ್ಟಿತ್ತು. ಆದರೆ ಆ ಪ್ರೀತಿ ಈಗ ಬ್ರೇಕಪ್​ನಲ್ಲಿ ಅಂತ್ಯವಾಗಿದೆ. ಮೈಕೆಲ್​ (Michael Ajay) ಬ್ರೇಕಪ್​ ಮಾಡಿಕೊಂಡಿದ್ದಕ್ಕೆ ಈಶಾನಿ ಅವರು ಕಣ್ಣೀರು ಹಾಕಿದ್ದಾರೆ. ಅವರಿಗೆ ತುಂಬ ನೋವಾಗಿದೆ. ಬಿಗ್​ ಬಾಸ್​ ಮನೆ ಬಿಟ್ಟು ಹೋಗುವುದಾಗಿಯೂ ಈಶಾನಿ ಹೇಳಿದ್ದಾರೆ. ಇದನ್ನೆಲ್ಲ ಕೇಳಿಸಿಕೊಂಡ ವಿನಯ್​ ಗೌಡ ಅವರಿಗೆ ಕೋಪ ಬಂದಿದೆ. ಅಳುತ್ತಿದ್ದ ಈಶಾನಿಗೆ ವಿನಯ್​ ಗೌಡ ಬೈಯ್ದು ಬುದ್ಧಿ ಹೇಳಿದ್ದಾರೆ.

ಈಶಾನಿಯನ್ನು ವಿನಯ್​ ಗೌಡ ಅವರು ತಂಗಿ ಎಂದು ಈ ಮೊದಲೇ ಕರೆದಿದ್ದರು. ಹಾಗಾಗಿ ಈಶಾನಿಯ ಬಗ್ಗೆ ಅವರು ಕಾಳಜಿ ವಹಿಸಿದ್ದಾರೆ. ಮೊದಲು ಮೈಕೆಲ್​ ಜೊತೆ ಈಶಾನಿಗೆ ಲವ್​ ಆಗಿದೆ ಎಂಬುದು ತಿಳಿದಾಗಲೂ ಅವರು ಖುಷಿಪಟ್ಟಿದ್ದರು. ಆದರೆ ಈಗ ಈಶಾನಿ ಬ್ರೇಕಪ್​ ಮಾಡಿಕೊಂಡು ಅಳುತ್ತಿರುವುದು ವಿನಯ್​ಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ಬುದ್ಧಿ ಹೇಳಿ ಸರಿಯಾದ ದಾರಿಗೆ ತರುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: Bigg Boss Kannada: ‘ಡ್ರೋನ್​ ಪ್ರತಾಪ್​ ಹೀರೋ, ವಿನಯ್​ ಗೌಡ ವಿಲನ್​’; ಸ್ಪರ್ಧಿಗಳ ವರ್ತನೆ ಬಗ್ಗೆ ಮುಲಾಜಿಲ್ಲದೇ ಮಾತಾಡಿದ ಸುದೀಪ್​

ಒಂದಷ್ಟು ದಿನ ಮೈಕೆಲ್​ ಅಜಯ್​​ ಮತ್ತು ಈಶಾನಿ ಅವರು ಒಟ್ಟೊಟ್ಟಿಗೆ ಕಾಲ ಕಳೆದರು. ಆದರೆ ನಂತರದಲ್ಲಿ ಇಬ್ಬರ ನಡುವೆ ಮೈಮನಸ್ಸು ಮೂಡಲು ಆರಂಭ ಆಯಿತು. ಈಶಾನಿಯನ್ನು ಸೈಕೋ ಎಂದು ಕೂಡ ಮೈಕಲ್​ ಕರೆದಿದ್ದರು. ‘ನನಗೆ ನೀನು ಭಾವನಾತ್ಮಕವಾಗಿ ಬೆಂಬಲ ನೀಡುತ್ತಿಲ್ಲ’ ಎಂದು ಕೂಡ ಈಶಾನಿ ಕಣ್ಣೀರು ಹಾಕಿದ್ದರು. ಈಗ ಅವರು ಮೈಕಲ್​ ಜೊತೆ ಬ್ರೇಕಪ್​ ಮಾಡಿಕೊಂಡು, ಆ ನೋವಿನಲ್ಲಿ ‘ಬಿಗ್​ ಬಾಸ್​’ ಮನೆಯಿಂದಲೇ ಹೊರಗೆ ಹೋಗೋಕೆ ನಿರ್ಧರಿಸಿದ್ದಾರೆ. ಆದರೆ ಅದಕ್ಕೆ ವಿನಯ್​ ಗೌಡ ಅವಕಾಶ ಮಾಡಿಕೊಟ್ಟಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನೈಜೀರಿಯಾ ಕನ್ನಡಿಗ ಮೈಕೆಲ್​ ಅಜಯ್​; ಏನು ಇವರ ಹಿನ್ನೆಲೆ?

ಈಶಾನಿ ಅಂದುಕೊಂಡಿರುವ ಪ್ರೀತಿ ನಿಜವಾದ ಪ್ರೀತಿಯೇ ಅಲ್ಲ. ಮೈಕೆಲ್​ ಏನು ಎಂಬುದು ಈಶಾನಿಗೆ ಸರಿಯಾಗಿ ತಿಳಿದೇ ಇಲ್ಲ. ತಾವು ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶ ಏನು ಎಂಬುದೇ ಈಶಾನಿಗೆ ಮರೆತು ಹೋಗಿದೆ. ಈ ಎಲ್ಲ ವಿಚಾರಗಳನ್ನು ಮೈಕೆಲ್​ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ. ವಿನಯ್​ ಹೇಳಿದ ಮಾತು ಕೇಳಿ ಈಶಾನಿಗೆ ಹೌದು ಎನಿಸಿದೆ. ಇನ್ಮೇಲೆ ಟಾಸ್ಕ್​ ಮೇಲೆ ಪೂರ್ತಿ ಗಮನ ನೀಡುವುದಾಗಿ ಈಶಾನಿ ಹೇಳಿದ್ದಾರೆ. ಇನ್ಮುಂದೆ ಈಶಾನಿ ಮತ್ತು ಮೈಕೆಲ್​ ನಡುವಿನ ಸಂಬಂಧ ಹೇಗೆ ಇರಲಿದೆ ಎಂಬುದನ್ನು ಕಾದು ನೋಡಬೇಕು. ಕಲರ್ಸ್​ ಕನ್ನಡದಲ್ಲಿ ಪ್ರತಿ ರಾತ್ರಿ 9.30ಕ್ಕೆ ಎಪಿಸೋಡ್​ ಪ್ರಸಾರ ಆಗುತ್ತಿದೆ. 24 ಗಂಟೆಯೂ ‘ಜಿಯೋ ಸಿನಿಮಾ’ ಮೂಲಕ ಉಚಿತವಾಗಿ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು