AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ

ಒಂದಷ್ಟು ದಿನ ಮೈಕೆಲ್​ ಅಜಯ್​​ ಮತ್ತು ಈಶಾನಿ ಅವರು ದೊಡ್ಮನೆಯಲ್ಲಿ ಒಟ್ಟೊಟ್ಟಿಗೆ ಕಾಲ ಕಳೆದರು. ಆದರೆ ನಂತರದಲ್ಲಿ ಇಬ್ಬರ ನಡುವೆ ಮೈಮನಸ್ಸು ಮೂಡಲು ಆರಂಭ ಆಯಿತು. ಅಂತಿಮವಾಗಿ ಅವರು ಬ್ರೇಕಪ್​ ಮಾಡಿಕೊಂಡಿದ್ದಾರೆ. ಇದರಿಂದ ಬಿಗ್ ಬಾಸ್​ ಮನೆ ಬಿಟ್ಟು ಹೊರಗೆ ಬರಬೇಕು ಎಂಬಷ್ಟರಮಟ್ಟಿಗೆ ಈಶಾನಿಗೆ ನೋವಾಗಿದೆ.

ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ
ಮೈಕೆಲ್​ ಅಜಯ್​, ಈಶಾನಿ, ವಿನಯ್​ ಗೌಡ
ಮದನ್​ ಕುಮಾರ್​
|

Updated on: Nov 13, 2023 | 10:40 PM

Share

ಬಿಗ್​ ಬಾಸ್ (Bigg Boss Kannada)​ ಮನೆಯಲ್ಲಿ ಸಂಬಂಧಗಳು ಬೆಳೆಯುತ್ತವೆ. ಹಾಗೆಯೇ, ಬೆಳೆದ ಸಂಬಂಧಗಳು ಮುರಿದುಹೋಗುತ್ತವೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಮೈಕೆಲ್​ ಅಜಯ್​ ಮತ್ತು ಈಶಾನಿ (Eshani) ನಡುವೆ ಪ್ರೀತಿ ಹುಟ್ಟಿತ್ತು. ಆದರೆ ಆ ಪ್ರೀತಿ ಈಗ ಬ್ರೇಕಪ್​ನಲ್ಲಿ ಅಂತ್ಯವಾಗಿದೆ. ಮೈಕೆಲ್​ (Michael Ajay) ಬ್ರೇಕಪ್​ ಮಾಡಿಕೊಂಡಿದ್ದಕ್ಕೆ ಈಶಾನಿ ಅವರು ಕಣ್ಣೀರು ಹಾಕಿದ್ದಾರೆ. ಅವರಿಗೆ ತುಂಬ ನೋವಾಗಿದೆ. ಬಿಗ್​ ಬಾಸ್​ ಮನೆ ಬಿಟ್ಟು ಹೋಗುವುದಾಗಿಯೂ ಈಶಾನಿ ಹೇಳಿದ್ದಾರೆ. ಇದನ್ನೆಲ್ಲ ಕೇಳಿಸಿಕೊಂಡ ವಿನಯ್​ ಗೌಡ ಅವರಿಗೆ ಕೋಪ ಬಂದಿದೆ. ಅಳುತ್ತಿದ್ದ ಈಶಾನಿಗೆ ವಿನಯ್​ ಗೌಡ ಬೈಯ್ದು ಬುದ್ಧಿ ಹೇಳಿದ್ದಾರೆ.

ಈಶಾನಿಯನ್ನು ವಿನಯ್​ ಗೌಡ ಅವರು ತಂಗಿ ಎಂದು ಈ ಮೊದಲೇ ಕರೆದಿದ್ದರು. ಹಾಗಾಗಿ ಈಶಾನಿಯ ಬಗ್ಗೆ ಅವರು ಕಾಳಜಿ ವಹಿಸಿದ್ದಾರೆ. ಮೊದಲು ಮೈಕೆಲ್​ ಜೊತೆ ಈಶಾನಿಗೆ ಲವ್​ ಆಗಿದೆ ಎಂಬುದು ತಿಳಿದಾಗಲೂ ಅವರು ಖುಷಿಪಟ್ಟಿದ್ದರು. ಆದರೆ ಈಗ ಈಶಾನಿ ಬ್ರೇಕಪ್​ ಮಾಡಿಕೊಂಡು ಅಳುತ್ತಿರುವುದು ವಿನಯ್​ಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ಬುದ್ಧಿ ಹೇಳಿ ಸರಿಯಾದ ದಾರಿಗೆ ತರುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: Bigg Boss Kannada: ‘ಡ್ರೋನ್​ ಪ್ರತಾಪ್​ ಹೀರೋ, ವಿನಯ್​ ಗೌಡ ವಿಲನ್​’; ಸ್ಪರ್ಧಿಗಳ ವರ್ತನೆ ಬಗ್ಗೆ ಮುಲಾಜಿಲ್ಲದೇ ಮಾತಾಡಿದ ಸುದೀಪ್​

ಒಂದಷ್ಟು ದಿನ ಮೈಕೆಲ್​ ಅಜಯ್​​ ಮತ್ತು ಈಶಾನಿ ಅವರು ಒಟ್ಟೊಟ್ಟಿಗೆ ಕಾಲ ಕಳೆದರು. ಆದರೆ ನಂತರದಲ್ಲಿ ಇಬ್ಬರ ನಡುವೆ ಮೈಮನಸ್ಸು ಮೂಡಲು ಆರಂಭ ಆಯಿತು. ಈಶಾನಿಯನ್ನು ಸೈಕೋ ಎಂದು ಕೂಡ ಮೈಕಲ್​ ಕರೆದಿದ್ದರು. ‘ನನಗೆ ನೀನು ಭಾವನಾತ್ಮಕವಾಗಿ ಬೆಂಬಲ ನೀಡುತ್ತಿಲ್ಲ’ ಎಂದು ಕೂಡ ಈಶಾನಿ ಕಣ್ಣೀರು ಹಾಕಿದ್ದರು. ಈಗ ಅವರು ಮೈಕಲ್​ ಜೊತೆ ಬ್ರೇಕಪ್​ ಮಾಡಿಕೊಂಡು, ಆ ನೋವಿನಲ್ಲಿ ‘ಬಿಗ್​ ಬಾಸ್​’ ಮನೆಯಿಂದಲೇ ಹೊರಗೆ ಹೋಗೋಕೆ ನಿರ್ಧರಿಸಿದ್ದಾರೆ. ಆದರೆ ಅದಕ್ಕೆ ವಿನಯ್​ ಗೌಡ ಅವಕಾಶ ಮಾಡಿಕೊಟ್ಟಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನೈಜೀರಿಯಾ ಕನ್ನಡಿಗ ಮೈಕೆಲ್​ ಅಜಯ್​; ಏನು ಇವರ ಹಿನ್ನೆಲೆ?

ಈಶಾನಿ ಅಂದುಕೊಂಡಿರುವ ಪ್ರೀತಿ ನಿಜವಾದ ಪ್ರೀತಿಯೇ ಅಲ್ಲ. ಮೈಕೆಲ್​ ಏನು ಎಂಬುದು ಈಶಾನಿಗೆ ಸರಿಯಾಗಿ ತಿಳಿದೇ ಇಲ್ಲ. ತಾವು ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶ ಏನು ಎಂಬುದೇ ಈಶಾನಿಗೆ ಮರೆತು ಹೋಗಿದೆ. ಈ ಎಲ್ಲ ವಿಚಾರಗಳನ್ನು ಮೈಕೆಲ್​ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ. ವಿನಯ್​ ಹೇಳಿದ ಮಾತು ಕೇಳಿ ಈಶಾನಿಗೆ ಹೌದು ಎನಿಸಿದೆ. ಇನ್ಮೇಲೆ ಟಾಸ್ಕ್​ ಮೇಲೆ ಪೂರ್ತಿ ಗಮನ ನೀಡುವುದಾಗಿ ಈಶಾನಿ ಹೇಳಿದ್ದಾರೆ. ಇನ್ಮುಂದೆ ಈಶಾನಿ ಮತ್ತು ಮೈಕೆಲ್​ ನಡುವಿನ ಸಂಬಂಧ ಹೇಗೆ ಇರಲಿದೆ ಎಂಬುದನ್ನು ಕಾದು ನೋಡಬೇಕು. ಕಲರ್ಸ್​ ಕನ್ನಡದಲ್ಲಿ ಪ್ರತಿ ರಾತ್ರಿ 9.30ಕ್ಕೆ ಎಪಿಸೋಡ್​ ಪ್ರಸಾರ ಆಗುತ್ತಿದೆ. 24 ಗಂಟೆಯೂ ‘ಜಿಯೋ ಸಿನಿಮಾ’ ಮೂಲಕ ಉಚಿತವಾಗಿ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ