AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಡಲ್ಲಿ ಓಡಾಡೋಕೆ ಆಗ್ತಿಲ್ಲ’; ಬಿಗ್ ಬಾಸ್​ಗೆ ಬಂದು ಸಮಸ್ಯೆ ಹೇಳಿಕೊಂಡ ಮೈಕಲ್

ಎಲಿಮಿನೇಟ್ ಆದ ಸ್ಪರ್ಧಿಗಳು ದೊಡ್ಮನೆಗೆ ಮರಳಿದ್ದಾರೆ. ಮೈಕಲ್ ಆಗಮಿಸುತ್ತಿದ್ದಂತೆ ಇಡೀ ಮನೆಯವರು ಖುಷಿಯಿಂದ ಕುಪ್ಪಳಿಸಿದರು. ‘ಮೈಕಲ್ ರೆಸ್ಪಾನ್ಸ್ ಹೇಗಿದೆ? ನಾರ್ಮಲ್ ಆಗಿ ಓಡಾಬಹುದಾ’ ಎಂದು ನಮ್ರತಾ ಕೇಳಿದರು. ಇದಕ್ಕೆ ಅವರು ಉತ್ತರಿಸಿದ್ದಾರೆ.

‘ರೋಡಲ್ಲಿ ಓಡಾಡೋಕೆ ಆಗ್ತಿಲ್ಲ’; ಬಿಗ್ ಬಾಸ್​ಗೆ ಬಂದು ಸಮಸ್ಯೆ ಹೇಳಿಕೊಂಡ ಮೈಕಲ್
ಮೈಕಲ್ ಅಜಯ್
ರಾಜೇಶ್ ದುಗ್ಗುಮನೆ
|

Updated on: Jan 17, 2024 | 7:34 AM

Share

‘ಬಿಗ್ ಬಾಸ್’ನಿಂದ ಮೈಕಲ್ ಅಜಯ್ (Michael Ajay) ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಈ ಮೊದಲು ಅವರು ಯಾರು ಎಂಬುದು ಅನೇಕರಿಗೆ ಗೊತ್ತೇ ಇರಲಿಲ್ಲ. ಆದರೆ, ಈಗ ಅವರ ಖ್ಯಾತಿ ಕರ್ನಾಟಕದಾದ್ಯಂತ ಹಬ್ಬಿದೆ. ಅವರನ್ನು ಎಲ್ಲರೂ ಗುರುತಿಸುತ್ತಾರೆ. ಮೊದಲೆಲ್ಲ ಇವರು ಯಾವುದೋ ಆಫ್ರಿಕಾ ದೇಶದ ಪ್ರಜೆ ಇರಬಹುದು ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದರು. ಆದರೆ, ಈಗ ‘ಮಣ್ಣಿನ ಮಗ’ ಎಂದು ಅವರನ್ನು ಪ್ರೀತಿಯಿಂದ ಕರೆಯುತ್ತಾರೆ. ಬಿಗ್ ಬಾಸ್ ಮನೆಯಲ್ಲಿ ಈ ಬಗ್ಗೆ ಮೈಕಲ್ ಅವರು ಹೇಳಿಕೊಂಡಿದ್ದಾರೆ.

ಮೈಕಲ್ ಅಜಯ್ ನೈಜೀರಿಯಾ ಕನ್ನಡಿಗ. ಅಜ್ಜಿಯಿಂದ ಕನ್ನಡ ಮಾತನಾಡುವುದನ್ನು ಕಲಿತರು. ಅವರು ಬಿಗ್ ಬಾಸ್​ಗೆ ಬಂದಾಗ ಕನ್ನಡ ಮಾತನಾಡುವುದೇ ಒಂದು ಚಾಲೆಂಜ್ ಆಗಿತ್ತು. ಆದರೆ, ಅವರು ಹಿಂಜರಿಯಲಿಲ್ಲ. ಕಷ್ಟಪಟ್ಟು ಕನ್ನಡ ಮಾತನಾಡಿದರು. ಎಲ್ಲ ಕಡೆಗಳಲ್ಲಿ ಕನ್ನಡ ಬಳಕೆ ಮಾಡಿದರು. ಇದರಿಂದ ಅವರು ಅನೇಕರಿಗೆ ಇಷ್ಟ ಆದರು. ಹಳ್ಳಿ ಟಾಸ್ಕ್​ನಲ್ಲಿ ಮೈಕಲ್ ಎದುರಾಳಿ ತಂಡದವರು ‘ಮಣ್ಣಿನ ಮಗ’ ಎಂದು ತಂಡಕ್ಕೆ ಹೆಸರು ಇಟ್ಟುಕೊಂಡಿದ್ದರು. ಈ ವೇಳೆ ಮೈಕಲ್ ‘ಅವರು ಮಣ್ಣಿನ ಮಗನೋ ಅಥವಾ ನಾನೋ’ ಎಂದು ಕೇಳಿದ್ದರು. ಅಲ್ಲಿಂದ ಎಲ್ಲರೂ ಮೈಕಲ್​ನ ಮಣ್ಣಿನ ಮಗ ಎಂದು ಕರೆಯುತ್ತಾ ಬಂದರು.

ಜನವರಿ 16ರ ಎಪಿಸೋಡ್​ನಲ್ಲಿ ಬಿಗ್ ಬಾಸ್ ಸ್ಪರ್ಧಿಗಳ ರೀಯೂನಿಯನ್ ಆಗಿದೆ. ಎಲಿಮಿನೇಟ್ ಆದ ಸ್ಪರ್ಧಿಗಳು ದೊಡ್ಮನೆಗೆ ಬಂದಿದ್ದಾರೆ. ಮೈಕಲ್ ಆಗಮಿಸುತ್ತಿದ್ದಂತೆ ಇಡೀ ಮನೆ ಖುಷಿಯಿಂದ ಕುಪ್ಪಳಿಸಿತು. ‘ಮೈಕಲ್ ರೆಸ್ಪಾನ್ಸ್ ಹೇಗಿದೆ? ನಾರ್ಮಲ್ ಆಗಿ ಓಡಾಬಹುದಾ’ ಎಂದು ನಮ್ರತಾ ಕೇಳಿದರು. ಇದಕ್ಕೆ ಮೈಕಲ್ ಉತ್ತರಿಸಿದರು. ‘ರೆಸ್ಪಾನ್ಸ್ ನೆಕ್ಸ್ಟ್​ ಲೆವಲ್ ಇದೆ. ರೋಡ್​ ಅಲ್ಲಿ ಓಡಾಡೋಕೆ ಆಗ್ತಿಲ್ಲ. ಎಲ್ಲರೂ ಮಣ್ಣಿನ ಮಗ ಅಂತಾನೇ ಕರ್ಯೋದು’ ಎಂದು ಖುಷಿಯಿಂದ ಹೇಳಿಕೊಂಡರು.

ಇದನ್ನೂ ಓದಿ: ‘ಬಿಗ್​ ಬಾಸ್​ನಲ್ಲಿ ಮೊದಲಿಗೆ ನನ್ನನ್ನು ಜಾಸ್ತಿ ತೋರಿಸಿಲ್ಲ’: ಕಾರಣ ತಿಳಿಸಿದ ಮೈಕಲ್​ ಅಜಯ್​

ಮೈಕಲ್ ಅವರಿಗೆ ಈ ಪರಿ ರೆಸ್ಪಾನ್ಸ್ ಸಿಗುತ್ತಿರುವುದು ನೋಡಿ ಎಲ್ಲರಿಗೂ ಖುಷಿ ಆಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು