AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಕ್ಷಣದಲ್ಲಿ ಮಿಡ್ ವೀಕ್ ಎಲಿಮಿನೇಷನ್ ರದ್ದಾಗಿದ್ದೇಕೆ? ಬಿಗ್ ಬಾಸ್ ಕೊಟ್ಟರು ಕಾರಣ

Bigg Boss Midweek Elimination: ಈ ವಾರದ ಮಧ್ಯದಲ್ಲಿ ಬಿಗ್ ಬಾಸ್ ಕನ್ನಡದಲ್ಲಿ ಒಬ್ಬ ಸ್ಪರ್ಧಿಯನ್ನು ಹೊರಹಾಕುವುದಾಗಿ ಘೋಷಿಸಲಾಗಿತ್ತು. ಆದರೆ, ಅನಿರೀಕ್ಷಿತ ತಿರುವಿನಲ್ಲಿ, ಯಾರನ್ನೂ ಹೊರಹಾಕಲಾಗಿಲ್ಲ. ಕೊನೆಯಲ್ಲಿ ಭವ್ಯಾ ಹಾಗೂ ಗೌತಮಿ ಇದ್ದರು. ಆದರೆ, ತಾತ್ಕಾಲಿಕವಾಗಿ ಇದನ್ನು ನಡೆಸುತ್ತಿಲ್ಲ ಎಂದು ಬಿಗ್ ಬಾಸ್ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕೊನೆಯ ಕ್ಷಣದಲ್ಲಿ ಮಿಡ್ ವೀಕ್ ಎಲಿಮಿನೇಷನ್ ರದ್ದಾಗಿದ್ದೇಕೆ? ಬಿಗ್ ಬಾಸ್ ಕೊಟ್ಟರು ಕಾರಣ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 16, 2025 | 8:47 AM

Share

ಈ ವಾರದ ಮಧ್ಯದಲ್ಲಿ ಒಬ್ಬರು ಬಿಗ್ ಬಾಸ್​ನಿಂದ ಹೊರ ಹೋಗಲಿದ್ದಾರೆ ಎಂದು ಸುದೀಪ್ ಘೋಷಿಸಿದ್ದರು. ಈ ಮೂಲಕ ದೊಡ್ಮನೆಯ ಸದಸ್ಯರ ಸಂಖ್ಯೆ 8ರಿಂದ ಏಳಕ್ಕೆ ಇಳಿಕೆ ಆಗಲಿದೆ ಎಂದು ವೀಕ್ಷಕರು ಅಂದುಕೊಂಡಿದ್ದರು. ಆದರೆ, ಸದ್ಯಕ್ಕೆ ಅದು ಸುಳ್ಳಾಗಿದೆ. ಮಿಡ್ ವೀಕ್ ಎಲಿಮಿನೇಷನ್ ಡ್ರಾಮಾ ನಡೆಸಿ ನಂತರ ಕೊನೆಯ ಕ್ಷಣದಲ್ಲಿ ಅದನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ. ಹಾಗಾದರೆ ಯಾರೂ ದೊಡ್ಮನೆಯಿಂದ ಹೊರ ಹೋಗಿಲ್ಲವೇ? ಹೋಗುತ್ತಾರೆ ಎಂದಾದರೆ ಯಾವಾಗ? ಆ ಎಲ್ಲ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಉತ್ತರ ಇದೆ.

‘ಬಿಗ್ ಬಾಸ್’ನಲ್ಲಿ ಹನುಮಂತ ಅವರು ಫಿನಾಲೆ ವೀಕ್ ತಲುಪಿಯಾಗಿದೆ. ಧನರಾಜ್ ಅವರು ಟಾಸ್ಕ್ ಆಡಿ ಮಧ್ಯ ವಾರದ ಎಲಿಮಿನೇಷ್​​ನಿಂದ ಬಚಾವ್ ಆದರು. ಸದ್ಯ ಗೌತಮಿ, ಭವ್ಯಾ ಗೌಡ, ಮಂಜು, ತ್ರಿವಿಕ್ರಂ, ರಜತ್ ಹಾಗೂ ಮೋಕ್ಷಿತಾ ನಾಮಿನೇಷನ್​ ಲಿಸ್ಟ್​ನಲ್ಲಿ ಇದ್ದರು. ಇವರ ಪೈಕಿ ಒಬ್ಬರು ಎಲಿಮಿನೇಟ್ ಆಗೋದು ಪಕ್ಕಾ ಎನ್ನಲಾಗಿತ್ತು. ಅದರಂತೆ ಎಲಿಮಿನೇಷನ್ ಪ್ರಕ್ರಿಯೆ ಕೂಡ ನಡೆಸಲಾಯಿತು.

ಮೊದಲು ಬಿಗ್ ಬಾಸ್ ಮನೆಯ ಮುಖ್ಯದ್ವಾರ ತೆಗೆಯಲಾಯಿತು. ಆ ಬಳಿಕ ಒಬ್ಬೊಬ್ಬರಾಗಿ ಸ್ಪರ್ಧಿಗಳನ್ನು ಕರೆದರು ಬಿಗ್ ಬಾಸ್. ‘ಇಂದು ಈ ಮುಖ್ಯದ್ವಾರ ತೆಗೆದಿರುವುದು ನಿಮಗಾಗಿ ಅಲ್ಲ’ ಎಂದು ಹೇಳುತ್ತಾ ಬಂದರು. ಕೊನೆಯಲ್ಲಿ ಭವ್ಯಾ ಹಾಗೂ ಗೌತಮಿಯನ್ನು ಕರೆಯಲಾಯಿತು. ಮೊದಲು ಗೌತಮಿಯನ್ನು ನಿಲ್ಲಿಸಿ, ‘ಈ ಬಾಗಿಲು ತೆರೆದಿರುವುದು ನಿಮಗಾಗಿ..’ ಎಂದು ಪೌಸ್ ಕೊಟ್ಟ ಬಿಗ್​ ಬಾಸ್ ಕೊನೆಯಲ್ಲಿ ‘ಅಲ್ಲ’ ಎಂದರು.

ಹೀಗಾಗಿ ಭವ್ಯಾ ಹೊರ ಹೋಗೋದು ಖಚಿತ ಎಂದು ಎಲ್ಲರೂ ಅಂದುಕೊಂಡರು. ಭವ್ಯಾ ಕೂಡ ಕಣ್ಣೀರು ಹಾಕಿದರು. ಅವರಿಗೂ ನೀವು ಹೊರ ಹೋಗುತ್ತಿಲ್ಲ ಎಂದು ಬಿಗ್ ಬಾಸ್ ಘೋಷಿಸಿದರು. ‘ನಂಗೆ ಯಾಕೆ ಹೀಗೆ ಮಾಡುತ್ತೀರಾ ಬಿಗ್ ಬಾಸ್’ ಎಂದು ಭವ್ಯಾ ಗಳಗಳನೆ ಅತ್ತರು. ಈ ಮೊದಲು ಕೂಡ ಭವ್ಯಾಗೆ ಈ ರೀತಿಯ ಪ್ರ್ಯಾಂಕ್ ಮಾಡಲಾಗಿತ್ತು.

ಇದನ್ನೂ ಓದಿ: ತಮಗಿಂತ ಕೆಳಗಿದ್ದಾರೆ ಎಂದು ನಕ್ಕಿದ್ದ ತ್ರಿವಿಕ್ರಂ-ರಜತ್​ಗೆ ಸುತ್ತಿ ಬಂತು ಕರ್ಮ

‘ಮಕರ ಸಂಕ್ರಾಂತಿ ಹಬ್ಬದ ಈ ಶುಭ ಸಂದರ್ಭದಲ್ಲಿ ಯಾರೂ ಮನೆಯಿಂದ ಹೊರ ಹೋಗುತ್ತಿಲ್ಲ. ಆದರೆ, ನಡುವಾರದ ಎಲಿಮಿನೇಷನ್ ನಡೆಯಲೇಬೇಕು. ಅಲ್ಲಿಯವರೆಗೆ ಮುಖ್ಯದ್ವಾರ ತೆಗೆದೇ ಇರುತ್ತದೆ’ ಎಂದು ಬಿಗ್ ಬಾಸ್ ಘೋಷಿಸಿದರು. ಸದ್ಯ ಗೌತಮಿ ಹೊರ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಪಿಸೋಡ್ ಇಂದು (ಜನವರಿ 16) ಪ್ರಸಾರ ಕಾಣಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Thu, 16 January 25

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು