AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಡಲ್​ ವೀಕ್ ಎಲಿಮಿನೇಷನ್; ಧನರಾಜ್​ಗೆ ಬ್ಯಾಗ್​ ಪ್ಯಾಕ್ ಮಾಡಲು ಹೇಳಿದ ಬಿಗ್ ಬಾಸ್?

‘ಬಿಗ್ ಬಾಸ್ ಕನ್ನಡ ಸೀಸನ್ 11’ ಮೂರನೇ ವಾರಕ್ಕೆ ಕಾಲಿಟ್ಟಿದೆ. ಸ್ಪರ್ಧಿಗಳ ಮಧ್ಯೆ ಜಗಳಗಳು ಜೋರಾಗಿವೆ. ಅದೇ ರೀತಿ ಸ್ಪರ್ಧೆ ಕೂಡ ಹೆಚ್ಚುತ್ತಿದೆ. ಈ ಮಧ್ಯೆ ಬಿಗ್ ಬಾಸ್ ಮನೆಗೆ ಲ್ಯಾಂಡ್​ಲೈನ್​ನ ಆಗಮನ ಆಗಿದೆ. ಇದರಲ್ಲಿ ಮಿಡ್ ವೀಕ್​ ಎಲಿಮಿನೇಷನ್ ನಡೆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಮಿಡಲ್​ ವೀಕ್ ಎಲಿಮಿನೇಷನ್; ಧನರಾಜ್​ಗೆ ಬ್ಯಾಗ್​ ಪ್ಯಾಕ್ ಮಾಡಲು ಹೇಳಿದ ಬಿಗ್ ಬಾಸ್?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 15, 2024 | 7:45 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ವಾರ ಯಾವುದೇ ಎಲಿಮಿನೇಷನ್ ನಡೆದಿರಲಿಲ್ಲ. ಬಿಗ್ ಬಾಸ್​ನ ಬಹುತೇಕರು ನಾಮಿನೇಟ್ ಆಗಿದ್ದರು. ಆದರೆ, ಯಾರೊಬ್ಬರೂ ಔಟ್ ಆಗಿರಲಿಲ್ಲ. ಆ ವಾರ ಯಾವುದೇ ವೋಟಿಂಗ್ ನಡೆದೇ ಇರಲಿಲ್ಲ. ಹೀಗಾಗಿ, ಮನೆಯಲ್ಲಿ 16 ಸ್ಪರ್ಧಿಗಳ ಮಧ್ಯೆಯೇ ಕಾಂಪಿಟೇಷನ್ ಮುಂದುವರಿದಿದೆ. ಹಾಗಿದ್ದರೆ ಈ ವಾರ ಮಧ್ಯವಾರದಲ್ಲಿ ಒಬ್ಬರು ಹೋಗ್ತಾರಾ? ಮಾನಸಾ ಮಾತಿನಿಂದ ಎಲ್ಲರಲ್ಲೂ ಹೀಗೊಂದು ಅನುಮಾನ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂರನೇ ವಾರದಲ್ಲಿ ಫೋನ್​ಬೂತ್ ಬಂದಿದೆ. ಇದರ ಮೂಲಕ ಬಿಗ್ ಬಾಸ್ ಮಾತನಾಡುತ್ತಿದ್ದಾರೆ. ವಿಶೇಷ ಎಂದರೆ ತುಕಾಲಿ ಸಂತೋಷ್ ಕೂಡ ಕರೆ ಮಾಡಿ ಸ್ಪರ್ಧಿಗಳ ಜೊತೆ ಮಾತನಾಡುತ್ತಿದ್ದಾರೆ. ಅವರು ಪತ್ನಿ ಮಾನಸಾ ಬಳಿ ಮಾತನಾಡಿ, ಕೆಲವು ಸ್ಪರ್ಧಿಗಳಿಗೆ ಕಿವಿಮಾತನ್ನು ಹೇಳಿದ್ದಾರೆ. ಈ ಕಿವಿಮಾತನ್ನು ಸ್ಪರ್ಧಿಗಳು ಗಂಭೀರವಾಗಿ ಸ್ವೀಕರಿಸಿದ್ದಾರೆ. ಈ ಸಮಯವನ್ನು ಮಾನಸಾ ಎನ್​ಕ್ಯಾಚ್ ಮಾಡಿಕೊಂಡಿದ್ದಾರೆ.

ಭವ್ಯಾ, ರಂಜಿತ್, ತ್ರಿವಿಕ್ರಂ ಮೊದಲಾದವರಿಗೆ ಕಿವಿಮಾತನ್ನು ಹೇಳಲಾಗಿತ್ತು. ಇದನ್ನು ಹೋಗಿ ತಲುಪಿಸಿದರು ಮನಾಸಾ. ಆದರೆ, ಧನರಾಜ್ ಆಟದ ಬಗ್ಗೆ ಯಾವುದೇ ಸೂಚನೆ ಬಂದಿರಲಿಲ್ಲ. ಆದರೂ ಮನಾಸಾ ಅವರೇ ಒಂದು ಕಥೆ ಕಟ್ಟಿ ಹೇಳಿದರು. ಅವರ ಮಾತನ್ನು ಕೇಳಿ ಧನರಾಜ್ ಶಾಕ್ ಆದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಕಾಲ್ ಮಾಡಿ ಭವ್ಯಾ ಗೌಡಗೆ ಐ ಲವ್​ ಯೂ ಹೇಳಿದ ತುಕಾಲಿ ಸಂತೋಷ್

‘ಧನು ನಿನಗೊಂದು ವಿಷಯ ಬಂತು. ಎಲ್ಲರ ಮುಂದೆ ಹೇಳಲಾ’ ಎಂದು ಕೇಳಿದರು ಮಾನಸಾ. ಇದಕ್ಕೆ ಓಕೆ ಎಂದರು ಧನರಾಜ್. ‘ಲಗೇಜ್ ಪ್ಯಾಕ್ ಮಾಡಬೇಕಂತೆ. ವಾರದ ಕೊನೆವರೆಗೆ ನೀನು ಇರಲ್ವಂತೆ. ಮಿಡಲ್ ಎಲಿಮಿನೇಷನ್ ಅಂತ ಹೋಗಬಹುದುಂತೆ. ಈಗಲೇ ಬಟ್ಟೆ ಪ್ಯಾಕ್ ಮಾಡಬೇಕಂತೆ. ಬಿಗ್ ಬಾಸ್ ಗಂಭೀರವಾಗಿ ಹೇಳಿದ್ದಾರೆ’ ಎಂದರು ಮಾನಸಾ. ಇದನ್ನು ಕೇಳಿ ಎಲ್ಲರಿಗೂ ಶಾಕ್ ಆಯಿತು. ಆ ಬಳಿಕ ಮಾನಸಾ ಅವರು, ‘ಇದನ್ನು ನಾನೇ ಹೇಳಿದ್ದು, ಬಿಗ್ ಬಾಸ್ ಹೇಳಿಲ್ಲ’ ಎಂದಾಗ ಎಲ್ಲರೂ ನಿಟ್ಟುಸಿರು ಬಿಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು