AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಡ್ ವೀಕ್ ಎಲಿಮಿನೇಷನ್ ರದ್ದು ಮಾಡಿದ ಬಿಗ್ ಬಾಸ್; ಆದರೂ ತಪ್ಪಿಲ್ಲ ಆಪತ್ತು

ರಜತ್, ಗೌತಮಿ ಜಾದವ್, ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ ಪೈ, ತ್ರಿವಿಕ್ರಮ್ ಅವರು ಈ ವಾರ ನಾಮಿನೇಟ್ ಆಗಿದ್ದರು. ಒಬ್ಬರು ಮಿಡ್ ವೀಕ್​ನಲ್ಲಿ ನಾಮಿನೇಟ್ ಆಗಲಿದ್ದಾರೆ ಎಂದು ಊಹಿಸಲಾಗಿತ್ತು. ಆದರೆ ಆಟದಲ್ಲಿ ಟ್ವಿಸ್ಟ್ ಸಿಕ್ಕಿದೆ. ಮಿಡ್ ವೀಕ್ ಎಲಿಮಿನೇಷನ್​ ಅನ್ನು ಸದ್ಯಕ್ಕೆ ರದ್ದು ಮಾಡಲಾಗಿದೆ. ಆದರೆ ಸ್ಪರ್ಧಿಗಳಿಗೆ ಆತಂಕ ಮಾತ್ರ ತಪ್ಪಿಲ್ಲ.

ಮಿಡ್ ವೀಕ್ ಎಲಿಮಿನೇಷನ್ ರದ್ದು ಮಾಡಿದ ಬಿಗ್ ಬಾಸ್; ಆದರೂ ತಪ್ಪಿಲ್ಲ ಆಪತ್ತು
Dhanraj Achar
ಮದನ್​ ಕುಮಾರ್​
|

Updated on: Jan 16, 2025 | 10:10 PM

Share

ಈ ಬಾರಿ ಯಾರು ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ದಿನ ದೂರವಿಲ್ಲ. ಸದ್ಯ ಬಿಗ್ ಬಾಸ್ ಮನೆಯಲ್ಲಿ 8 ಮಂದಿ ಇದ್ದಾರೆ. ಅವರಲ್ಲಿ 6 ಮಂದಿ ಮಿಡ್ ವೀಕ್​ ಎಲಿಮಿನೇಷನ್​ಗೆ ನಾಮಿನೇಟ್ ಆಗಿದ್ದರು. ಸಂಕ್ರಾಂತಿ ಹಬ್ಬ ಎಂಬ ಕಾರಣಕ್ಕೆ ಮಿಡ್ ವೀಕ್ ಎಲಿಮಿನೇಷನ್​ ಅನ್ನು ಒಂದು ದಿನಕ್ಕೆ ಮುಂದೂಡಲಾಗಿತ್ತು. ಆದರೆ ಈಗ ಏಕಾಏಕಿ ಎಲಿಮಿನೇಷನ್ ಕ್ಯಾನ್ಸಲ್ ಮಾಡಲಾಗಿದೆ. ಅದಕ್ಕೆ ಕಾರಣ ಆಗಿರುವುದು ಧನರಾಜ್ ಮಾಡಿದ ಒಂದು ತಪ್ಪು. ಟಾಸ್ಕ್ ವೇಳೆ ಧನರಾಜ್ ಅವರು ಮೋಸ ಮಾಡಿದ್ದಾರೆ ಎಂಬ ಕಾರಣದಿಂದ ಎಲಿಮಿನೇಷನ್​ ರದ್ದಾಗಿದೆ.

ಈ ವಾರ ಇಮ್ಯುನಿಟಿ ಪಡೆಯುವ ಟಾಸ್ಕ್​ನಲ್ಲಿ ಧನರಾಜ್ ಅವರಿಗೆ ಹೆಚ್ಚು ಅಂಕ ಸಿಕ್ಕಿತ್ತು. ಆದರೆ ಅವರು ಟಾಸ್ಕ್​ ವೇಳೆ ಕನ್ನಡಿ ನೋಡಿಕೊಂಡು ಮೋಸ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಟಾಸ್ಕ್ ನಡೆಯುವಾಗ ಸುಮ್ಮನಿದ್ದ ಬಿಗ್ ಬಾಸ್ ಈಗ ತಕರಾರು ತೆಗೆದಿದ್ದಾರೆ. ಒಟ್ಟಾರೆ ಪ್ರೇಕ್ಷಕರಿಗೆ ಇದು ಒಂದು ಗಿಮಿಕ್ ರೀತಿ ಕಾಣಿಸಿದೆ. ಒಟ್ಟಿನಲ್ಲಿ ಆ ಕಾರಣವನ್ನು ನೀಡಿ ಮಿಡ್ ವೀಕ್ ಎಲಿಮಿನೇಷನ್ ಕ್ಯಾನ್ಸಲ್ ಮಾಡಲಾಗಿದೆ.

ಟಾಸ್ಕ್ ವೇಳೆ ತಪ್ಪಾಗಿದೆ ಎಂಬ ಕಾರಣವನ್ನು ಧನರಾಜ್ ಅವರು ಇಮ್ಯುನಿಟಿಯನ್ನು ಹಿಂಪಡೆಯಲಾಗಿದೆ. ಆದ್ದರಿಂದ ಅವರು ಕೂಡ ಈ ವಾರ ನಾಮಿನೇಟ್ ಆಗಿದ್ದಾರೆ. ಒಟ್ಟು 7 ಮಂದಿ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಅವರಲ್ಲಿ ಇಬ್ಬರು ಈ ವಾರ ನಾಮಿನೇಟ್ ಆಗುವುದು ಖಚಿತ. ಆದರೆ ಯಾವಾಗ ಎಲಿಮಿನೇಷನ್ ನಡೆಯಲಿದೆ? ಯಾವ ರೀತಿ ನಡೆಯಲಿದೆ ಎಂಬುದಕ್ಕೆ ಕಾಲವೇ ಉತ್ತರಿಸಲಿದೆ ಎಂದು ಬಿಗ್ ಬಾಸ್ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನಡುಕ ಹುಟ್ಟಿಸಿದ ಮಿಡ್ ವೀಕ್ ಎಲಿಮಿನೇಷನ್

ಇಮ್ಯುನಿಟಿ ಸಿಕ್ಕಿದೆ ಎಂದು ಧನರಾಜ್ ಅವರು ಮೊದಲು ಖುಷಿಯಾಗಿದ್ದರು. ಆದರೆ ಈಗ ಇಮ್ಯುನಿಟಿ ಕಳೆದುಕೊಂಡ ಅವರಿಗೆ ಸಹಜವಾಗಿಯೇ ಬೇಸರ ಆಗಿದೆ. ಆದರೆ ಟಾಸ್ಕ್​ನಲ್ಲಿ ಮೋಸ ಆಗಿದೆ ಎಂಬ ಆರೋಪ ಬಂದಿದ್ದರಿಂದ ಅವರು ಅಳಲು ಆರಂಭಿಸಿದರು. ತಮ್ಮನ್ನು ಕೂಡ ನಾಮಿನೇಟ್ ಮಾಡಿ ಎಂದು ಬಿಗ್ ಬಾಸ್ ಬಳಿ ಮನವಿ ಮಾಡಿಕೊಂಡರು. ಮತ್ತೆ ಹೊಸದಾಗಿ ನಾಮಿನೇಷನ್ ಪ್ರತಿಕ್ರಿಯೆ ಮಾಡಲಾಗಿದೆ. ಅಲ್ಟಿಮೇಟ್ ಕ್ಯಾಪ್ಟನ್ ಆಗಿರುವ ಹನುಮಂತ ಮಾತ್ರ ಸೇಫ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ