AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪನ ಹೆಸರು ಗೊತ್ತಾಗಿದ್ದೇ 10ನೇ ಕ್ಲಾಸಲ್ಲಿ; ಸಾಯೋಕಿಂತ ಮುಂಚೆ ಅವ್ರನ್ನ ನೋಡ್ಬೇಕು’: ಮಿಥುನ ರಾಶಿ ವೈಷ್ಣವಿ ಕಣ್ಣೀರು

ವೈಷ್ಣವಿ ಮಾತನಾಡಿರುವುದು ಹೃದಯಸ್ಪರ್ಶಿ ಆಗಿದೆ. ಅದನ್ನು ಕೇಳಿ ಬಿಗ್​ ಬಾಸ್​ ಮನೆಯ ಇನ್ನುಳಿದ ಸದಸ್ಯರು ಕೂಡ ಕಣ್ಣೀರು ಸುರಿಸಿದ್ದಾರೆ. ಅಭಿಮಾನಿಗಳು ಕಮೆಂಟ್​ ಮೂಲಕ ಸಮಾಧಾನ ಮಾಡುತ್ತಿದ್ದಾರೆ.

‘ಅಪ್ಪನ ಹೆಸರು ಗೊತ್ತಾಗಿದ್ದೇ 10ನೇ ಕ್ಲಾಸಲ್ಲಿ; ಸಾಯೋಕಿಂತ ಮುಂಚೆ ಅವ್ರನ್ನ ನೋಡ್ಬೇಕು’: ಮಿಥುನ ರಾಶಿ ವೈಷ್ಣವಿ ಕಣ್ಣೀರು
ಮಿಥುನ ರಾಶಿ ವೈಷ್ಣವಿ ಕಣ್ಣೀರು
Follow us
TV9 Web
| Updated By: ಮದನ್​ ಕುಮಾರ್​

Updated on: Aug 27, 2021 | 2:05 PM

ತೆರೆಮೇಲೆ ಖುಷಿಖುಷಿಯಾಗಿ ಮನರಂಜಿಸುವ ನಟ-ನಟಿಯರ ರಿಯಲ್​ ಲೈಫ್​ ಬಗ್ಗೆ ಅಭಿಮಾನಿಗಳಿಗೆ ಹೆಚ್ಚೇನೂ ಗೊತ್ತಿರುವುದಿಲ್ಲ. ಸೆಲೆಬ್ರಿಟಿಗಳ ಬದುಕಿನಲ್ಲಿಯೂ ಹೇಳಿಕೊಳ್ಳಲಾಗದಂತಹ ನೋವಿನ ಘಟನೆಗಳು ಇರುತ್ತವೆ. ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಭಾಗವಹಿಸಿರುವ ಕೆಲವು ಕಲಾವಿದರು ತಮ್ಮ ಬದುಕಿನ ಅಂತಹ ಕೆಲವು ನೋವುಗಳನ್ನು ಪ್ರೇಕ್ಷಕರ ಮುಂದೆ ಹಂಚಿಕೊಂಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ‘ಮಿಥುನ ರಾಶಿ’ ಸೀರಿಯಲ್​ ಮೂಲಕ ಫೇಮಸ್​ ಆದ ನಟಿ ವೈಷ್ಣವಿ ಅವರು ಇತ್ತೀಚೆಗೆ ದೊಡ್ಮನೆಯಲ್ಲಿ ಮಕ್ಕಳಂತೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಮ್ಮ ಮನದಾಳದ ನೋವನ್ನು ಎಲ್ಲರ ಎದುರು ಹೇಳಿಕೊಂಡಿದ್ದಾರೆ.

ಈ ಎಪಿಸೋಡ್​ ಕುರಿತಂತೆ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಅದರಲ್ಲಿ ವೈಷ್ಣವಿ ಮಾತನಾಡಿರುವುದು ಹೃದಯಸ್ಪರ್ಶಿ ಆಗಿದೆ. ಅದನ್ನು ಕೇಳಿ ಬಿಗ್​ ಬಾಸ್​ ಮನೆಯ ಇನ್ನುಳಿದ ಸದಸ್ಯರು ಕೂಡ ಕಣ್ಣೀರು ಸುರಿಸಿದ್ದಾರೆ. ಈ ವಿಡಿಯೋ ನೋಡಿ ಕಮೆಂಟ್​ ಮಾಡಿರುವ ಅನೇಕ ಅಭಿಮಾನಿಗಳು ವೈಷ್ಣವಿಗೆ ಧೈರ್ಯ ತುಂಬುವ ಮಾತುಗಳನ್ನು ಹೇಳಿದ್ದಾರೆ. ತಮಗೂ ಇಂಥದ್ದೇ ಸಮಸ್ಯೆ ಇದೆ ಎಂದು ಕೂಡ ಅನೇಕರು ಹೇಳಿಕೊಂಡಿದ್ದಾರೆ.

‘ನನಗೆ ಅಪ್ಪನ ಹೆಸರು ಗೊತ್ತಾಗಿದ್ದು 10ನೇ ಕ್ಲಾಸ್​​ನಲ್ಲಿ. ನನಗೆ ಅಪ್ಪ ಇದ್ದಾರೆ ಎನಿಸುತ್ತದೆ. ಅವರು ಸತ್ತಿಲ್ಲ. ಅವರು ನಮ್ಮ ಜೊತೆ ಕೂಡ ಇಲ್ಲ. ನಾನು ಅವರನ್ನು ನೋಡಿಯೇ ಇಲ್ಲ. ಇವಳಿಗೆ ಇವರ ಅಪ್ಪನ ಹೆಸರೇ ಗೊತ್ತಿಲ್ಲ ಎಂದು ನನ್ನ ಎದುರಿಗೇ ಜನರು ಆಡಿಕೊಳ್ಳುತ್ತಿದ್ದರು. ನಮ್ಮ ಅಪ್ಪ ಸಾಯುವುದಕ್ಕಿಂತ ಮುಂಚೆ ನಾನು ಅವರನ್ನ ನೋಡಬೇಕು. ಒಂದೇ ಒಂದು ಬಾರಿ ಅವರನ್ನು ನಾನು ಅಪ್ಪ ಎಂದು ಕರೆಯಬೇಕು ಅಂತ ತುಂಬ ಆಸೆ ಇದೆ’ ಎನ್ನುತ್ತ ವೈಷ್ಣವಿ ಕಣ್ಣೀರು ಸುರಿಸಿದ್ದಾರೆ.

ಈ ಎಪಿಸೋಡ್​ ಶುಕ್ರವಾರ (ಆ.27) ರಾತ್ರಿ ಪ್ರಸಾರ ಆಗಲಿದೆ. ಅಕುಲ್​ ಬಾಲಾಜಿ, ನಿರಂಜನ್​, ‘ಕನ್ನಡತಿ’ ಧಾರಾವಾಹಿ ನಟ ಕಿರಣ್​ ರಾಜ್​, ‘ನನ್ನರಸಿ ರಾಧೆ’ ಖ್ಯಾತಿಯ ಕೌಸ್ತುಭ, ‘ಮಂಗಳಗೌರಿ ಮದುವೆ’ ಸೀರಿಯಲ್​ನ ಗಗನ್​ ಚಿನ್ನಪ್ಪ ಸೇರಿದಂತೆ ಒಟ್ಟು 15 ಸೆಲೆಬ್ರಿಟಿಗಳು ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಭಾಗವಹಿಸಿದ್ದಾರೆ. ಇದರ ಗ್ರ್ಯಾಂಡ್​ ಫಿನಾಲೆಗೆ ಕಿಚ್ಚ ಸುದೀಪ್​ ನಿರೂಪಣೆ ಮಾಡಲಿದ್ದಾರೆ ಎಂಬ ವಿಚಾರವನ್ನು ಕಲರ್ಸ್​ ಕನ್ನಡ ವಾಹಿನಿಯ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಇತ್ತೀಚೆಗೆ ಖಚಿತಪಡಿಸಿದ್ದರು. ಹಾಗಾಗಿ ವೀಕ್ಷಕರ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

ಬಿಗ್​ ಬಾಸ್​ ಮನೆಯಲ್ಲಿರುವ ತಪ್ಪು ಕಲ್ಪನೆ ಬಗ್ಗೆ ಬಾಯ್ಬಿಟ್ಟ ಕೌಸ್ತುಭ; ಅವರು ಟೀಕಿಸಿದ್ದು ಯಾರನ್ನ?

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ