AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪನ ಹೆಸರು ಗೊತ್ತಾಗಿದ್ದೇ 10ನೇ ಕ್ಲಾಸಲ್ಲಿ; ಸಾಯೋಕಿಂತ ಮುಂಚೆ ಅವ್ರನ್ನ ನೋಡ್ಬೇಕು’: ಮಿಥುನ ರಾಶಿ ವೈಷ್ಣವಿ ಕಣ್ಣೀರು

ವೈಷ್ಣವಿ ಮಾತನಾಡಿರುವುದು ಹೃದಯಸ್ಪರ್ಶಿ ಆಗಿದೆ. ಅದನ್ನು ಕೇಳಿ ಬಿಗ್​ ಬಾಸ್​ ಮನೆಯ ಇನ್ನುಳಿದ ಸದಸ್ಯರು ಕೂಡ ಕಣ್ಣೀರು ಸುರಿಸಿದ್ದಾರೆ. ಅಭಿಮಾನಿಗಳು ಕಮೆಂಟ್​ ಮೂಲಕ ಸಮಾಧಾನ ಮಾಡುತ್ತಿದ್ದಾರೆ.

‘ಅಪ್ಪನ ಹೆಸರು ಗೊತ್ತಾಗಿದ್ದೇ 10ನೇ ಕ್ಲಾಸಲ್ಲಿ; ಸಾಯೋಕಿಂತ ಮುಂಚೆ ಅವ್ರನ್ನ ನೋಡ್ಬೇಕು’: ಮಿಥುನ ರಾಶಿ ವೈಷ್ಣವಿ ಕಣ್ಣೀರು
ಮಿಥುನ ರಾಶಿ ವೈಷ್ಣವಿ ಕಣ್ಣೀರು
TV9 Web
| Edited By: |

Updated on: Aug 27, 2021 | 2:05 PM

Share

ತೆರೆಮೇಲೆ ಖುಷಿಖುಷಿಯಾಗಿ ಮನರಂಜಿಸುವ ನಟ-ನಟಿಯರ ರಿಯಲ್​ ಲೈಫ್​ ಬಗ್ಗೆ ಅಭಿಮಾನಿಗಳಿಗೆ ಹೆಚ್ಚೇನೂ ಗೊತ್ತಿರುವುದಿಲ್ಲ. ಸೆಲೆಬ್ರಿಟಿಗಳ ಬದುಕಿನಲ್ಲಿಯೂ ಹೇಳಿಕೊಳ್ಳಲಾಗದಂತಹ ನೋವಿನ ಘಟನೆಗಳು ಇರುತ್ತವೆ. ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಭಾಗವಹಿಸಿರುವ ಕೆಲವು ಕಲಾವಿದರು ತಮ್ಮ ಬದುಕಿನ ಅಂತಹ ಕೆಲವು ನೋವುಗಳನ್ನು ಪ್ರೇಕ್ಷಕರ ಮುಂದೆ ಹಂಚಿಕೊಂಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ‘ಮಿಥುನ ರಾಶಿ’ ಸೀರಿಯಲ್​ ಮೂಲಕ ಫೇಮಸ್​ ಆದ ನಟಿ ವೈಷ್ಣವಿ ಅವರು ಇತ್ತೀಚೆಗೆ ದೊಡ್ಮನೆಯಲ್ಲಿ ಮಕ್ಕಳಂತೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಮ್ಮ ಮನದಾಳದ ನೋವನ್ನು ಎಲ್ಲರ ಎದುರು ಹೇಳಿಕೊಂಡಿದ್ದಾರೆ.

ಈ ಎಪಿಸೋಡ್​ ಕುರಿತಂತೆ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಅದರಲ್ಲಿ ವೈಷ್ಣವಿ ಮಾತನಾಡಿರುವುದು ಹೃದಯಸ್ಪರ್ಶಿ ಆಗಿದೆ. ಅದನ್ನು ಕೇಳಿ ಬಿಗ್​ ಬಾಸ್​ ಮನೆಯ ಇನ್ನುಳಿದ ಸದಸ್ಯರು ಕೂಡ ಕಣ್ಣೀರು ಸುರಿಸಿದ್ದಾರೆ. ಈ ವಿಡಿಯೋ ನೋಡಿ ಕಮೆಂಟ್​ ಮಾಡಿರುವ ಅನೇಕ ಅಭಿಮಾನಿಗಳು ವೈಷ್ಣವಿಗೆ ಧೈರ್ಯ ತುಂಬುವ ಮಾತುಗಳನ್ನು ಹೇಳಿದ್ದಾರೆ. ತಮಗೂ ಇಂಥದ್ದೇ ಸಮಸ್ಯೆ ಇದೆ ಎಂದು ಕೂಡ ಅನೇಕರು ಹೇಳಿಕೊಂಡಿದ್ದಾರೆ.

‘ನನಗೆ ಅಪ್ಪನ ಹೆಸರು ಗೊತ್ತಾಗಿದ್ದು 10ನೇ ಕ್ಲಾಸ್​​ನಲ್ಲಿ. ನನಗೆ ಅಪ್ಪ ಇದ್ದಾರೆ ಎನಿಸುತ್ತದೆ. ಅವರು ಸತ್ತಿಲ್ಲ. ಅವರು ನಮ್ಮ ಜೊತೆ ಕೂಡ ಇಲ್ಲ. ನಾನು ಅವರನ್ನು ನೋಡಿಯೇ ಇಲ್ಲ. ಇವಳಿಗೆ ಇವರ ಅಪ್ಪನ ಹೆಸರೇ ಗೊತ್ತಿಲ್ಲ ಎಂದು ನನ್ನ ಎದುರಿಗೇ ಜನರು ಆಡಿಕೊಳ್ಳುತ್ತಿದ್ದರು. ನಮ್ಮ ಅಪ್ಪ ಸಾಯುವುದಕ್ಕಿಂತ ಮುಂಚೆ ನಾನು ಅವರನ್ನ ನೋಡಬೇಕು. ಒಂದೇ ಒಂದು ಬಾರಿ ಅವರನ್ನು ನಾನು ಅಪ್ಪ ಎಂದು ಕರೆಯಬೇಕು ಅಂತ ತುಂಬ ಆಸೆ ಇದೆ’ ಎನ್ನುತ್ತ ವೈಷ್ಣವಿ ಕಣ್ಣೀರು ಸುರಿಸಿದ್ದಾರೆ.

ಈ ಎಪಿಸೋಡ್​ ಶುಕ್ರವಾರ (ಆ.27) ರಾತ್ರಿ ಪ್ರಸಾರ ಆಗಲಿದೆ. ಅಕುಲ್​ ಬಾಲಾಜಿ, ನಿರಂಜನ್​, ‘ಕನ್ನಡತಿ’ ಧಾರಾವಾಹಿ ನಟ ಕಿರಣ್​ ರಾಜ್​, ‘ನನ್ನರಸಿ ರಾಧೆ’ ಖ್ಯಾತಿಯ ಕೌಸ್ತುಭ, ‘ಮಂಗಳಗೌರಿ ಮದುವೆ’ ಸೀರಿಯಲ್​ನ ಗಗನ್​ ಚಿನ್ನಪ್ಪ ಸೇರಿದಂತೆ ಒಟ್ಟು 15 ಸೆಲೆಬ್ರಿಟಿಗಳು ಬಿಗ್​ ಬಾಸ್​ ಮಿನಿ ಸೀಸನ್​ನಲ್ಲಿ ಭಾಗವಹಿಸಿದ್ದಾರೆ. ಇದರ ಗ್ರ್ಯಾಂಡ್​ ಫಿನಾಲೆಗೆ ಕಿಚ್ಚ ಸುದೀಪ್​ ನಿರೂಪಣೆ ಮಾಡಲಿದ್ದಾರೆ ಎಂಬ ವಿಚಾರವನ್ನು ಕಲರ್ಸ್​ ಕನ್ನಡ ವಾಹಿನಿಯ ಬ್ಯುಸಿನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ಇತ್ತೀಚೆಗೆ ಖಚಿತಪಡಿಸಿದ್ದರು. ಹಾಗಾಗಿ ವೀಕ್ಷಕರ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

ಬಿಗ್​ ಬಾಸ್​ ಮನೆಯಲ್ಲಿರುವ ತಪ್ಪು ಕಲ್ಪನೆ ಬಗ್ಗೆ ಬಾಯ್ಬಿಟ್ಟ ಕೌಸ್ತುಭ; ಅವರು ಟೀಕಿಸಿದ್ದು ಯಾರನ್ನ?

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ