AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಬಳಸಲು ಸಿಗಲಿದೆ ಅವಕಾಶ; ಷರತ್ತುಗಳು ಅನ್ವಯ

ಬಿಗ್ ಬಾಸ್​ಗೆ ಅದರದ್ದೇ ಆದ ನಿಯಮಗಳು ಇವೆ. ಆದರೆ, ಸಮಯಕ್ಕೆ ತಕ್ಕಂತೆ ಈ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಾ ಬರಲಾಗುತ್ತಿದೆ. ಈಗ ಮೊಬೈಲ್ ಬಳಕೆಗೂ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಬಳಸಲು ಸಿಗಲಿದೆ ಅವಕಾಶ; ಷರತ್ತುಗಳು ಅನ್ವಯ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 14, 2023 | 11:34 AM

Share

‘ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿ ಒಂದು ವಾರ ಕಳೆದಿದೆ. ಅತ್ತ ಹಿಂದಿಯಲ್ಲೂ ಬಿಗ್ ಬಾಸ್ ಪ್ರಾರಂಭ ಆಗುತ್ತಿದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ಕ್ಕೆ ಅಕ್ಟೋಬರ್ 15ರಂದು ಚಾಲನೆ ಸಿಗಲಿದೆ. ಸಲ್ಮಾನ್ ಖಾನ್ ಅವರು ಈ ಶೋನ ನಡೆಸಿಕೊಡಲಿದ್ದಾರೆ. ವಿಶೇಷ ಎಂದರೆ, ಈ ಬಾರಿ ಹಿಂದಿ ಬಿಗ್ ಬಾಸ್​ನಲ್ಲಿ (Bigg Boss) ಮೊಬೈಲ್ ಬಳಕೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ವೀಕ್ಷಕರ ವಲಯದಲ್ಲಿ ಚರ್ಚೆ ಶುರುವಾಗಿದೆ.

ಬಿಗ್ ಬಾಸ್​ಗೆ ಅದರದ್ದೇ ಆದ ನಿಯಮಗಳು ಇವೆ. ಆದರೆ, ಸಮಯಕ್ಕೆ ತಕ್ಕಂತೆ ಈ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಾ ಬರಲಾಗುತ್ತಿದೆ. ‘ಬಿಗ್ ಬಸ್​’ ಮನೆ ಒಳಗೆ ಹೋದರೆ ಹೊರಗಿನ ಜಗತ್ತಿನ ಜೊತೆ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಳ್ಳಬೇಕು. ಮೊಬೈಲ್ ಬಳಕೆಯಂತೂ ಇಲ್ಲಿ ನಿಷಿದ್ಧ. ಆದರೆ, ಹಿಂದಿ ಬಿಗ್ ಬಾಸ್​ನವರು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸ್ಪರ್ಧಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಮೊಬೈಲ್ ಇಲ್ಲದ ಬಿಗ್ ಬಾಸ್  ಹೇಗಿರುತ್ತದೆ ಎಂದು ಊಹಿಸಿಕೊಳ್ಳೋದು ಅನೇಕರ ಬಳಿ ಸಾಧ್ಯವಿಲ್ಲ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಪರಿಚಯಿಸಿದರೆ ಹೇಗೆ ಎನ್ನುವ ಆಲೋಚನೆ ವಾಹಿನಿಯವರಿಗೆ ಮೂಡಿದೆ. ಮನೆಯಲ್ಲಿರುವ ಸ್ಪರ್ಧಿಗಳು ಒಂದಷ್ಟು ಸಮಯ ಮಾತ್ರ ಮೊಬೈಲ್ ಬಳಕೆ ಮಾಡಬಹುದು ಎನ್ನುವ ಷರತ್ತನ್ನು ಹಾಕಲು ನಿರ್ಧರಿಸಲಾಗಿದೆ. ಒಂದೊಮ್ಮೆ ಹಿಂದಿಯಲ್ಲಿ ಇದು ಯಶಸ್ಸು ಕಂಡರೆ ಮುಂದಿನ ದಿನಗಳಲ್ಲಿ ಕನ್ನಡ, ತೆಲುಗು ಭಾಷೆಯ ಬಿಗ್ ಬಾಸ್​ನಲ್ಲೂ ಮೊಬೈಲ್ ಬಳಕೆಗೆ ಅವಕಾಶ ನೀಡಬಹುದು.

ಇದನ್ನೂ ಓದಿ: ಬಿಗ್ ಬಾಸ್ ಟಾಪ್ ಐದಕ್ಕೆ ಬರೋ ಸ್ಪರ್ಧಿಗಳು ಇವರೇ ನೋಡಿ..

ಸದ್ಯ ಮೊಬೈಲ್ ಬಳಕೆಗೆ ಅವಕಾಶ ನೀಡುವ ನಿರ್ಧಾರವನ್ನು ಅನೇಕರು ವಿರೋಧಿಸಿದ್ದಾರೆ. ಬಿಗ್ ಬಾಸ್ ಮನೆಗೆ ಮೊಬೈಲ್ ಪರಿಚಯಗೊಂಡರೆ ಆಟದ ನಿಜವಾದ ಮಜಾ ಹೋಗಿ ಬಿಡುತ್ತದೆ. ಎಲ್ಲರೂ ಮೊಬೈಲ್​ನಲ್ಲೇ ಮುಳುಗಿರುತ್ತಾರೆ ಎನ್ನುವ ಅಭಿಪ್ರಾಯವನ್ನು ಅನೇಕರು ಹೊರಹಾಕಿದ್ದಾರೆ. ಈ ಹೊಸ ನಿಯಮದ ಬಗ್ಗೆ ಅಕ್ಟೋಬರ್ 15ರಂದು ಮಾಹಿತಿ ಸಿಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ