AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಿಮಾಕು ತೋರಿಸಿದ ಮೋಕ್ಷಿತಾಗೆ ಸಖತ್ ಶೇಪ್​ಔಟ್; ಗೌತಮಿ ಈಗ ಕ್ಯಾಪ್ಟನ್

ಬಿಗ್ ಬಾಸ್​ನಲ್ಲಿ ಬಂದ ಅವಕಾಶವನ್ನು ಯಾವತ್ತೂ ಕೈ ಚೆಲ್ಲಬಾರದು. ಹಾಗೆ ಚೆಲ್ಲಿದರೆ ಅದಕ್ಕೆ ದೊಡ್ಡ ದಂಡ ತೆತ್ತಬೇಕಾಗುತ್ತದೆ. ಇದು ಸ್ಪರ್ಧಿಗಳಿಗೆ ಅನೇಕ ಬಾರಿ ಅನುಭವ ಆಗಿದೆ. ಆದಾಗ್ಯೂ ಅನೇಕರು ಮತ್ತೆ ಮತ್ತೆ ಇದೇ ತಪ್ಪನ್ನು ಮಾಡುತ್ತಿದ್ದಾರೆ. ಮೋಕ್ಷಿತಾ ಕೂಡ ಇದೇ ತಪ್ಪನ್ನು ಮಾಡಿ ದೊಡ್ಡ ದಂಡ ತೆತ್ತಿದರು.

ಧಿಮಾಕು ತೋರಿಸಿದ ಮೋಕ್ಷಿತಾಗೆ ಸಖತ್ ಶೇಪ್​ಔಟ್; ಗೌತಮಿ ಈಗ ಕ್ಯಾಪ್ಟನ್
ರಾಜೇಶ್ ದುಗ್ಗುಮನೆ
|

Updated on:Dec 06, 2024 | 8:05 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್​ಗಳು ಸಿಕ್ಕಿವೆ. ಮೋಕ್ಷಿತಾ ಪೈ ಅವರು ಧಿಮಾಕು ತೋರಿದರು. ಜನರು ಆದೇಶವನ್ನು ಬದಿಗೊತ್ತಿದರು. ಇದಕ್ಕೆ ಅವರು ಸರಿಯಾದ ಪಾಠ ಕಲಿತಿದ್ದಾರೆ. ತಮಗೆ ಸಿಕ್ಕ ಅವಕಾಶ ಕೈ ಚೆಲ್ಲಿದರು. ಇದು ಅವರಿಗೆ ಮುಳುವಾಗಿ ಹೋಗಿದೆ. ಈ ಅವಕಾಶ ಬಳಕೆ ಮಾಡಿಕೊಂಡ ಗೌತಮಿ ಅವರು ಕ್ಯಾಪ್ಟನ್ ಆಗಿದ್ದಾರೆ! ಇದರಿಂದ ಮೋಕ್ಷಿತಾ ಉರಿದುರಿದು ಹೋಗಿದ್ದಾರೆ.

ಬಿಗ್ ಬಾಸ್​ನಲ್ಲಿ ಬಂದ ಅವಕಾಶವನ್ನು ಯಾವತ್ತೂ ಕೈ ಚೆಲ್ಲಬಾರದು. ಹಾಗೆ ಚೆಲ್ಲಿದರೆ ಅದಕ್ಕೆ ದೊಡ್ಡ ದಂಡ ತೆತ್ತಬೇಕಾಗುತ್ತದೆ. ಇದು ಸ್ಪರ್ಧಿಗಳಿಗೆ ಅನೇಕ ಬಾರಿ ಅನುಭವ ಆಗಿದೆ. ಆದಾಗ್ಯೂ ಅನೇಕರು ಮತ್ತೆ ಮತ್ತೆ ಇದೇ ತಪ್ಪನ್ನು ಮಾಡುತ್ತಿದ್ದಾರೆ. ಮೋಕ್ಷಿತಾ ಕೂಡ ಇದೇ ತಪ್ಪನ್ನು ಮಾಡಿ ದೊಡ್ಡ ದಂಡ ತೆತ್ತಿದರು.

ಈ ಬಾರಿ ಎರಡು ತಂಡಗಳನ್ನು ಮಾಡಲಾಗಿತ್ತು. ಈ ಪೈಕಿ ಮೋಕ್ಷಿತಾ ತಂಡ ಗೆಲುವು ಕಂಡಿತು. ತಾವು ಗೆಲ್ಲಲು ತಮ್ಮ ಪರವಾಗಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಬಿಗ್ ಬಾಸ್ ನೀಡಿದರು ಮತ್ತು ಆ ಸ್ಪರ್ಧಿ ಎದುರಾಳಿ ತಂಡದವರೇ ಆಗಬೇಕಿತ್ತು. ಮೋಕ್ಷಿತಾ ಅವರಿಗೆ ಗೌತಮಿ ಅವರ ಆಯ್ಕೆ ಬಂತು. ಇದಕ್ಕೆ ಮೋಕ್ಷಿತಾ ಧಿಮಾಕು ತೋರಿದರು.

ಇದನ್ನೂ ಓದಿ: ಗೌತಮಿ ಎದುರು ಮೋಕ್ಷಿತಾಗೆ ದೊಡ್ಡ ಸೋಲು; ಎಚ್ಚರಿಕೆ ನೀಡಿದ ಬಿಗ್ ಬಾಸ್

‘ಗೌತಮಿ ಗೆದ್ದು ನಾನು ಕ್ಯಾಪ್ಟನ್ ಆಗಬೇಕೆಂಬುದು ಯಾವತ್ತೂ ಇಲ್ಲ’ ಎಂದಿದ್ದಾರೆ ಮೋಕ್ಷಿತಾ. ಇದಕ್ಕೆ ಬಿಗ್ ಬಾಸ್ ಎಚ್ಚರಿಕೆಯನ್ನು ಕೂಡ ನೀಡಿದರು. ಇದಕ್ಕೆ ನೀವು ದೊಡ್ಡ ದಂಡ ತೆತ್ತಬೇಕಾಗುತ್ತದೆ ಎಂದರು. ಕೊನೆಗೆ ಮೋಲ್ಷಿತಾ ಬದಲಾಗಿ ಓರ್ವ ಬೇರೆ ಆಟಗಾರನನ್ನು ಎದುರಾಳಿ ತಂಡದಿಂದ ಆಯ್ಕೆ ಮಾಡಲು ಅವಕಾಶ ನೀಡಲಾಯಿತು. ಆಗ ಎಲ್ಲರೂ ಗೌತಮಿ ಅವರನ್ನು ಆಯ್ಕೆ ಮಾಡಿದರು. ಈಗ ರಿಲೀಸ್ ಆಗಿರೋ ಹೊಸ ಪ್ರೋಮೋದಲ್ಲಿ ಗೌತಮಿ ಕ್ಯಾಪ್ಟನ್ ಆಗಿದ್ದಾರೆ. ಮೋಕ್ಷಿತಾ ಕೊಟ್ಟ ಅವಕಾಶದಿಂದ ಗೌತಮಿಗೆ ಈ ಪಟ್ಟ ಒಲಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:56 am, Fri, 6 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್