AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮೋಕ್ಷಿತಾ, ಭವ್ಯಾ ಪ್ಲ್ಯಾನ್; ಆಟದಿಂದ ರಜತ್​ ಹೊರಗೆ

ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಬಂದ ರಜತ್ ಅವರು ಸ್ಟ್ರಾಂಗ್ ಸ್ಪರ್ಧಿ ಎಂಬುದೇನೋ ನಿಜ. ಆದರೆ ಭವ್ಯಾ ಗೌಡ ಮತ್ತು ಮೋಕ್ಷಿತಾ ಪೈ ಅವರ ತಂತ್ರಗಾರಿಕೆ ಮುಂದೆ ರಜತ್ ಅವರ ಆಟ ನಡೆಯಲಿಲ್ಲ. ಭವ್ಯಾ ಹಾಗೂ ಮೋಕ್ಷಿತಾ ಅವರು ಟಾಸ್ಕ್​ನಲ್ಲಿ ಜೋಡಿಸಿದರು. ಹಾಗಾಗಿ ರಜತ್​ಗೆ ಹಿನ್ನಡೆ ಆಯಿತು. ಮಿಡ್ ವೀಕ್ ಎಲಿಮಿನೇಷನ್ ಭಯ ಜಾಸ್ತಿ ಆಯಿತು.

ಬಿಗ್ ಬಾಸ್ ಮನೆಯಲ್ಲಿ ಮೋಕ್ಷಿತಾ, ಭವ್ಯಾ ಪ್ಲ್ಯಾನ್; ಆಟದಿಂದ ರಜತ್​ ಹೊರಗೆ
Bigg Boss Kannada 11
ಮದನ್​ ಕುಮಾರ್​
|

Updated on: Jan 13, 2025 | 10:43 PM

Share

ರಜತ್ ಅವರು ಎಲ್ಲ ಟಾಸ್ಕ್​ನಲ್ಲಿಗೂ ಗೆಲ್ಲುವ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಅದು ಸೆಮಿ ಫೈನಲ್ ವೀಕ್​ನಲ್ಲಿ ಸಾಧ್ಯವಾಗಿಲ್ಲ. ಮೋಕ್ಷಿತಾ ಪೈ ಮತ್ತು ಭವ್ಯಾ ಗೌಡ ಅವರು ತಂತ್ರಗಾರಿಕೆ ಮಾಡಿ ರಜತ್ ಅವರನ್ನು ಆಟದಿಂದ ಹೊರಗೆ ಹಾಕಿದ್ದಾರೆ. ಇದರಿಂದ ಎಲ್ಲರಿಗೂ ಅಚ್ಚರಿ ಆಯಿತು. ಯಾಕೆಂದರೆ, ರಜತ್ ಟಾಸ್ಕ್ ಸೋಲುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅಲ್ಲದೇ, ಮೋಕ್ಷಿತಾ ಪೈ ಅವರು ಇಂಥ ತಂತ್ರಗಾರಿಕೆ ಮಾಡುತ್ತಾರೆ ಎಂಬುದನ್ನು ಕೂಡ ಅನೇಕರು ಊಹೆ ಮಾಡಿರಲಿಲ್ಲ. ಆದರೆ ಟಾಸ್ಕ್​ನಲ್ಲಿ ಈ ರೀತಿ ತಂತ್ರಗಾರಿಕೆ ಮಾಡುವುದು ಅನಿವಾರ್ಯ ಆಗಿತ್ತು.

ಖಂಡಿತವಾಗಿಯೂ ಈ ವಾರ ಮಿಡ್ ಮೀಕ್ ಎಲಿಮಿನೇಷನ್​ ನಡೆಯಲಿದೆ. ಅದಕ್ಕಾಗಿ ಕ್ಯಾಪ್ಟನ್ ಹನುಮಂತ ಅವರನ್ನು ಹೊರತುಪಡಿಸಿ ಉಳಿದ ಎಲ್ಲರನ್ನು ನಾಮಿನೇಟ್ ಮಾಡಲಾಗಿದೆ. ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ ಪೈ, ತ್ರಿವಿಕ್ರಮ್, ಧನರಾಜ್, ಗೌತಮಿ ಜಾದವ್, ರಜತ್ ಅವರು ಟಾಸ್ಕ್ ಗೆಲ್ಲುವ ಮೂಲಕ ಮಾತ್ರ ನಾಮಿನೇಷ್​ನಿಂದ ಬಚಾವ್ ಆಗಬಹುದು.

ಮೊದಲು ಟಾಸ್ಕ್ ಆಡಲು ಭವ್ಯಾ ಆಯ್ಕೆ ಆದರು. ಮೊದಲ ಸುತ್ತಿನಲ್ಲಿ ತಮ್ಮ ಎದುರಾಳಿಗಳಾಗಿ ಮೋಕ್ಷಿತಾ, ರಜತ್, ಗೌತಮಿ ಅವರನ್ನು ಭವ್ಯಾ ಆಯ್ಕೆ ಮಾಡಿಕೊಂಡರು. ಮೊದಲ ಸುತ್ತಿನಲ್ಲಿ ಗೌತಮಿ ಔಟ್ ಆದರು. ಎರಡನೇ ಸುತ್ತಿನಲ್ಲಿ ಮೋಕ್ಷಿತಾ ಮತ್ತು ಭವ್ಯಾ ಅವರು ಕೈ ಜೋಡಿಸಿ ರಜತ್ ಅವರನ್ನು ಆಟದಿಂದ ಹೊರಗೆ ಹಾಕಿದರು. ಮೋಕ್ಷಿತಾ ಅವರು ಭವ್ಯಾ ಜೊತೆ ಈ ರೀತಿ ಕೈ ಜೋಡಿಸಿದ್ದು ನೋಡಿ ರಜತ್​ಗೆ ಅಚ್ಚರಿ ಆಯಿತು. ‘ನಿನ್ನಿಂದ ಇದನ್ನು ನಾನು ಊಹಿಸಿರಲಿಲ್ಲ’ ಎಂದು ರಜತ್ ಹೇಳಿದರು.

ಇದನ್ನೂ ಓದಿ: ಅರಗಿಸಿಕೊಳ್ಳಲಾಗದ ಸತ್ಯ ಹೇಳಿದ ರಜತ್; ಶಾಕ್​ಗೆ ಒಳಗಾದ ಭವ್ಯಾ ಮಾಡಿದ್ದೇನು?

ರಜತ್ ಅವರು ವೈಲ್ಡ್ ಕಾರ್ಡ್ ಮೂಲಕ ಬಂದವರು. ಆದರೆ ಬೇರೆ ಎಲ್ಲ ಸ್ಪರ್ಧಿಗಳಿಗೂ ಅವರು ಟಫ್ ಸ್ಪರ್ಧೆ ನೀಡಿ ಫಿನಾಲೆಯ ಸಮೀಪಕ್ಕೆ ಬಂದಿದ್ದಾರೆ. ಆದರೆ ಮಿಡ್ ವೀಕ್ ಎಲಿಮಿನೇಷನ್​ ವೇಳೆ ಅವರ ಆಟಕ್ಕೆ ಹಿನ್ನಡೆ ಆಗಿದೆ. ಈ ವಾರ ಯಾರು ವಾರದ ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕು. ಹನುಮಂತ ಅವರು ಫಿನಾಲೆ ಟಿಕೆಟ್​ ಪಡೆದು ಮುಂದೆ ಸಾಗಿದ್ದಾರೆ. ಆದರೆ ಅಂತಿಮವಾಗಿ ಗಪ್ ಗೆಲ್ಲುವುದು ಯಾರು ಎಂಬುದನ್ನು ತಿಳಿಯುವ ಕೌತುಕ ವೀಕ್ಷಕರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?