AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿಸು ಮರೆತು ಮತ್ತೆ ಒಂದಾದ ಮೋಕ್ಷಿತಾ-ಗೌತಮಿ; ಮಂಜುನ ದೂರ ಇಟ್ಟ ಜೋಡಿ

ಬಿಗ್ ಬಾಸ್ ಕನ್ನಡದಲ್ಲಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾಧವ್ ಅವರ ಗೆಳೆತನದಲ್ಲಿ ಮಂಜು ಕಾರಣದಿಂದ ಬಿರುಕು ಉಂಟಾಗಿತ್ತು. ಆದರೆ ಈಗ ಅವರು ಮತ್ತೆ ಒಂದಾಗಿದ್ದಾರೆ. ಮಂಜು ಮತ್ತು ಗೌತಮಿ ನಡುವಿನ ವೈಮನಸ್ಸಿನಿಂದಾಗಿ ಮೋಕ್ಷಿತಾ, ಗೌತಮಿಯನ್ನು ಬೆಂಬಲಿಸಿದ್ದಾರೆ. ತಂಡ ರಚನೆಯಲ್ಲಿ ಮೋಕ್ಷಿತಾ ಗೌತಮಿಯ ತಂಡವನ್ನು ಆಯ್ಕೆ ಮಾಡಿದ್ದಾರೆ.

ಮುನಿಸು ಮರೆತು ಮತ್ತೆ ಒಂದಾದ ಮೋಕ್ಷಿತಾ-ಗೌತಮಿ; ಮಂಜುನ ದೂರ ಇಟ್ಟ ಜೋಡಿ
ಗೌತಮಿ-ಮೋಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Dec 12, 2024 | 6:57 AM

Share

ಮೋಕ್ಷಿತಾ ಪೈ ಹಾಗೂ ಗೌತಮಿ ಜಾಧವ್ ಜೀ ಕನ್ನಡ ವಾಹಿನಿಯಲ್ಲಿ ಕೆಲಸ ಮಾಡಿದವರು. ಒಂದೇ ವಾಹಿನಿ ಎಂಬ ಕಾರಣದಿಂದಲೇ ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಮಂಜು ಕಾರಣದಿಂದ ಮೋಕ್ಷಿತಾ ಅವರು ಗೆಳೆತನ ಮುರಿದುಕೊಂಡು ಹೊರಕ್ಕೆ ಬಂದರು. ಈಗ ಮೋಕ್ಷಿತಾ ಹಾಗೂ ಗೌತಮಿ ಮತ್ತೆ ಒಂದಾಗಿದ್ದಾರೆ. ಯಾವಾಗ ಗೌತಮಿ ಅವರು ಮಂಜು ಅವರಿಂದ ದೂರ ಆದರೋ ಆಗಲೇ ಮೋಕ್ಷಿತಾ ಹಾಗೂ ಗೌತಮಿ ಮತ್ತೆ ಒಂದಾಗಿದ್ದಾರೆ.

ಮೋಕ್ಷಿತಾ, ಗೌತಮಿ ಹಾಗೂ ಮಂಜು ಮೊದಲು ಒಂದಾಗಿದ್ದರು. ಇವರು ಏನೇ ಮಾಡೋದಾದರೂ ಪ್ಲ್ಯಾನ್ ಮಾಡಿಯೇ ಮಾಡುತ್ತಿದ್ದರು. ಆದರೆ, ದಿನ ಕಳೆದಂತೆ ಮಂಜು ಬಗ್ಗೆ ಮೋಕ್ಷಿತಾಗೆ ಅಸಮಾಧಾನ ಮೂಡಿತು. ಸ್ವಲ್ಪ ದಿನಗಳ ಹಿಂದೆ ಮೋಕ್ಷಿತಾ ಅವರು ಗೌತಮಿ ಹಾಗೂ ಮಂಜುನ ವೈರಿ ನೋಡಿದಂತೆ ನೋಡುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ.

ಗೌತಮಿ ಹಾಗೂ ಮಂಜು ಮಧ್ಯೆ ವೈಮನಸ್ಸು ಮೂಡುತ್ತಿದೆ. ಎಲ್ಲಾ ವಿಚಾರಗಳಲ್ಲೂ ಮಂಜು ಅವರೇ ಮೇಲುಗೈ ತೋರಿಸಲು ಪ್ರಯತ್ನಿಸುತ್ತಾರೆ ಎನ್ನುವುದು ಗೌತಮಿಗೆ ಸ್ಪಷ್ಟವಾಗಿದೆ. ಈ ಕಾರಣದಿಂದಲೇ, ಮಂಜು ಬಗ್ಗೆ ಗೌತಮಿ ಅಸಮಾಧಾನ ಹೊರಹಾಕಿದ್ದು, ನಿಮ್ಮಜೊತೆ ಇನ್ಮುಂದೆ ಗೆಳೆತನ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಇದು ಮೋಕ್ಷಿತಾಗೆ ಸ್ಪಷ್ಟವಾದಂತಿದೆ. ಈ ಕಾರಣಕ್ಕೆ ಅವರು ಗೌತಮಿ ತಂಡ ಸೇರಿಕೊಂಡಿದ್ದಾರೆ.

ತಂಡ ರಚನೆ ಮಾಡುವ ಚಟುವಟಿಕೆಯನ್ನು ಬಿಗ್ ಬಾಸ್ ನೀಡಿದ್ದರು. ಒಂದು ತಂಡಕ್ಕೆ ಗೌತಮಿ ಕ್ಯಾಪ್ಟನ್ ಆದರೆ, ಮತ್ತೊಂದು ತಂಡಕ್ಕೆ ಹನುಮಂತ ನಾಯಕ. ಹನುಮಂತ ಹಾಗೂ ಗೌತಮಿ ಇಬ್ಬರೂ ಮೋಕ್ಷಿತಾನ ತಮ್ಮ ತಂಡಕ್ಕೆ ಸೇರಿಸಬೇಕು ಎಂದು ಬಯಸಿದರು. ಮೋಕ್ಷಿತಾ ಅವರು ಹನುಮಂತನ ತಂಡ ಸೇರುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಅಚ್ಚರಿ ಎಂಬಂತೆ ಅವರು ಗೌತಮಿಯನ್ನು ಆಯ್ಕೆ ಮಾಡಿಕೊಂಡರು.

ಇದನ್ನೂ ಓದಿ: ಮುಖಕ್ಕೆ ಹೊಡೆದಂತೆ ಮಾತಾಡಿದ ಗೌತಮಿ; ಸ್ನೇಹ ಮಾಡಿದ್ದಕ್ಕೆ ಮಂಜುಗೆ ಸಿಕ್ಕಿದ್ದು ಇಷ್ಟೇ

ಮೋಕ್ಷಿತಾ ಹಾಗೂ ಗೌತಮಿ ಒಂದಾದರೆ ಮಂಜು ಅವರಿಗೆ ಹಿನ್ನಡೆ ಉಂಟಾಗುವುದು ಪಕ್ಕಾ ಆಗಿದೆ. ಮಂಜು ಅವರು ಗೌತಮಿ ಇಲ್ಲದೆ ಒಬ್ಬಂಟಿ ಭಾವನೆ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!