AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಒಂದಾದ ಮಂಜು, ಮೋಕ್ಷಿತಾ, ಗೌತಮಿ; ಇದೇನು ಹೊಸ ಡ್ರಾಮಾ?

ಬಿಗ್ ಬಾಸ್ ಎಂದರೆ ಕೇವಲ ಟಾಸ್ಕ್​ಗಳ ಆಟ ಅಲ್ಲ. ಎಮೋಷನ್​ಗಳು ಕೂಡ ಇದರಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಯಾರು ಯಾರ ಜೊತೆಗೆ ಕ್ಲೋಸ್ ಆಗಿದ್ದಾರೆ ಎಂಬುದು ಕೂಡ ವೋಟಿಂಗ್ ಮೇಲೆ ಪರಿಣಾಮ ಬೀರಬಹುದು. ಇಷ್ಟು ದಿನ ಕಿತ್ತಾಡಿಕೊಂಡಿದ್ದ ಮೋಕ್ಷಿತಾ ಅವರು ಈಗ ಮತ್ತೆ ಮಂಜು ಮತ್ತು ಗೌತಮಿ ಜೊತೆ ಕೈ ಜೋಡಿಸಿದ್ದಾರೆ.

ಮತ್ತೆ ಒಂದಾದ ಮಂಜು, ಮೋಕ್ಷಿತಾ, ಗೌತಮಿ; ಇದೇನು ಹೊಸ ಡ್ರಾಮಾ?
Bigg Boss Kannada Season 11
ಮದನ್​ ಕುಮಾರ್​
|

Updated on: Jan 14, 2025 | 10:31 PM

Share

ಸಾಕಷ್ಟು ಟ್ವಿಸ್ಟ್​ಗಳನ್ನು ಕಂಡ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಈಗ ಫಿನಾಲೆಯ ಹಂತಕ್ಕೆ ತಲುಪುತ್ತಿದೆ. ಆರಂಭದಿಂದಲೂ ಗೌತಮಿ ಜಾದವ್, ಮೋಕ್ಷಿತಾ ಪೈ ಹಾಗೂ ಉಗ್ರಂ ಮಂಜು ಅವರು ಆಪ್ತವಾಗಿದ್ದರು. ಆದರೆ ಒಂದಷ್ಟು ದಿನಗಳು ಕಳೆದ ಬಳಿಕ ಮೋಕ್ಷಿತಾ ಅವರು ರೆಬೆಲ್ ಆದರು. ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಜೊತೆ ಮನಸ್ತಾಪ ಮಾಡಿಕೊಂಡು ಆ ಗುಂಪಿನಿಂದ ಹೊರಗೆ ಬಂದಿದ್ದರು. ಎಷ್ಟೋ ಸಂದರ್ಭಗಳಲ್ಲಿ ಮೋಕ್ಷಿತಾ ಅವರು ಗೌತಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಈಗ ಗೇಮ್ ಬದಲಾಗಿದೆ.

ಮೋಕ್ಷಿತಾ ಪೈ ಅವರು ನಿಧಾನಕ್ಕೆ ಬದಲಾಗಿದ್ದಾರೆ. ಸ್ವಾಭಿಮಾನದ ಕಾರಣದಿಂದ ಗೌತಮಿ ಜೊತೆ ಕೈ ಜೋಡಿಸುವುದೇ ಇಲ್ಲ ಎಂದು ಹಠ ಮಾಡುತ್ತಿದ್ದ ಅವರು ಈಗ ಗೌತಮಿ ಜೊತೆ ಮತ್ತೆ ಆಪ್ತವಾಗಿದ್ದಾರೆ. ಉಗ್ರಂ ಮಂಜು ಕಂಡರೆ ಉರಿದುಬೀಳುತ್ತಿದ್ದ ಅವರು ಈಗ ಮಂಜು ಜೊತೆಗೆ ಎಮೋಷನಲ್ ಬಾಂಧವ್ಯ ಬೆಳೆಸಿಕೊಂಡಿದ್ದಾರೆ. ಹಾಗಾಗಿ ಮೊದಲಿನ ದಿನಗಳು ಮರುಕಳಿಸಿವೆ.

ಕೊನೇ ಹಂತದಲ್ಲಿ ಒಂದಾಗಿಯೇ ಆಡೋಣ ಎಂದು ಉಗ್ರಂ ಮಂಜು ಅವರು ಗೌತಮಿ ಮತ್ತು ಮೋಕ್ಷಿತಾಗೆ ಹೇಳಿದ್ದಾರೆ. ಮಿಡ್​ ಮೀಕ್ ಎಲಿಮಿನೇಷನ್ ಇರುವುದರಿಂದ ಒಬ್ಬರು ಹೊರಗೆ ಹೋಗುವುದು ಖಚಿತ. ಅದನ್ನು ನೆನಪಿಸಿಕೊಂಡು ಮೋಕ್ಷಿತಾ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಗೌತಮಿ ಮತ್ತು ಉಗ್ರಂ ಮಂಜು ಎದುರು ಮೋಕ್ಷಿತಾ ಸಿಕ್ಕಾಪಟ್ಟೆ ಎಮೋಷನಲ್ ಆಗಿದ್ದಾರೆ. ಇದೇನಿದು ಹೊಸ ಡ್ರಾಮಾ ಎಂಬ ಅನುಮಾನ ಕೆಲವರಿಗೆ ಮೂಡಿದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ

ಬಿಗ್ ಬಾಸ್ ಆಟದಲ್ಲಿ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಒಟ್ಟು 8 ಜನರ ನಡುವೆ ಪೈಪೋಟಿ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳಿಗೂ ಅವರದ್ದೇ ಆದಂತಹ ಅಭಿಮಾನಿಗಳ ಬಳಗ ಇದೆ. ವೀಕ್ಷಕರಿಂದ ವೋಟ್​ ಬ​ರಬೇಕು ಎಂದರೆ ಹಲವಾರು ಬಗೆಯ ಸರ್ಕಸ್ ಮಾಡಬೇಕಾಗುತ್ತದೆ. ಯಾರ ಜೊತೆಗೆ ಯಾರು ಆಪ್ತವಾಗಿದ್ದಾರೆ ಎಂಬುದು ಕೂಡ ವೀಕ್ಷಕರ ಮೇಲೆ ಪ್ರಭಾವ ಬೀರಬಹುದು. ಮೋಕ್ಷಿತಾ, ಗೌತಮಿ, ಮಂಜು ಒಂದಾಗಬೇಕು ಎಂದು ಬಹುತೇಕ ವೀಕ್ಷಕರು ಬಯಸಿದ್ದರು. ಅಂಥ ವೀಕ್ಷಕರನ್ನು ಸೆಳೆಯಬೇಕು ಎಂಬ ಕಾರಣದಿಂದಲೇ ಮೋಕ್ಷಿತಾ ಅವರು ಗೌತಮಿ ಮತ್ತು ಉಗ್ರಂ ಮಂಜು ಜೊತೆ ಕೈ ಜೋಡಿಸಿದ್ದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?