AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ

ಈ ದೋಣಿ ಸಮೀಪ ಚಪ್ಪಲಿ ಹಾಕಿಕೊಂಡು ಬರುವುದು ಅಥವಾ ಚಪ್ಪಲಿ ಹಾಕಿಕೊಂಡು ದೋಣಿ ಏರುವುದು ಎಲ್ಲರಿಗೂ ನಿಷಿದ್ಧ. ಆದಾಗ್ಯೂ ನಿಮಿಷಾ ಈ ದೋಣಿ ಬಳಿ ಚಪ್ಪಲಿ ಧರಿಸಿ ಹೋಗಿದ್ದಾರೆ. ಜತೆಗೆ ಚಪ್ಪಲಿ ಹಾಕಿಕೊಂಡೇ ದೋಣಿ ಏರಿದ್ದಾರೆ.

ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ
ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ
TV9 Web
| Edited By: |

Updated on: Sep 13, 2021 | 4:55 PM

Share

ನಟಿಯರಿಗೂ ಪೋಟೋಶೂಟ್​ಗೂ ಎಲ್ಲಿಲ್ಲದ ನಂಟು. ಸಿನಿಮಾ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೆಚ್ಚಿಸಿಕೊಳ್ಳೋಕೆ ಫೋಟೋಶೂಟ್​ ಮಾಡಿಸುತ್ತಾರೆ. ಈ ಮೂಲಕ ಸದಾ ಚಾಲ್ತಿಯಲ್ಲಿರಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರಿಗೆ ಇದೇ ಮುಳುವಾದ ಉದಾಹರಣೆ ಸಾಕಷ್ಟಿದೆ. ಫೋಟೋಶೂಟ್​ನಿಂದ ಸಂಕಷ್ಟಕ್ಕೆ ಸಿಲುಕಿದ ಸಾಕಷ್ಟು ನಟಿಯರಿದ್ದಾರೆ. ಮಲಯಾಳಂನ ಜನಪ್ರಿಯ ಕಿರುತೆರೆ ನಟಿ ನಿಮಿಷಾ ಬಂಧನಕ್ಕೆ ಒಳಗಾಗಿದ್ದಾರೆ. ದೇವಸ್ಥಾನವೊಂದರ ಸಂಪ್ರದಾಯ ಮುರಿದ ಆರೋಪ ಈ ನಟಿಯ ವಿರುದ್ಧ ಕೇಳಿ ಬಂದಿದೆ.  

ಕೇರಳದ ದೇವಸ್ಥಾನದವರು ಪಂಬಾ ನದಿಯಲ್ಲಿ ಹಾವಿನ ಆಕಾರದ ದೋಣಿ ನಿರ್ಮಾಣ ಮಾಡಿದ್ದರು. ಸಂಪ್ರದಾಯದ ಪ್ರಕಾರ ಮಹಿಳೆಯರು ಈ ದೋಣಿ ಏರುವಂತಿಲ್ಲ. ಅದರಲ್ಲೂ ಈ ದೋಣಿ ಸಮೀಪ ಚಪ್ಪಲಿ ಹಾಕಿಕೊಂಡು ಬರುವುದು ಅಥವಾ ಚಪ್ಪಲಿ ಹಾಕಿಕೊಂಡು ದೋಣಿ ಏರುವುದು ಎಲ್ಲರಿಗೂ ನಿಷಿದ್ಧ. ಆದಾಗ್ಯೂ ನಿಮಿಷಾ ಈ ದೋಣಿ ಬಳಿ ಚಪ್ಪಲಿ ಧರಿಸಿ ಹೋಗಿದ್ದಾರೆ. ಜತೆಗೆ ಚಪ್ಪಲಿ ಹಾಕಿಕೊಂಡೇ ದೋಣಿ ಏರಿದ್ದಾರೆ.

ಈ ಫೋಟೋಗಳನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಾವುದೇ ಒಪ್ಪಿಗೆ ಇಲ್ಲದೆ ಅವರು ದೋಣಿ ಹೇಗೆ ಏರಿದರು? ದೋಣಿ ಏರುವಾಗ ಚಪ್ಪಲಿ ಹಾಕಿಕೊಂಡಿದ್ದೇಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿತ್ತು. ಈಗ ನಟಿಯನ್ನು ಬಂಧಿಸಿ, ಜಾಮೀನಿನ ಮೇಲೆ ರಿಲೀಸ್​ ಮಾಡಲಾಗಿದೆ.

ಈ ವಿಚಾರವಾಗಿ ನಿಮಿಷಾ ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ‘ದೋಣಿ ಒಳಗೆ ಮಹಿಳೆಯರು ಹೋಗಬಾರದು, ಅಲ್ಲಿ ಚಪ್ಪಲಿ ಧರಿಸಬಾರದು ಎಂಬುದು ನನಗೆ ಗೊತ್ತಿರಲಿಲ್ಲ. ಹೀಗಾಗಿ, ಫೋಟೋ ಅಪ್​ಲೋಡ್​ ಮಾಡಿ ನಂತರ ಡಿಲೀಟ್​ ಮಾಡಿದೆ. ಈ ಫೋಟೋ ಪೋಸ್ಟ್​ ಮಾಡಿದ ನಂತರದಲ್ಲಿ ನನಗೆ ಬೆದರಿಕೆ ಹಾಗೂ ಅಶ್ಲೀಲ ನಿಂದನೆಗಳು ಬರುತ್ತಿವೆ. ನಿತ್ಯ ಹಲವು ಕರೆಗಳು ಬರುತ್ತಿವೆ. ಅವರೆಲ್ಲ ಯಾರು ಎಂಬುದೇ ನನಗೆ ಗೊತ್ತಿಲ್ಲ. ಇದು ಈಗ ನನ್ನ ಕುಟುಂಬವನ್ನೂ ಇಕ್ಕಟ್ಟಿಗೆ ಸಿಲುಕಿಸಿದೆ’ ಎಂದಿದ್ದಾರೆ.

  ಇದನ್ನೂ ಓದಿ: ಅಚ್ಚರಿ ಮೂಡಿಸಿದ ಸಮಂತಾ ನಡೆ; ವಿಚ್ಛೇದನವಾಗಿದ್ದು ಖಚಿತ ಎಂದ ಫ್ಯಾನ್ಸ್​

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!