AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ

ಈ ದೋಣಿ ಸಮೀಪ ಚಪ್ಪಲಿ ಹಾಕಿಕೊಂಡು ಬರುವುದು ಅಥವಾ ಚಪ್ಪಲಿ ಹಾಕಿಕೊಂಡು ದೋಣಿ ಏರುವುದು ಎಲ್ಲರಿಗೂ ನಿಷಿದ್ಧ. ಆದಾಗ್ಯೂ ನಿಮಿಷಾ ಈ ದೋಣಿ ಬಳಿ ಚಪ್ಪಲಿ ಧರಿಸಿ ಹೋಗಿದ್ದಾರೆ. ಜತೆಗೆ ಚಪ್ಪಲಿ ಹಾಕಿಕೊಂಡೇ ದೋಣಿ ಏರಿದ್ದಾರೆ.

ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ
ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ
TV9 Web
| Edited By: |

Updated on: Sep 13, 2021 | 4:55 PM

Share

ನಟಿಯರಿಗೂ ಪೋಟೋಶೂಟ್​ಗೂ ಎಲ್ಲಿಲ್ಲದ ನಂಟು. ಸಿನಿಮಾ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೆಚ್ಚಿಸಿಕೊಳ್ಳೋಕೆ ಫೋಟೋಶೂಟ್​ ಮಾಡಿಸುತ್ತಾರೆ. ಈ ಮೂಲಕ ಸದಾ ಚಾಲ್ತಿಯಲ್ಲಿರಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರಿಗೆ ಇದೇ ಮುಳುವಾದ ಉದಾಹರಣೆ ಸಾಕಷ್ಟಿದೆ. ಫೋಟೋಶೂಟ್​ನಿಂದ ಸಂಕಷ್ಟಕ್ಕೆ ಸಿಲುಕಿದ ಸಾಕಷ್ಟು ನಟಿಯರಿದ್ದಾರೆ. ಮಲಯಾಳಂನ ಜನಪ್ರಿಯ ಕಿರುತೆರೆ ನಟಿ ನಿಮಿಷಾ ಬಂಧನಕ್ಕೆ ಒಳಗಾಗಿದ್ದಾರೆ. ದೇವಸ್ಥಾನವೊಂದರ ಸಂಪ್ರದಾಯ ಮುರಿದ ಆರೋಪ ಈ ನಟಿಯ ವಿರುದ್ಧ ಕೇಳಿ ಬಂದಿದೆ.  

ಕೇರಳದ ದೇವಸ್ಥಾನದವರು ಪಂಬಾ ನದಿಯಲ್ಲಿ ಹಾವಿನ ಆಕಾರದ ದೋಣಿ ನಿರ್ಮಾಣ ಮಾಡಿದ್ದರು. ಸಂಪ್ರದಾಯದ ಪ್ರಕಾರ ಮಹಿಳೆಯರು ಈ ದೋಣಿ ಏರುವಂತಿಲ್ಲ. ಅದರಲ್ಲೂ ಈ ದೋಣಿ ಸಮೀಪ ಚಪ್ಪಲಿ ಹಾಕಿಕೊಂಡು ಬರುವುದು ಅಥವಾ ಚಪ್ಪಲಿ ಹಾಕಿಕೊಂಡು ದೋಣಿ ಏರುವುದು ಎಲ್ಲರಿಗೂ ನಿಷಿದ್ಧ. ಆದಾಗ್ಯೂ ನಿಮಿಷಾ ಈ ದೋಣಿ ಬಳಿ ಚಪ್ಪಲಿ ಧರಿಸಿ ಹೋಗಿದ್ದಾರೆ. ಜತೆಗೆ ಚಪ್ಪಲಿ ಹಾಕಿಕೊಂಡೇ ದೋಣಿ ಏರಿದ್ದಾರೆ.

ಈ ಫೋಟೋಗಳನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಾವುದೇ ಒಪ್ಪಿಗೆ ಇಲ್ಲದೆ ಅವರು ದೋಣಿ ಹೇಗೆ ಏರಿದರು? ದೋಣಿ ಏರುವಾಗ ಚಪ್ಪಲಿ ಹಾಕಿಕೊಂಡಿದ್ದೇಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿತ್ತು. ಈಗ ನಟಿಯನ್ನು ಬಂಧಿಸಿ, ಜಾಮೀನಿನ ಮೇಲೆ ರಿಲೀಸ್​ ಮಾಡಲಾಗಿದೆ.

ಈ ವಿಚಾರವಾಗಿ ನಿಮಿಷಾ ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ‘ದೋಣಿ ಒಳಗೆ ಮಹಿಳೆಯರು ಹೋಗಬಾರದು, ಅಲ್ಲಿ ಚಪ್ಪಲಿ ಧರಿಸಬಾರದು ಎಂಬುದು ನನಗೆ ಗೊತ್ತಿರಲಿಲ್ಲ. ಹೀಗಾಗಿ, ಫೋಟೋ ಅಪ್​ಲೋಡ್​ ಮಾಡಿ ನಂತರ ಡಿಲೀಟ್​ ಮಾಡಿದೆ. ಈ ಫೋಟೋ ಪೋಸ್ಟ್​ ಮಾಡಿದ ನಂತರದಲ್ಲಿ ನನಗೆ ಬೆದರಿಕೆ ಹಾಗೂ ಅಶ್ಲೀಲ ನಿಂದನೆಗಳು ಬರುತ್ತಿವೆ. ನಿತ್ಯ ಹಲವು ಕರೆಗಳು ಬರುತ್ತಿವೆ. ಅವರೆಲ್ಲ ಯಾರು ಎಂಬುದೇ ನನಗೆ ಗೊತ್ತಿಲ್ಲ. ಇದು ಈಗ ನನ್ನ ಕುಟುಂಬವನ್ನೂ ಇಕ್ಕಟ್ಟಿಗೆ ಸಿಲುಕಿಸಿದೆ’ ಎಂದಿದ್ದಾರೆ.

  ಇದನ್ನೂ ಓದಿ: ಅಚ್ಚರಿ ಮೂಡಿಸಿದ ಸಮಂತಾ ನಡೆ; ವಿಚ್ಛೇದನವಾಗಿದ್ದು ಖಚಿತ ಎಂದ ಫ್ಯಾನ್ಸ್​

ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್