AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ

ಈ ದೋಣಿ ಸಮೀಪ ಚಪ್ಪಲಿ ಹಾಕಿಕೊಂಡು ಬರುವುದು ಅಥವಾ ಚಪ್ಪಲಿ ಹಾಕಿಕೊಂಡು ದೋಣಿ ಏರುವುದು ಎಲ್ಲರಿಗೂ ನಿಷಿದ್ಧ. ಆದಾಗ್ಯೂ ನಿಮಿಷಾ ಈ ದೋಣಿ ಬಳಿ ಚಪ್ಪಲಿ ಧರಿಸಿ ಹೋಗಿದ್ದಾರೆ. ಜತೆಗೆ ಚಪ್ಪಲಿ ಹಾಕಿಕೊಂಡೇ ದೋಣಿ ಏರಿದ್ದಾರೆ.

ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ
ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ
TV9 Web
| Edited By: |

Updated on: Sep 13, 2021 | 4:55 PM

Share

ನಟಿಯರಿಗೂ ಪೋಟೋಶೂಟ್​ಗೂ ಎಲ್ಲಿಲ್ಲದ ನಂಟು. ಸಿನಿಮಾ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೆಚ್ಚಿಸಿಕೊಳ್ಳೋಕೆ ಫೋಟೋಶೂಟ್​ ಮಾಡಿಸುತ್ತಾರೆ. ಈ ಮೂಲಕ ಸದಾ ಚಾಲ್ತಿಯಲ್ಲಿರಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರಿಗೆ ಇದೇ ಮುಳುವಾದ ಉದಾಹರಣೆ ಸಾಕಷ್ಟಿದೆ. ಫೋಟೋಶೂಟ್​ನಿಂದ ಸಂಕಷ್ಟಕ್ಕೆ ಸಿಲುಕಿದ ಸಾಕಷ್ಟು ನಟಿಯರಿದ್ದಾರೆ. ಮಲಯಾಳಂನ ಜನಪ್ರಿಯ ಕಿರುತೆರೆ ನಟಿ ನಿಮಿಷಾ ಬಂಧನಕ್ಕೆ ಒಳಗಾಗಿದ್ದಾರೆ. ದೇವಸ್ಥಾನವೊಂದರ ಸಂಪ್ರದಾಯ ಮುರಿದ ಆರೋಪ ಈ ನಟಿಯ ವಿರುದ್ಧ ಕೇಳಿ ಬಂದಿದೆ.  

ಕೇರಳದ ದೇವಸ್ಥಾನದವರು ಪಂಬಾ ನದಿಯಲ್ಲಿ ಹಾವಿನ ಆಕಾರದ ದೋಣಿ ನಿರ್ಮಾಣ ಮಾಡಿದ್ದರು. ಸಂಪ್ರದಾಯದ ಪ್ರಕಾರ ಮಹಿಳೆಯರು ಈ ದೋಣಿ ಏರುವಂತಿಲ್ಲ. ಅದರಲ್ಲೂ ಈ ದೋಣಿ ಸಮೀಪ ಚಪ್ಪಲಿ ಹಾಕಿಕೊಂಡು ಬರುವುದು ಅಥವಾ ಚಪ್ಪಲಿ ಹಾಕಿಕೊಂಡು ದೋಣಿ ಏರುವುದು ಎಲ್ಲರಿಗೂ ನಿಷಿದ್ಧ. ಆದಾಗ್ಯೂ ನಿಮಿಷಾ ಈ ದೋಣಿ ಬಳಿ ಚಪ್ಪಲಿ ಧರಿಸಿ ಹೋಗಿದ್ದಾರೆ. ಜತೆಗೆ ಚಪ್ಪಲಿ ಹಾಕಿಕೊಂಡೇ ದೋಣಿ ಏರಿದ್ದಾರೆ.

ಈ ಫೋಟೋಗಳನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯಾವುದೇ ಒಪ್ಪಿಗೆ ಇಲ್ಲದೆ ಅವರು ದೋಣಿ ಹೇಗೆ ಏರಿದರು? ದೋಣಿ ಏರುವಾಗ ಚಪ್ಪಲಿ ಹಾಕಿಕೊಂಡಿದ್ದೇಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಅಲ್ಲದೆ, ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿತ್ತು. ಈಗ ನಟಿಯನ್ನು ಬಂಧಿಸಿ, ಜಾಮೀನಿನ ಮೇಲೆ ರಿಲೀಸ್​ ಮಾಡಲಾಗಿದೆ.

ಈ ವಿಚಾರವಾಗಿ ನಿಮಿಷಾ ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ‘ದೋಣಿ ಒಳಗೆ ಮಹಿಳೆಯರು ಹೋಗಬಾರದು, ಅಲ್ಲಿ ಚಪ್ಪಲಿ ಧರಿಸಬಾರದು ಎಂಬುದು ನನಗೆ ಗೊತ್ತಿರಲಿಲ್ಲ. ಹೀಗಾಗಿ, ಫೋಟೋ ಅಪ್​ಲೋಡ್​ ಮಾಡಿ ನಂತರ ಡಿಲೀಟ್​ ಮಾಡಿದೆ. ಈ ಫೋಟೋ ಪೋಸ್ಟ್​ ಮಾಡಿದ ನಂತರದಲ್ಲಿ ನನಗೆ ಬೆದರಿಕೆ ಹಾಗೂ ಅಶ್ಲೀಲ ನಿಂದನೆಗಳು ಬರುತ್ತಿವೆ. ನಿತ್ಯ ಹಲವು ಕರೆಗಳು ಬರುತ್ತಿವೆ. ಅವರೆಲ್ಲ ಯಾರು ಎಂಬುದೇ ನನಗೆ ಗೊತ್ತಿಲ್ಲ. ಇದು ಈಗ ನನ್ನ ಕುಟುಂಬವನ್ನೂ ಇಕ್ಕಟ್ಟಿಗೆ ಸಿಲುಕಿಸಿದೆ’ ಎಂದಿದ್ದಾರೆ.

  ಇದನ್ನೂ ಓದಿ: ಅಚ್ಚರಿ ಮೂಡಿಸಿದ ಸಮಂತಾ ನಡೆ; ವಿಚ್ಛೇದನವಾಗಿದ್ದು ಖಚಿತ ಎಂದ ಫ್ಯಾನ್ಸ್​

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ