AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಬಿ ಕುರಿ ಆದೆವು’; ಹಣದ ವ್ಯವಹಾರದಿಂದ ಬಿಗ್ ಬಾಸ್​ ಮನೆ ಅಲ್ಲೋಲ ಕಲ್ಲೋಲ

‘ಒಂದು ಟೀಂ ಎಂದಾಗ ಯಾರ ಬಳಿ ಎಷ್ಟು ಹಣ ಇದೆ ಎಂಬುದು ಗೊತ್ತಾಗಬೇಕು. ಇಲ್ಲದಿದ್ದರೆ ಏನು ಪ್ರಯೋಜನ. ನಾನು ಆಟ ಆಡಲ್ಲ. ತನಿಷಾ ಜೊತೆ ಸೇರಿ ಕುರಿ ಆದೆವು ಅನಿಸ್ತಿದೆ’ ಎಂದಿದ್ದಾರೆ ತುಕಾಲಿ ಸಂತೋಷ್.

‘ನಂಬಿ ಕುರಿ ಆದೆವು’; ಹಣದ ವ್ಯವಹಾರದಿಂದ ಬಿಗ್ ಬಾಸ್​ ಮನೆ ಅಲ್ಲೋಲ ಕಲ್ಲೋಲ
ತುಕಾಲಿ ಸಂತೋಷ್​
ರಾಜೇಶ್ ದುಗ್ಗುಮನೆ
|

Updated on: Dec 21, 2023 | 7:33 AM

Share

ಬಿಗ್ ಬಾಸ್ (Bigg Boss) ಮನೆಗೆ ಹೊರ ಜಗತ್ತಿನ ಸಂಪರ್ಕ ಇರುವುದಿಲ್ಲ. ಎಲ್ಲಾ ಸ್ಪರ್ಧಿಗಳು ಇಲ್ಲಿ ತಮ್ಮದೇ ಆದ ಲೋಕ ಸೃಷ್ಟಿ ಮಾಡಿಕೊಳ್ಳಬೇಕು. ಏನಾದರೂ ಕೊಂಡುಕೊಳ್ಳೋಣ ಎಂದರೆ ಯಾವುದೇ ಶಾಪ್ ಇರುವುದಿಲ್ಲ. ಬಿಗ್ ಬಾಸ್ ಏನು ನೀಡುತ್ತಾರೋ ಅದನ್ನೇ ಸ್ವೀಕರಿಸಬೇಕು. ಈಗ ಬಿಗ್ ಬಾಸ್​ನಲ್ಲಿ ಹಣದ ವ್ಯವಹಾರ ಚಾಲ್ತಿಗೆ ಬಂದಿದೆ. ಇದರಿಂದ ಬಿಗ್ ಬಾಸ್​ನಲ್ಲಿ ಕಿತ್ತಾಟಗಳು ನಡೆಯುತ್ತಿವೆ. ಸ್ಪರ್ಧಿಗಳ ಮಧ್ಯೆಯೇ ಜಗಳ ಏರ್ಪಡುತ್ತಿದೆ. ಸಂತೋಷ್ ಅವರು ಟೀಂ ಲೀಡರ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ಬಿಗ್ ಬಾಸ್​ನಲ್ಲಿ ಎರಡು ಟೀಂ ಮಾಡಲಾಗಿದೆ. ಒಂದು ತಂಡಕ್ಕೆ ತನಿಷಾ ಮತ್ತೊಂದು ತಂಡಕ್ಕೆ ಸಂಗೀತಾ ಲೀಡರ್. ಪ್ರತಿ ತಂಡಕ್ಕೆ 11 ಸಾವಿರ ರೂಪಾಯಿ ನೀಡಲಾಗುತ್ತದೆ. ತಮ್ಮಿಷ್ಟದ ಆಟಗಾರರನ್ನು ಅವರು ಖರೀದಿ ಮಾಡಬಹುದು. ಸಂಗೀತಾ ಅವರು ಮೈಕಲ್, ಅವಿನಾಶ್, ನಮ್ರತಾ ಹಾಗೂ ಪ್ರತಾಪ್​ನ ಖರೀದಿ ಮಾಡಿದರು. ತನಿಷಾ ಅವರು ಕಾರ್ತಿಕ್, ವಿನಯ್, ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್​ನ ಖರೀದಿ ಮಾಡಿದರು. ಆದರೆ, ಯಾರಿಗೆ ಎಷ್ಟು ಹಣ ನೀಡಿ ಖರೀದಿಸಲಾಗಿದೆ ಎನ್ನೋ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.

ತನಿಷಾ ಅವರು ಗೆಳೆಯ ಎನ್ನುವ ಕಾರಣಕ್ಕೆ ಕಾರ್ತಿಕ್​ಗೆ ಅತಿ ಹೆಚ್ಚು ಅಂದರೆ 4,300 ರೂಪಾಯಿ ನೀಡಿ ಖರೀದಿ ಮಾಡಿದರು. ತುಕಾಲಿ ಸಂತೋಷ್​ಗೆ ಕೇವಲ ಒಂದು ಸಾವಿರ ರೂಪಾಯಿ ನೀಡಲಾಗಿದೆ. ಕಾರ್ತಿಕ್​ಗೆ ಎಷ್ಟು ಹಣ ನೀಡಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಸಂತೋಷ್ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಆದರೆ, ಇದಕ್ಕೆ ತನಿಷಾ ಅವಕಾಶ ನೀಡಲೇ ಇಲ್ಲ. ಈ ಬಗ್ಗೆ ಸಂತೋಷ್ ಅವರು ವಿನಯ್ ಬಳಿ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: ‘ನಾವು ಜೋಡೆತ್ತುಗಳು’: ಬಿಗ್ ಬಾಸ್ ಮನೆಯಲ್ಲಿ ದ್ವೇಷ ಮರೆತು ಒಂದಾದ ವಿನಯ್-ಕಾರ್ತಿಕ್

‘ಒಂದು ಟೀಂ ಎಂದಾಗ ಯಾರ ಬಳಿ ಎಷ್ಟು ಹಣ ಇದೆ ಎಂಬುದು ಗೊತ್ತಾಗಬೇಕು. ಇಲ್ಲದಿದ್ದರೆ ಏನು ಪ್ರಯೋಜನ. ನಾನು ಆಟ ಆಡಲ್ಲ. ತನಿಷಾ ಜೊತೆ ಸೇರಿ ಕುರಿ ಆದೆವು ಅನಿಸ್ತಿದೆ’ ಎಂದಿದ್ದಾರೆ ತುಕಾಲಿ ಸಂತೋಷ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ