AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ

ಮೂಸೆ ಸೋಶಿಯಲ್​ ಮೀಡಿಯಾ ಇನ್​ಫ್ಲ್ಯುನ್ಸೆರ್​. ಇವರು ಭಿನ್ನ ರೀತಿಯ ವಿಡಿಯೋ ಮೂಲಕ ಹೆಸರು ಮಾಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಎಲ್ಲರ ಗಮನ ಸೆಳೆಯೋಕೆ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ .  

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ
Moose Jattana
Follow us
TV9 Web
| Updated By: Digi Tech Desk

Updated on:Aug 13, 2021 | 10:06 AM

ಬಿಗ್ ಬಾಸ್​ ಒಟಿಟಿ ಶೋ ಆರಂಭಗೊಂಡಿದ್ದು, ಸಾಕಷ್ಟು ಗಮನಸೆಳೆಯುತ್ತಿದೆ. ಮೊದಲ ಆರು ವಾರ ಈ ಶೋ ಕೇವಲ ಒಟಿಟಿಯಲ್ಲಿ ಮಾತ್ರ ಪ್ರಸಾರವಾಗಲಿದ್ದು, ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಈ ಮಧ್ಯೆ ಮೂಸೆ ಜಟ್ಟಾಣ ಅವರು ತಮ್ಮ ಸೆಕ್ಸುವಾಲಿಟಿ ಬಗ್ಗೆ ಹೇಳಿಕೊಂಡಿದ್ದಾರೆ.

ಪ್ರತೀಕ್​ ಸೆಹಜ್​ಪಾಲ್​ ಹಾಗೂ ಮೂಸೆ ಬಿಗ್​ ಬಾಸ್​ ಮನೆಯಲ್ಲಿ ಕೂತು ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅವರು ಈ ವಿಚಾರ ಬಿಚ್ಚಿಟ್ಟಿದ್ದಾರೆ. ‘ನಾನು ಹುಡುಗರ ಕಡೆ ಹೆಚ್ಚು ಅಟ್ರ್ಯಾಕ್ಟ್​ ಆಗುತ್ತೇನೆ. ಆದರೆ, ಮದುವೆ ವಿಚಾರಕ್ಕೆ ಬರೋದಾದರೆ ನನ್ನ ಆಲೋಚನೆಯೇ ಬೇರೆ. ಯಾವುದಾದರೂ ಹುಡುಗಿ ಜತೆ ಒಳ್ಳೆಯ ಬಂಧ ಬೆಳೆದರೆ ನಾನು ಅವಳನ್ನೇ ಮದುವೆ ಆಗುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನಾನು ಸೆಕ್ಸುವಲ್​’ ಎಂದು ಮೂಸೆ ಹೇಳಿದ್ದಾರೆ.

ಮೂಸೆ ಸೋಶಿಯಲ್​ ಮೀಡಿಯಾ ಇನ್​ಫ್ಲ್ಯುನ್ಸೆರ್​. ಇವರು ಭಿನ್ನ ರೀತಿಯ ವಿಡಿಯೋ ಮೂಲಕ ಹೆಸರು ಮಾಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಎಲ್ಲರ ಗಮನ ಸೆಳೆಯೋಕೆ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ .

ಆಗಸ್ಟ್ 8ರಿಂದ ಬಿಗ್​ ಬಾಸ್ ಒಟಿಟಿ ಆರಂಭವಾಗಿದೆ. ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸೇರಿ ಸಾಕಷ್ಟು ಜನರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಮೊದಲ ಆರು ವಾರಗಳ ಕಾಲ ಒಟಿಟಿಗೆ ಮಾತ್ರ ಇದು ಸೀಮಿತವಾಗಿದೆ. ಒಟಿಟಿ ಶೋ ಅನ್ನು ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್​ ಜೋಹರ್​ ಅವರು ನಡೆಸಿಕೊಡುತ್ತಿದ್ದಾರೆ. ಟಿವಿಯಲ್ಲಿ ಸಲ್ಮಾನ್​ ಖಾನ್​ ಅವರೇ ಶೋ ನಡೆಸಿಕೊಡಲಿದ್ದಾರೆ. ಇದು ಬಿಗ್​ ಬಾಸ್​ 15ನೇ ಸೀಸನ್​ ಆಗಿದೆ. ಕನ್ನಡ ಬಿಗ್​ ಬಾಸ್​ ಸೀಸನ್​ 8 ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಮಂಜು ಪಾವಗಡ ಅವರು ವಿನ್ನರ್​ ಆಗಿ ಹೊರ ಹೊಮ್ಮಿದ್ದರು. ಇದಾದ ಬೆನ್ನಲ್ಲೇ ಹಿಂದಿ ಬಿಗ್​ ಬಾಸ್​  ಆರಂಭಗೊಂಡಿದೆ.

ಇದನ್ನೂ ಓದಿ: ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

Published On - 7:13 am, Fri, 13 August 21

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ