AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಗೆ ಈ ರೀತಿಯಲ್ಲಿ ಬಿಗ್ ಬಾಸ್ ಆರಂಭಿಸೋಕೆ ಇಷ್ಟ ಇಲ್ಲ’; ನೇರವಾಗಿ ಹೇಳಿದ ಸುದೀಪ್

ಕಿಚ್ಚ ಸುದೀಪ್ ಬಿಗ್ ಬಾಸ್ ಕನ್ನಡ 12 ಆರಂಭದಲ್ಲಿ ತಾಯಿ ಸರೋಜಾ ಅವರ ನೆನಪಿನಲ್ಲಿ ಭಾವುಕರಾದರು. ತಾಯಿಯ ಶಾಲು ನೀಡಿದಾಗ ಕಣ್ಣೀರಾದ ಸುದೀಪ್, ಎಮೋಷನಲ್ ಆಗಿ ಶೋ ನಡೆಸಲು ಇಷ್ಟವಿರಲಿಲ್ಲ ಎಂದರು. ನಂತರ ಶೋಗೆ ಹೊಸ ಹುರುಪು ತುಂಬಿದರು. ಈ ಸೀಸನ್ 'ಒಂಟಿ ಮತ್ತು ಜಂಟಿ' ಎಂಬ ವಿಶೇಷ ಕಾನ್ಸೆಪ್ಟ್‌ನೊಂದಿಗೆ ಶುರುವಾಗಿದೆ.

‘ನಂಗೆ ಈ ರೀತಿಯಲ್ಲಿ ಬಿಗ್ ಬಾಸ್ ಆರಂಭಿಸೋಕೆ ಇಷ್ಟ ಇಲ್ಲ’; ನೇರವಾಗಿ ಹೇಳಿದ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 28, 2025 | 8:11 PM

Share

ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ನ ಯಾವಾಗಲೂ ಜೋಶ್​ನಿಂದ ಆರಂಭಿಸಲು ಇಷ್ಟಪಡುತ್ತಾರೆ. ಈ ಬಾರಿಯೂ ಅವರು ದೊಡ್ಮನೆ ಆಟವನ್ನು ಜೋಶ್​ನಿಂದಲೇ ಪ್ರಾರಂಭಿಸುವವರಿದ್ದರು. ಆದರೆ, ಆ ಒಂದು ವಿಚಾರ ಅವರನ್ನು ಭಾವುಕರನ್ನಾಗಿ ಮಾಡಿಸಿತು. ಅದುವೇ ತಾಯಿ ಶಾಲು. ಬಿಗ್ ಬಾಸ್ ಆರಂಭಕ್ಕೂ ಮೊದಲು ಸುದೀಪ್ ತಾಯಿಯನ್ನು ನೆನಪಿಸಿಕೊಳ್ಳುವ ಕೆಲಸ ಮಾಡಲಾಯಿತು. ಹೀಗೆ ಬಿಗ್ ಬಾಸ್ ಆರಂಭಿಸೋಕೆ ಅವರಿಗೆ ಇಷ್ಟ ಆಗಿಲ್ಲ.

ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಎಪಿಸೋಡ್ ನಡೆಸಿಕೊಡುವಾಗ ಅವರ ತಾಯಿ ಸರೋಜಾ ನಿಧನ ಹೊಂದಿದರು. ಆಗ ಅವರು ಶೋನ ಅರ್ಧಕ್ಕೆ ಬಿಟ್ಟು ತಾಯಿ ನೋಡಲು ಓಡೋಡಿ ಹೋದರು. ಆದರೆ, ಅವರ ತಾಯಿ ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಇದು ಸುದೀಪ್ ಅವರಿಗೆ ನುಂಗಲಾರದ ತುತ್ತಾಯಿತು. ಇದಾದ ಬಳಿಕ ಸುದೀಪ್ ಅವರು ಅನೇಕ ಬಾರಿ ತಾಯಿಯನ್ನು ನೆನಪಿಸಿಕೊಳ್ಳುವ ಕೆಲಸ ಮಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೂ ಮೊದಲು ಸುದೀಪ್ ಅವರ ತಾಯಿಯನ್ನು ಬಿಗ್ ಬಾಸ್ ನೆನಪಿಸಿಕೊಂಡರು. ಸುದೀಪ್ ತಾಯಿ ಸರೋಜಾ ಅವರ ಪ್ರೀತಿಯ ಶಾಲನ್ನು ಸುದೀಪ್​ಗೆ ನೀಡಲಾಯಿತು. ಇದನ್ನು ನೋಡಿ ಸುದೀಪ್ ಭಾವುಕರಾದರು. ಈ ವೇಳೆ ಪರದೆ ಮೇಲೆ ಸುದೀಪ್ ತಾಯಿಯ ಫೋಟೋವನ್ನು ಕೂಡ ಹಾಕಲಾಯಿತು. ಅವರು ಅದೇ ಶಾಲನ್ನು ಹೊದ್ದುಕೊಂಡಿದ್ದರು.

ಇದನ್ನೂ ಓದಿ
Image
‘ಹೀಗೆನೆ ಹನುಮಂತ ಗೆದ್ರು’; ಲುಂಗಿ ಉಟ್ಟು ಬಂದ ಗಿಲ್ಲಿಗೆ ಸುದೀಪ್ ಕೌಂಟರ್
Image
‘ಬಿಗ್ ಬಾಸ್’ಗೆ ಮಂಗಳೂರಿನ ರಕ್ಷಿತಾ ಎಂಟ್ರಿ; ಮಾತು ಕೇಳಿ ಸುದೀಪ್ ಶಾಕ್
Image
ಊಹಿಸಿದ್ದಕ್ಕಿಂತ ಹೆಚ್ಚಿನ ಸ್ಪರ್ಧಿಗಳು ಬಿಗ್ ಬಾಸ್​ಗೆ ಎಂಟ್ರಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ನನಗೆ ಎಮೋಷನಲ್​ ಆಗಿ ಶೋನ ಆರಂಭಿಸೋಕೆ ಇಷ್ಟ ಇಲ್ಲ’ ಎಂದು ಹೇಳಿದರು. ಆ ಬಳಿಕ ಫೋಟೋನ ಸ್ಕ್ರೀನ್ ಮೇಲಿನಿಂದ ತೆಗೆಯಲಾಯಿತು. ಆ ಬಳಿಕ ಸುದೀಪ್ ಅವರು ತಮ್ಮ ಎನರ್ಜಿಯೊಂದಿಗೆ ಶೋ ಆರಂಭಿಸಿದರು.

ಇದನ್ನೂ ಓದಿ: ‘ನಿಮ್ಮದು ಫ್ರಾಡ್ ಬಿಸ್ನೆಸಾ’; ಡಾಗ್ ಸತೀಶ್​ಗೆ ನೇರವಾಗಿ ಕೇಳಿದ ಸುದೀಪ್

ಈ ಬಾರಿ ಒಂಟಿ ಹಾಗೂ ಜಂಟಿ ಎಂಬ ಕಾನ್ಸೆಪ್ಟ್​ನೊಂದಿಗೆ ಶೋ ಮಾಡಲಾಗುತ್ತಿದೆ. ‘ಒಂಟಿ, ಒಂಟಿ ಸಲಗ ಆಗಿ ಆಟ ಆಡ್ತಾರೆ. ಜಂಟಿ, ಜಂಟಿಯಾಗಿ ಆಟ ಆಡ್ತಾರೆ. ಇದನ್ನು ಅಲ್ಲಿ ನೆರೆದವರು ನಿರ್ಧಾರ ಮಾಡುತ್ತಾರೆ. ಶೇ. 75 ಮೇಲಿದ್ದರೆ ಒಂಟಿ, ಶೇ.75ಕ್ಕಿಂತ ಕಡಿಮೆ ಇದ್ದರೆ ಜಂಟಿ ಆಗಿ ಎಂಟ್ರಿ ಕೊಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ