AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?

ಕಲರ್ಸ್ ಕನ್ನಡದ ಹೊಸ ಧಾರಾವಾಹಿ ‘ಮುದ್ದು ಸೊಸೆ’ ತ್ರಿವಿಕ್ರಂ ಮತ್ತು ಪ್ರತಿಮಾ ಠಾಕೂರ್ ಅವರ ಅಭಿನಯದಿಂದ ಸುದ್ದಿಯಲ್ಲಿದೆ. ತ್ರಿವಿಕ್ರಂ ‘ಬಿಗ್ ಬಾಸ್’ ಮೂಲಕ ಜನಪ್ರಿಯರಾದ ನಟ. ಈ ಧಾರಾವಾಹಿ ಅವರ ವೃತ್ತಿಜೀವನದಲ್ಲಿ ಹೊಸ ತಿರುವನ್ನು ತರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ .

‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
ತ್ರಿವಿಕ್ರಂ-ಪ್ರತಿಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 15, 2025 | 8:29 AM

Share

ಕಲರ್ಸ್ ಕನ್ನಡದಲ್ಲಿ ‘ಮುದ್ದು ಸೊಸೆ’ ಹೆಸರಿನ (Muddu Sose Serial) ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಮೊದಲ ದಿನ ವೀಕ್ಷಕರಿಂದ ಮೆಚ್ಚುಗೆ ಪಡೆದಿದೆ. ‘ಬಿಗ್ ಬಾಸ್’ ಮೂಲಕ ಫೇಮಸ್ ಆದ ತ್ರಿವಿಕ್ರಂ ಅವರು ಈ ಚಿತ್ರಕ್ಕೆ ಹೀರೋ ಆದರೆ, ಪ್ರತಿಮಾ ಠಾಕೂರ್ ಅವರು ಚಿತ್ರಕ್ಕೆ ನಾಯಕಿ. ಇಬ್ಬರ ಮಧ್ಯೆ ವಯಸ್ಸಿನ ಅಂತರ ಸಾಕಷ್ಟಿದೆ. ಇದಕ್ಕೆ ಕಾರಣ ಆಗಿದ್ದು ಧಾರಾವಾಹಿಯ ಕಥೆ ಎನ್ನಲಾಗಿದೆ. ಆ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಾ ಇದ್ದೇವೆ.

‘ಮುದ್ದು ಸೊಸೆ’ ಧಾರಾವಾಹಿಯಲ್ಲಿ ತ್ರಿವಿಕ್ರಂ ಅವರು ಹೀರೋ ಆಗಿ ನಟಿಸಿದರೆ, ಪ್ರತಿಮಾ ಠಾಕೂರ್ ಅವರು ನಾಯಕಿ. ಈ ಚಿತ್ರದಲ್ಲಿ ತ್ರಿವಿಕ್ರಂ ಅವರು ಊರಿನ ಚಿಕ್ಕ ಗೌಡ ಭದ್ರೇ ಗೌಡನಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಊರಿಗೆ ಅವರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಅವರು ಯಾರಿಗೇ ಸಿಕ್ಕರೂ ಎಲ್ಲರೂ ಪ್ರೀತಿಯಿಂದ ಮಾತನಾಡಿಸುತ್ತಾರೆ.

ಇದನ್ನೂ ಓದಿ
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
Image
860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ಮರುಗಿದ್ದ ನಟ

ಕಥಾ ನಾಯಕ ಭದ್ರೇ ಗೌಡ ಮದುವೆ ಬಗ್ಗೆ ಆಸಕ್ತಿ ಎಂಬುದೇ ಇಲ್ಲ. ಈ ಕಾರಣದಿಂದಲೇ ಆ ಬಗ್ಗೆ ಆಲೋಚಿಸುವುದೇ ಇಲ್ಲ. ಆದರೆ, ಮನೆಯವರ ಒತ್ತಾಯಕ್ಕೆ ಕಥಾ ನಾಯಕ ಮದುವೆ ಆಗಲು ಒಪ್ಪುತ್ತಾನೆ. ಆತ ಮದುವೆ ಆಗೋದು ಶಿಕ್ಷಣ ಪಡೆಯುತ್ತಿರುವ ಹುಡುಗಿ ವಿದ್ಯಾಳನ್ನು (ಪ್ರತಿಮಾ ಠಾಕೂರ್). ಇಬ್ಬರ ಮಧ್ಯೆ ಸಾಕಷ್ಟು ವಯಸ್ಸಿನ ಅಂತರ ಇರುತ್ತದೆ. ಅದನ್ನೂ ಲೆಕ್ಕಿಸದೇ ವಿವಾಹ ನಡೆಯುತ್ತದೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ನಿಜವಾಗಲೂ ವಯಸ್ಸಿನ ಅಂತರ ಇರುವವರನ್ನೇ ಕರೆದುಕೊಂಡು ಬರಲಾಗಿದೆ ಎಂದು ಹೇಳಲಾಗುತ್ತಿದೆ.

ತ್ರಿವಿಕ್ರಮ್​ಗೆ ಈಗ 33 ವರ್ಷ ಎನ್ನಲಾಗಿದೆ. ಅವರು ಜನಿಸಿದ್ದು 1992ರಲ್ಲಿ. ಅದೇ ಕಥಾ ನಾಯಕಿ ಪ್ರತಿಮಾಗೆ ಈಗ 20 ವರ್ಷ. ಅಂದರೆ ಇಬ್ಬರ ಮಧ್ಯೆ 13 ವರ್ಷಗಳ ಅಂತರ ಇದೆ. ಧಾರಾವಾಹಿಯ ಕಥೆಯೂ ಇದೇ ರೀತಿ ಇರುವುದರಿಂದ ಈ ರೀತಿ ವಯಸ್ಸಿನ ಅಂತರ ಇಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕೊಳಕು ಅಂಟದ ಬಿಳಿ ಹಾಳೆ ನೀನು’; ಧನರಾಜ್​ಗೆ ಕೈಯಲ್ಲೇ ಪತ್ರ ಬರೆದು ಬರ್ತ್​ಡೇ ವಿಶ್ ತಿಳಿಸಿದ ತ್ರಿವಿಕ್ರಂ

ತ್ರಿವಿಕ್ರಂ ಅವರು ಈ ಮೊದಲು ಕೆಲವು ಧಾರಾವಾಹಿಗಳನ್ನು ಮಾಡಿದ್ದರು. ಆ ಬಳಿಕ ಬಿಗ್ ಬಾಸ್ ಆಫರ್ ಬಂತು. ಅವರು ರನ್ನರ್​ ಅಪ್ ಆದರು. ಆದರೆ, ಅವರಿಗೆ ಸಿಕ್ಕ ಖ್ಯಾತಿ ಅಪಾರ. ಈ ಧಾರಾವಾಹಿಯಿಂದ ಅವರ ಅದೃಷ್ಟ ಬದಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:43 am, Tue, 15 April 25

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್