AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?

ಕಲರ್ಸ್ ಕನ್ನಡದ ಹೊಸ ಧಾರಾವಾಹಿ ‘ಮುದ್ದು ಸೊಸೆ’ ತ್ರಿವಿಕ್ರಂ ಮತ್ತು ಪ್ರತಿಮಾ ಠಾಕೂರ್ ಅವರ ಅಭಿನಯದಿಂದ ಸುದ್ದಿಯಲ್ಲಿದೆ. ತ್ರಿವಿಕ್ರಂ ‘ಬಿಗ್ ಬಾಸ್’ ಮೂಲಕ ಜನಪ್ರಿಯರಾದ ನಟ. ಈ ಧಾರಾವಾಹಿ ಅವರ ವೃತ್ತಿಜೀವನದಲ್ಲಿ ಹೊಸ ತಿರುವನ್ನು ತರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ .

‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
ತ್ರಿವಿಕ್ರಂ-ಪ್ರತಿಮಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Apr 15, 2025 | 8:29 AM

ಕಲರ್ಸ್ ಕನ್ನಡದಲ್ಲಿ ‘ಮುದ್ದು ಸೊಸೆ’ ಹೆಸರಿನ (Muddu Sose Serial) ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಮೊದಲ ದಿನ ವೀಕ್ಷಕರಿಂದ ಮೆಚ್ಚುಗೆ ಪಡೆದಿದೆ. ‘ಬಿಗ್ ಬಾಸ್’ ಮೂಲಕ ಫೇಮಸ್ ಆದ ತ್ರಿವಿಕ್ರಂ ಅವರು ಈ ಚಿತ್ರಕ್ಕೆ ಹೀರೋ ಆದರೆ, ಪ್ರತಿಮಾ ಠಾಕೂರ್ ಅವರು ಚಿತ್ರಕ್ಕೆ ನಾಯಕಿ. ಇಬ್ಬರ ಮಧ್ಯೆ ವಯಸ್ಸಿನ ಅಂತರ ಸಾಕಷ್ಟಿದೆ. ಇದಕ್ಕೆ ಕಾರಣ ಆಗಿದ್ದು ಧಾರಾವಾಹಿಯ ಕಥೆ ಎನ್ನಲಾಗಿದೆ. ಆ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಾ ಇದ್ದೇವೆ.

‘ಮುದ್ದು ಸೊಸೆ’ ಧಾರಾವಾಹಿಯಲ್ಲಿ ತ್ರಿವಿಕ್ರಂ ಅವರು ಹೀರೋ ಆಗಿ ನಟಿಸಿದರೆ, ಪ್ರತಿಮಾ ಠಾಕೂರ್ ಅವರು ನಾಯಕಿ. ಈ ಚಿತ್ರದಲ್ಲಿ ತ್ರಿವಿಕ್ರಂ ಅವರು ಊರಿನ ಚಿಕ್ಕ ಗೌಡ ಭದ್ರೇ ಗೌಡನಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಊರಿಗೆ ಅವರನ್ನು ಕಂಡರೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಅವರು ಯಾರಿಗೇ ಸಿಕ್ಕರೂ ಎಲ್ಲರೂ ಪ್ರೀತಿಯಿಂದ ಮಾತನಾಡಿಸುತ್ತಾರೆ.

ಇದನ್ನೂ ಓದಿ
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
Image
860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ಮರುಗಿದ್ದ ನಟ

ಕಥಾ ನಾಯಕ ಭದ್ರೇ ಗೌಡ ಮದುವೆ ಬಗ್ಗೆ ಆಸಕ್ತಿ ಎಂಬುದೇ ಇಲ್ಲ. ಈ ಕಾರಣದಿಂದಲೇ ಆ ಬಗ್ಗೆ ಆಲೋಚಿಸುವುದೇ ಇಲ್ಲ. ಆದರೆ, ಮನೆಯವರ ಒತ್ತಾಯಕ್ಕೆ ಕಥಾ ನಾಯಕ ಮದುವೆ ಆಗಲು ಒಪ್ಪುತ್ತಾನೆ. ಆತ ಮದುವೆ ಆಗೋದು ಶಿಕ್ಷಣ ಪಡೆಯುತ್ತಿರುವ ಹುಡುಗಿ ವಿದ್ಯಾಳನ್ನು (ಪ್ರತಿಮಾ ಠಾಕೂರ್). ಇಬ್ಬರ ಮಧ್ಯೆ ಸಾಕಷ್ಟು ವಯಸ್ಸಿನ ಅಂತರ ಇರುತ್ತದೆ. ಅದನ್ನೂ ಲೆಕ್ಕಿಸದೇ ವಿವಾಹ ನಡೆಯುತ್ತದೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ನಿಜವಾಗಲೂ ವಯಸ್ಸಿನ ಅಂತರ ಇರುವವರನ್ನೇ ಕರೆದುಕೊಂಡು ಬರಲಾಗಿದೆ ಎಂದು ಹೇಳಲಾಗುತ್ತಿದೆ.

ತ್ರಿವಿಕ್ರಮ್​ಗೆ ಈಗ 33 ವರ್ಷ ಎನ್ನಲಾಗಿದೆ. ಅವರು ಜನಿಸಿದ್ದು 1992ರಲ್ಲಿ. ಅದೇ ಕಥಾ ನಾಯಕಿ ಪ್ರತಿಮಾಗೆ ಈಗ 20 ವರ್ಷ. ಅಂದರೆ ಇಬ್ಬರ ಮಧ್ಯೆ 13 ವರ್ಷಗಳ ಅಂತರ ಇದೆ. ಧಾರಾವಾಹಿಯ ಕಥೆಯೂ ಇದೇ ರೀತಿ ಇರುವುದರಿಂದ ಈ ರೀತಿ ವಯಸ್ಸಿನ ಅಂತರ ಇಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕೊಳಕು ಅಂಟದ ಬಿಳಿ ಹಾಳೆ ನೀನು’; ಧನರಾಜ್​ಗೆ ಕೈಯಲ್ಲೇ ಪತ್ರ ಬರೆದು ಬರ್ತ್​ಡೇ ವಿಶ್ ತಿಳಿಸಿದ ತ್ರಿವಿಕ್ರಂ

ತ್ರಿವಿಕ್ರಂ ಅವರು ಈ ಮೊದಲು ಕೆಲವು ಧಾರಾವಾಹಿಗಳನ್ನು ಮಾಡಿದ್ದರು. ಆ ಬಳಿಕ ಬಿಗ್ ಬಾಸ್ ಆಫರ್ ಬಂತು. ಅವರು ರನ್ನರ್​ ಅಪ್ ಆದರು. ಆದರೆ, ಅವರಿಗೆ ಸಿಕ್ಕ ಖ್ಯಾತಿ ಅಪಾರ. ಈ ಧಾರಾವಾಹಿಯಿಂದ ಅವರ ಅದೃಷ್ಟ ಬದಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:43 am, Tue, 15 April 25

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ