AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪ: ‘ಮುದ್ದುಲಕ್ಷ್ಮಿ‌’ ನಟ ಚರಿತ್ ಬಾಳಪ್ಪ ಬಂಧನ

ಹಲವು ಸೀರಿಯಲ್​ಗಳಲ್ಲಿ ನಟಿಸಿ ಫೇಮಸ್​ ಆಗಿರುವ ನಟ ಚರಿತ್ ಬಾಳಪ್ಪ ಅವರನ್ನು ಬಂಧಿಸಲಾಗಿದೆ. ಲೈಂಗಿಕ ದೌರ್ಜನ್ಯದ ಕೇಸ್​ನಲ್ಲಿ ಅವರನ್ನು ಆರ್​ಆರ್​ ನಗರ ಪೊಲೀಸರು ಬಂಧಿಸಿದ್ದಾರೆ. ಚರಿತ್ ಬಾಳಪ್ಪ ಮೇಲೆ ಹಲವು ಆರೋಪಗಳನ್ನು ಮಾಡಲಾಗಿದೆ. ತಮ್ಮ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಕೂಡ ಆಗಿದೆ ಎಂದು ಯುವತಿ ಆರೋಪ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ: ‘ಮುದ್ದುಲಕ್ಷ್ಮಿ‌’ ನಟ ಚರಿತ್ ಬಾಳಪ್ಪ ಬಂಧನ
Charith Balappa
ಮದನ್​ ಕುಮಾರ್​
|

Updated on: Dec 27, 2024 | 2:55 PM

Share

ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಹಾಗಾಗಿ ಆರ್​ಆರ್ ನಗರ ಠಾಣೆಯ ಪೊಲೀಸರು ಅವರನ್ನು ಅರೆಸ್ಟ್​ ಮಾಡಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಹಲವು ಸೀರಿಯಲ್​ನಲ್ಲಿ ಚರಿತ್ ನಟಿಸಿದ್ದಾರೆ. ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಈಗ ಚರಿತ್ ಬಾಳಪ್ಪ ಮೇಲೆ ಎದುರಾಗಿದೆ.

ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಷ್ಟಲ್ಲದೇ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ಕಿರುತೆರೆ ನಟನಿಂದ ಪತ್ನಿಮೇಲೆ ಹಲ್ಲೆ; ಮದುವೆ ಆದ ಬಳಿಕ ಮತ್ತೊಬ್ಬರ ಜೊತೆ ನಿಶ್ಚಿತಾರ್ಥ?

ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ, ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದಿದ್ದಾರೆ. ಡಿವೋರ್ಸ್​ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿದ್ದರು.

ಇದನ್ನೂ ಓದಿ: ‘ಬಟ್ಟೆ ಬದಲಿಸುವಾಗ..’; ನಿರ್ಮಾಪಕನ ಹೆಸರೂ ಹೇಳಿ ತಮಗಾದ ಕಿರುಕುಳ ವಿವರಿಸಿದ ಕಿರುತೆರೆ ನಟಿ

2017ರಲ್ಲಿ ನಟಿ ಮಂಜು ಜೊತೆ ಚರಿತ್​ ಬಾಳಪ್ಪ ಅವರಿಗೆ ವಿವಾಹ ಆಗಿತ್ತು. 2022ರ ಬಳಿಕ ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ನಂತರ ಅವರಿಬ್ಬರು ನ್ಯಾಯಾಲಯದಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಕೋರ್ಟ್ ಆಜ್ಞೆಯಂತೆ ಡೈವರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಮಾಜಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂದು ಚರಿತ್ ಬಾಳಪ್ಪ ವಿರುದ್ಧ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು