AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ಈ ರೀತಿಯ ವಿಡಿಯೋ ಬರಲ್ಲ’ ಎಂದ ಮಮ್ಮಿ ಅಶೋಕ್; ಕೆಟ್ಮೇಲಾದ್ರೂ ಬುದ್ಧಿ ಬಂತಲ್ಲ

ಬಿಗ್ ಬಾಸ್ ಮನೆಗೆ ಅವಕಾಶ ಸಿಗದ ಕಾರಣ 'ಮಮ್ಮಿ ಅಶೋಕ್' ಬಾಂಬ್ ಬೆದರಿಕೆ ಹಾಕಿದ್ದ. ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, ಆತನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ತಪ್ಪನ್ನು ಅರಿತ ಅಶೋಕ್ ಇದೀಗ ಕ್ಷಮೆಯಾಚಿಸಿದ್ದು, ಇನ್ನು ಮುಂದೆ ಇಂತಹ ಕಂಟೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾನೆ.

‘ಇನ್ಮುಂದೆ ಈ ರೀತಿಯ ವಿಡಿಯೋ ಬರಲ್ಲ’ ಎಂದ ಮಮ್ಮಿ ಅಶೋಕ್; ಕೆಟ್ಮೇಲಾದ್ರೂ ಬುದ್ಧಿ ಬಂತಲ್ಲ
ಮಮ್ಮಿ ಅಶೋಕ್
ರಾಜೇಶ್ ದುಗ್ಗುಮನೆ
|

Updated on:Sep 29, 2025 | 7:34 AM

Share

ಬಿಗ್ ಬಾಸ್​ಗೆ (Bigg Boss) ಅವಕಾಶ ಸಿಗಬೇಕು ಎಂದು ವಿವಿಧ ರೀತಿಯ ಕಂಟೆಂಟ್ ಮಾಡುವವರ ಸಂಖ್ಯೆ ಜೋರಾಗಿದೆ. ಹಾಗಂತ ಕ್ಯಾಮೆರಾ ಇದೆ, ಸೋಶಿಯಲ್ ಮೀಡಿಯಾ ಖಾತೆ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡಿದರೆ ಪೊಲೀಸರಿದ ಟ್ರೀಟ್​ಮೆಂಟ್ ಸಿಗೋದು ಪಕ್ಕಾ. ಈಗ ಮಮ್ಮಿ ಅಶೋಕ್ ಇದಕ್ಕೆ ಉತ್ತಮ ಉದಾಹರಣೆ. ಬಿಗ್ ಬಾಸ್​ಗೆ ನನ್ನ ಕರೆದಿಲ್ಲ ಎಂದರೆ ಬಿಗ್ ಬಾಸ್ ಮನೆಗೆ ಬಾಂಬ್ ಇಡ್ತೀನಿ ಎಂದು ಈತ ಬೆದರಿಕೆ ಹಾಕಿದ್ದ. ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಬಳಿಕ ಆತ ಬದಲಾಗಿದ್ದಾನೆ.

ಮಮ್ಮಿ ಅಶೋಕ್ ಹೆಸರಿನ ಇನ್​​ಸ್ಟಾಗ್ರಾಮ್ ಖಾತೆ ಹೊಂದಿರುವ ಯುವಕ ಕಳೆದ ಕೆಲ ವರ್ಷಗಳಿಂದ ಬಿಗ್ ಬಾಸ್​ಗೆ ಹೋಗಬೇಕು ಎಂದು ಪ್ರಯತ್ನಿಸುತ್ತಲೇ ಇದ್ದಾನೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ಕಳೆದ ಸೀಸನ್​ನಲ್ಲಿ ಬಿಗ್ ಬಾಸ್ ಡೋರ್ ಬಳಿ ತೆರಳಿ ಬಾಗಿಲು ತಟ್ಟುವ ಕೆಲಸವನ್ನು ಆತ ಮಾಡಿದ್ದ. ಈ ಬಾರಿಯೂ ಅದೇ ರೀತಿ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಇದನ್ನೂ ಓದಿ
Image
‘ಪತ್ನಿಯಿಂದ ದೂರವಿದ್ದೇನೆ, ಮಗನಿಗೋಸ್ಕರ ಎರಡನೇ ಮದುವೆ ಆಗಿಲ್ಲ’; ಸತೀಶ್
Image
‘ಬಿಗ್ ಬಾಸ್’ ಮನೆ ಪ್ರವೇಶಿಸಿದ ಎಲ್ಲಾ ಸ್ಪರ್ಧಿಗಳ ಫೋಟೋ, ಹೆಸರು, ವಿವರ
Image
‘ಹೀಗೆನೆ ಹನುಮಂತ ಗೆದ್ರು’; ಲುಂಗಿ ಉಟ್ಟು ಬಂದ ಗಿಲ್ಲಿಗೆ ಸುದೀಪ್ ಕೌಂಟರ್
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ಬಿಗ್​​ಬಾಸ್ ಮನೆಗೆ ಬಾಂಬ್ ಇಡುವುದಾಗಿ ಬೆದರಿಕೆ, ಪಾಠ ಕಲಿಸಿದ ಬೆಂಗಳೂರು ಪೊಲೀಸರು

‘ನನ್ನನ್ನು ಬಿಗ್ ಬಾಸ್ ಮನೆಗೆ ಕರೆಸಿಲ್ಲ ಎಂದರೆ ಬಿಗ್ ಬಾಸ್ ಮನೆಗೆ ಬಾಂಬ್ ಇಟ್ಟು ಉಡೀಸ್ ಮಾಡ್ತೀನಿ’ ಎಂಬ ರೀತಿಯಲ್ಲಿ ವಿಡಿಯೋ ಹಾಕಿದ್ದ ಅಶೋಕ್. ವಿಡಿಯೋ ಗಮನಿಸಿದ ಕುಂಬಳಗೋಡು ಸಾಮಾಜಿಕ ಜಾಲತಾಣದ ಪೊಲೀಸ್ ಸಿಬ್ಬಂದಿ, ಯುವಕನ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಗೆ ಕರೆದು ಬಂದು ಸೂಕ್ತ ಎಚ್ಚರಿಕೆಯನ್ನು ನೀಡಿದ್ದಾರೆ. ಪ್ರಸ್ತುತ ಎನ್​​ಸಿಆರ್ ಮಾತ್ರವೇ ದಾಖಲಿಸಲಾಗಿದ್ದು, ಎಚ್ಚರಿಕೆಯನ್ನಷ್ಟೆ ನೀಡಿ ಕಳುಹಿಸಲಾಗಿದೆ.

ಅಶೋಕ್ ಹೇಳಿಕೆ

ಇದನ್ನೂ ಓದಿ: ‘ಬಿಗ್ ಬಾಸ್’ ಮನೆ ಪ್ರವೇಶಿಸಿದ 19 ಸ್ಪರ್ಧಿಗಳ ಫೋಟೋ, ಹೆಸರು, ವಿವರ ಇಲ್ಲಿದೆ

ಇದರಿಂದ ಅಶೋಕ್ ಎಚ್ಚೆತ್ತಕೊಂಡಂತೆ ಕಾಣುತ್ತಿದೆ. ಆತ ವಿಡಿಯೋ ಒಂದನ್ನು ಮಾಡಿ ಪೋಸ್ಟ್ ಮಾಡಿದ್ದಾನೆ. ‘ಒಂದು ವಿಡಿಯೋ ಮಾಡಿದ್ದೆ. ಅದನ್ನು ಹಾಸ್ಯಕ್ಕಾಗಿ ಮಾಡಿದ್ದು. ಆ ವಿಡಿಯೋ ಮಾಡಬಾರದಾಗಿತ್ತು. ಈ ರೀತಿಯ ವಿಡಿಯೋ ಇನ್ಮುಂದೆ ಬರಲ್ಲ’ ಎಂದು ಅಶೋಕ್ ಹೇಳಿದ್ದಾನೆ. ಈ ವಿಡಿಯೋದ ಕಮೆಂಟ್ ಬಾಕ್ಸ್​ನಲ್ಲಿ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Mon, 29 September 25

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ