AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ಅಂದಿನ ಮಲ್ಲೇಶ್ವರ? ‘ವೀಕೆಂಡ್ ವಿತ್ ರಮೇಶ್​’ ಕಾರ್ಯಕ್ರಮದಲ್ಲಿ ಎಳೆಎಳೆಯಾಗಿ ವಿವರಿಸಿದ ನಾ. ಸೋಮೇಶ್ವರ

N Someswara: ವೈದ್ಯರಾಗಿ, ಲೇಖಕರಾಗಿ, ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ನಿರೂಪಕರಾಗಿ ಗಮನ ಸೆಳೆದಿದ್ದಾರೆ. ಅವರು ಈ ಬಾರಿಯ ‘ವೀಕೆಂಡ್ ವಿತ್ ರಮೇಶ್’ ಎಪಿಸೋಡ್​ಗೆ ಆಗಮಿಸಿದ್ದಾರೆ. ಅವರು ತಮ್ಮ ಬಾಲ್ಯದ ಅನುಭವ ಹಂಚಿಕೊಂಡಿದ್ದಾರೆ.

ಹೇಗಿತ್ತು ಅಂದಿನ ಮಲ್ಲೇಶ್ವರ? ‘ವೀಕೆಂಡ್ ವಿತ್ ರಮೇಶ್​’ ಕಾರ್ಯಕ್ರಮದಲ್ಲಿ ಎಳೆಎಳೆಯಾಗಿ ವಿವರಿಸಿದ ನಾ. ಸೋಮೇಶ್ವರ
ರಮೇಶ್​-ಸೋಮೇಶ್ವರ
ರಾಜೇಶ್ ದುಗ್ಗುಮನೆ
|

Updated on: May 12, 2023 | 10:31 AM

Share

ಬೆಂಗಳೂರು ಇಂದು ಮಹಾನಗರ ಆಗಿ ಬೆಳೆದಿದೆ. ಎಲ್ಲಿ ನೋಡಿದರೂ ಟ್ರಾಫಿಕ್​. ಕೆಂಪು ದೀಪ ಹಸಿರಾಗಲಿ ಎಂದು ಕಾಯುವ ವಾಹನ ಸವಾರರು. ಧೂಳು, ಕಲುಷಿತ ವಾಯು ಸರ್ವೇ ಸಾಮಾನ್ಯ ಎಂಬಂತಾಗಿದೆ. ಅಲ್ಲಲ್ಲಿ ಮರಗಳು ಇವೆಯಾದರೂ ಬೆಂಗಳೂರಿನ ಕಲುಷಿತ ಗಾಳಿಯನ್ನು ಸಂಪೂರ್ಣವಾಗಿ ಶುದ್ಧವಾಗಿಸಲು ಅವುಗಳಿಂದ ಸಾಧ್ಯವಿಲ್ಲ. ಆದರೆ, ಕೆಲವು ದಶಕಗಳ ಹಿಂದೆ ಬೆಂಗಳೂರು ಈ ರೀತಿ ಇರಲಿಲ್ಲ. ಅದೊಂದು ಹಳ್ಳಿಯಾಗಿತ್ತು. ಈ ಬಗ್ಗೆ ನಾ ಸೋಮೇಶ್ವರ (N. Someswara) ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರಲ್ಲಿ ಅವರು ಈ ವಾರದ ಅತಿಥಿ ಆಗಿದ್ದಾರೆ. ಅವರು ಸಾಧಕರ ಸೀಟ್​ನಲ್ಲಿ ಕುಳಿತಿದ್ದಾರೆ. ವೈದ್ಯರಾಗಿ, ಲೇಖಕರಾಗಿ, ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ನಿರೂಪಕರಾಗಿ ಗಮನ ಸೆಳೆದಿದ್ದಾರೆ. ಅವರು ಈ ಬಾರಿಯ ‘ವೀಕೆಂಡ್ ವಿತ್ ರಮೇಶ್’ ಎಪಿಸೋಡ್​ಗೆ ಆಗಮಿಸಿದ್ದಾರೆ. ಅವರು ತಮ್ಮ ಬಾಲ್ಯದ ಅನುಭವ ಹಂಚಿಕೊಂಡಿದ್ದಾರೆ.

ನಾ. ಸೋಮೇಶ್ವರ ಅವರು 1955ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಜನಿಸಿದರು. ಅಂದು ಬೆಂಗಳೂರು ಯಾವ ರೀತಿಯಲ್ಲಿತ್ತು ಎಂಬುದನ್ನು ‘ವೀಕೆಂಡ್ ವಿತ್ ರಮೇಶ್​’ ಎಪಿಸೋಡ್​ನಲ್ಲಿ ಅವರು ವಿವರಿಸಿದ್ದಾರೆ. ‘ಮಲ್ಲೇಶ್ವರದಲ್ಲಿ ಪ್ರಶಾಂತ ರಸ್ತೆ ಇತ್ತು. ಮಳೆ ಬಂತು ಎಂದರೆ ಕಾಗೆ ಬಂಗಾರ ಹುಡುಕಿಕೊಂಡು ಹೋಗುತ್ತಿದ್ವಿ. ಈಡುಗಾಯಿ ಒಡೆಯೋದನ್ನು ಕಾಯುತ್ತಿದ್ದೆವು. ಮೀನು ಎಂದು ಹಿಡಿದುಕೊಂಡು ಬರುತ್ತಿದೆ. ಮರುದಿನ ಅದು ಕಪ್ಪೆ ಆಗಿರುತ್ತಿತ್ತು. ಅನೇಕ ನೆನಪುಗಳ ಸಾಲು ಬರ್ತಿದೆ’ ಎಂದು ನಾ. ಸೋಮೇಶ್ವರ ಅವರು ವಿವರಿಸಿದ್ದಾರೆ.

View this post on Instagram

A post shared by Zee Kannada (@zeekannada)

‘ವಿಶಾಲ ರಸ್ತೆ, ಪ್ರಶಾಂತ ವಾತಾವರಣದ ಆಗಿನ‌ ಮಲ್ಲೇಶ್ವರದ ಚಿತ್ರಣ ಕಟ್ಟಿಕೊಟ್ಟ ನಾ.ಸೋಮೇಶ್ವರ. ವೀಕೆಂಡ್ ವಿತ್ ರಮೇಶ್ ಸೀಸನ್ 5 ಭಾನುವಾರ ರಾತ್ರಿ 9ಕ್ಕೆ’ ಎಂದು ಈ ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: Weekend With Ramesh: ವೀಕೆಂಡ್ ವಿತ್ ರಮೇಶ್​ಗೆ ಬಂದ ಹೊಸ ಸಾಧಕ, ಯಾರು ಗೆಸ್ ಮಾಡಬಲ್ಲಿರಾ?

ಈ ವಾರ ಸೋಮೇಶ್ವರ ಮಾತ್ರವಲ್ಲದೆ ಡ್ಯಾನ್ಸ್ ಕೊರಿಯೋಗ್ರಫರ್ ಆಗಿರುವ ಚಿನ್ನಿ ಪ್ರಕಾಶ್ ಮಾಸ್ಟರ್ ಕೂಡ ಬರುತ್ತಿದ್ದಾರೆ. ಇಬ್ಬರನ್ನೂ ಈ ವಾರದ ಎಪಿಸೋಡ್​ನಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಒಳ್ಳೊಳ್ಳೆಯ ಸಾಧಕರನ್ನು ಕರೆಸುತ್ತಿದ್ದೀರಾ ಎನ್ನುವ ಮಾತು ಕೇಳಿ ಬಂದಿದೆ. ಮೊದಲ ಎಪಿಸೋಡ್​ಗೆ ರಮ್ಯಾ ಆಗಮಿಸಿದ್ದರು. ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೆ, ಈಗ ಶೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ