AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್-ದುರ್ಗಾ ಈಗ ಪತಿ-ಪತ್ನಿ; ಹೆಚ್ಚಿತು ಅಂಬಿಕಾ ಶಕ್ತಿ, ಮಾಳವಿಕಾ ಕನಸು ಭಗ್ನ

'ನಾ ನಿನ್ನ ಬಿಡಲಾರೆ' ಧಾರಾವಾಹಿಯಲ್ಲಿ ಅನಿರೀಕ್ಷಿತ ತಿರುವು ಎದುರಾಗಿದೆ! ಶರತ್ ಮತ್ತು ದುರ್ಗಾ ವಿವಾಹವಾಗಿದೆ. ಇದು ಮಾಳವಿಕಾಳ ಯೋಜನೆಗಳನ್ನು ಹಾಳು ಮಾಡಿದೆ. ಅಂಬಿಕಾಳ ಆತ್ಮ ದುರ್ಗಾಳ ದೇಹದಲ್ಲಿ ಪ್ರವೇಶಿಸಿ ಮದುವೆಯಲ್ಲಿ ಭಾಗವಹಿಸಿದೆ. ಈ ಘಟನೆಯಿಂದ ಅಂಬಿಕಾಳ ಶಕ್ತಿ ಹೆಚ್ಚಾಗಿದೆ ಮತ್ತು ಮುಂದೆ ಏನಾಗುತ್ತದೆ ಎಂಬುದು ಕುತೂಹಲ ಮೂಡಿದೆ.

ಶರತ್-ದುರ್ಗಾ ಈಗ ಪತಿ-ಪತ್ನಿ; ಹೆಚ್ಚಿತು ಅಂಬಿಕಾ ಶಕ್ತಿ, ಮಾಳವಿಕಾ ಕನಸು ಭಗ್ನ
ನಾ ನಿನ್ನ ಬಿಡಲಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 02, 2025 | 10:48 AM

Share

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ (Serial) ಅತಿ ದೊಡ್ಡ ಟ್ವಿಸ್ಟ್ ಒಂದು ಸಿಕ್ಕಿದೆ. ಶರತ್ ಹಾಗೂ ದುರ್ಗಾ ವಿವಾಹ ನಡೆದಿದೆ. ದೇವರ ಸಮ್ಮುಖದಿಂದ ಈ ಮದುವೆ ನಡೆದಿದೆ ಅನ್ನೋದು ವಿಶೇಷ. ಈ ಬೆಳವಣಿಗೆಯಿಂದ ದುಷ್ಟ ಶಕ್ತಿಗಳನ್ನು ಸೇರಿಸುವ ಕನಸು ಕಾಣುತ್ತಿರುವ ಮಾಳವಿಕಾ ಕನಸು ಭಗ್ನವಾಗಿದೆ. ಶರತ್ ತನಗೆ ಸಿಗಬೇಕು ಎಂದುಕೊಂಡಿದ್ದ ಮಯಾಗೆ ಅಳೋದು ಒಂದೇ ಆಯ್ಕೆ ಆಗಿ ಉಳಿದಿದೆ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಈಗಾಗಲೇ 120ಕ್ಕೂ ಅಧಿಕ ಎಪಿಸೋಡ್​​ಗಳನ್ನು ಪ್ರಸಾರ ಮಾಡಿದೆ. ಈ ವೇಳೆ ಸಾಕಷ್ಟು ತಿರುವುಗಳು ಎದುರಾಗಿದ್ದವು. ಇದು ಹಾರರ್ ಶೈಲಿಯ ಕಥೆ. ಇದರಲ್ಲಿ ಮಾಟ ಮಂತ್ರ ಇದೆ, ಆತ್ಮದ ವಿಚಾರ ಇದೆ. ವಶೀಕರಣ ಇದೆ. ಈ ಧಾರಾವಾಹಿ ಈಗ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.

ಇದನ್ನೂ ಓದಿ
Image
ಪವನ್ ಕಲ್ಯಾಣ್ ಜನ್ಮದಿನ: 5 ಲಕ್ಷಕ್ಕೆ ಹರಾಜಾಯ್ತು ‘ಒಜಿ’ ಚಿತ್ರದ ಟಿಕೆಟ್
Image
ಮಲಯಾಳಂ ಸಿನಿಮಾದಲ್ಲಿ ಬೆಂಗಳೂರು ಯುವತಿಯರಿಗೆ ಡಗಾರ್ ಪದ ಬಳಕೆ
Image
ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ
Image
‘ನನ್ನ ಗೇಲಿ ಮಾಡುವುದರಿಂದ ನಿಮಗೆ ಊಟ ಸಿಗುತ್ತಿದೆ ಎಂದರೆ ಖುಷಿ’; ಸಲ್ಮಾನ್

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಳವಿಕಾ ತನ್ನ ಶಕ್ತಿ ಹೆಚ್ಚಿಸಿಕೊಳ್ಳುವ ಆಲೋಚನೆಯಲ್ಲಿ ಇದ್ದಳು. ಇದಕ್ಕಾಗಿ ಶರತ್ ಹಾಗೂ ಮಾಯಾ ಮದುವೆ ಪ್ಲ್ಯಾನ್ ಮಾಡಿದ್ದಳು. ಹೀಗೆ ಮದುವೆ ಆದರೆ, ಆತ್ಮದ ರೂಪದಲ್ಲಿರುವ ಶರತ್ ಮೊದಲ ಪತ್ನಿ ಅಂಬಿಕಾ ಶಕ್ತಿ ಕುಂದುತ್ತದೆ, ಆಕೆಯನ್ನು ಬಂಧಿಸಿಡಬಹುದು ಎಂಬುದು ಆಕೆಯ ಆಲೋಚನೆ ಆಗಿತ್ತು.

View this post on Instagram

A post shared by Zee Kannada (@zeekannada)

View this post on Instagram

A post shared by Zee Kannada (@zeekannada)

ಆದರೆ, ಇದಕ್ಕೆ ದುರ್ಗಾ ತಂದೆ ಅವಕಾಶ ಮಾಡಿ ಕೊಡಲೇ ಇಲ್ಲ. ಆತ ಒಂದು ದೊಡ್ಡ ಪ್ಲ್ಯಾನ್ ಮಾಡಿದ. ವಿವಾಹದ ದಿನ ದುರ್ಗಾಳ ದೇಹದಲ್ಲಿ ಅಂಬಿಕಾ ಆತ್ಮ ಸೇರುವಂತೆ ಮಾಡಿದೆ. ಈ ಆತ್ಮ ನೇರವಾಗಿ ಹೋಗಿ ಹಸೆಮಣೆ ಮೇಲೆ ಕೂತಿತ್ತು. ಹೀಗೆ ಕೂರುವಾಗ ಶರತ್ ತನ್ನ ಮಲತಾಯಿ ಮಾಳವಿಕಾಳ ವಶೀಕರಣದಲ್ಲಿ ಇದ್ದ. ‘ನೀನು ಮಂಟಪಕ್ಕೆ ಹೋಗಬೇಕು, ತಾಳಿ ಕಟ್ಟಬೇಕು’ ಎಂದು ಹೇಳಿದ್ದನ್ನು ಪಾಲಿಸಿದ್ದಾನೆ. ಆತ ದುರ್ಗಾಳಿಗೆ ತಾಳಿ ಕಟ್ಟಿದ್ದಾನೆ. ಈ ಮದುವೆ ನಡೆಯುತ್ತಿದ್ದಂತೆ ಅಂಬಿಕಾಳ ತಾಕತ್ತು ಹೆಚ್ಚಾಗಿದೆ.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ದೊಡ್ಡ ಟ್ವಿಸ್ಟ್; ಶರತ್-ದುರ್ಗಾ ಮದುವೆ

ಸದ್ಯ ಮುಂದೆ ಏನಾಗುತ್ತದೆ ಎಂಬುದೇ ಸದ್ಯದ ಕುತೂಹಲ. ದೇವರ ಸಮ್ಮುಖದಲ್ಲಿ ಈ ವಿವಾಹ ನಡೆದಿದೆ. ಆದರೆ, ಮುಂದಿನ ದಿನಗಳಲ್ಲಿ ದುರ್ಗಾಳಿಗೆ ಸಾಕಷ್ಟು ಅಡಚಣೆ ಉಂಟಾಗಬಹುದು. ಈಗ ಶರತ್​ನ ವಿವಾಹ ಆಗಿರುವುದರಿಂದ ಹಿತಾ ಕೂಡ ಖುಷಿ ಆಗಿದ್ದಾಳೆ. ತನಗೆ ಅಮ್ಮ ಸಿಕ್ಕಿದ್ದಾಳೆ ಎಂದು ಅವಳು ಸಂತೋಷ ಪಡುತ್ತಾ ಇದ್ದಾಳೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ