AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದೇ ದಿನ ದೊಡ್ಡ ತಿರುವು

Na Ninna Bidalare serial: ‘ಅಮೃತಧಾರೆ’ ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗಿವೆ. ಗೌತಮ್ ದೀವಾನ್ ಅವರು ದೊಡ್ಡ ಬಿಸ್ನೆಸ್​ಮೆನ್ ಆಗಿದ್ದರು. ಆದರೆ, ಈಗ ಎಲ್ಲವನ್ನೂ ಬಿಟ್ಟು ಆತ ಕಾರ್ ಡ್ರೈವರ್ ಆಗಿದ್ದಾನೆ. ಇದಕ್ಕೆ ಕಾರಣ ಭೂಮಿಕಾ ಮನೆ ಬಿಟ್ಟು ಹೋಗಿರೋದು. ಈಗ ಆತ ಕಾರ್ ಚಾಲಕ ಆಗಲೂ ಇದೇ ಕಾರಣವೂ ಇರಬಹುದು. ಆತನಿಗೆ ಭೂಮಿಕಾಳನ್ನು ಹುಡುಕೋದು ಒಂದೇ ಉದ್ದೇಶ.

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದೇ ದಿನ ದೊಡ್ಡ ತಿರುವು
Serial (1)
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 11, 2025 | 2:41 PM

Share

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿವೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇವೆ ಎಂಬುದು ಗೊತ್ತಿರುವ ವಿಚಾರ. ಈಗ ಈ ಎರಡೂ ಧಾರಾವಾಹಿಗಳಲ್ಲಿ ದೊಡ್ಡ ತಿರುವು ಒಂದೇ ದಿನ ಬಂದಿದೆ ಎಂದೇ ಹೇಳಬಹುದು. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದುರ್ಗಾ ಪ್ರಾಣಕ್ಕೆ ಕುತ್ತು ಬಂದಿದೆ. ಅತ್ತ ‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಬಾಳು ಸಂಪೂರ್ಣ ಬದಲಾಗಿದೆ.

‘ಅಮೃತಧಾರೆ’ ಧಾರಾವಾಹಿ

‘ಅಮೃತಧಾರೆ’ ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗಿವೆ. ಗೌತಮ್ ದೀವಾನ್ ಅವರು ದೊಡ್ಡ ಬಿಸ್ನೆಸ್​ಮೆನ್ ಆಗಿದ್ದರು. ಆದರೆ, ಈಗ ಎಲ್ಲವನ್ನೂ ಬಿಟ್ಟು ಆತ ಕಾರ್ ಡ್ರೈವರ್ ಆಗಿದ್ದಾನೆ. ಇದಕ್ಕೆ ಕಾರಣ ಭೂಮಿಕಾ ಮನೆ ಬಿಟ್ಟು ಹೋಗಿರೋದು. ಈಗ ಆತ ಕಾರ್ ಚಾಲಕ ಆಗಲೂ ಇದೇ ಕಾರಣವೂ ಇರಬಹುದು. ಆತನಿಗೆ ಭೂಮಿಕಾಳನ್ನು ಹುಡುಕೋದು ಒಂದೇ ಉದ್ದೇಶ.

ಗೌತಮ್ ಕಾರು ಬಾಡಿಗೆ ಓಡಿಸಿಕೊಂಡು ವಿವಿಧ ಕಡೆ ತೆರಳುತ್ತಿದ್ದಾನೆ. ಅಲ್ಲಿ ಭೂಮಿಕಾಳನ್ನು ಹುಡುಕುವ ಪ್ರಯತ್ನದಲ್ಲಿ ಇದ್ದಾನೆ. ಈಗ ಆತ ಕುಶಾಲನಗರಕ್ಕೆ ಹೋಗುವ ಪರಿಸ್ಥಿತಿ ಬರುತ್ತದೆ. ಈ ವೇಳೆ ಭೂಮಿಕಾ ಎದುರಾಗುವ ಎಲ್ಲಾ ಸಾಧ್ಯತೆ ಇದೆ.

ನಾ ನಿನ್ನ ಬಿಡಲಾರೆ

‘ನಾ ನಿನ್ನ ಬಿಡಲಾರೆ‘ ಧಾರಾವಾಹಿಯಲ್ಲಿ ದುರ್ಗಾ ಹಾಗೂ ಶರತ್ ವಿವಾಹ ಆಗಿದೆ. ಮಾಯಾಳು ಶರತ್​ನ ಮದುವೆ ಆಗಬೇಕಿತ್ತು. ಆದರೆ, ಅದು ಉಲ್ಟಾ ಆಗಿದೆ. ಮದುವೆ ಬಳಿಕ ಮಾಯಾ ಕೋಮಾ ಹೋಗಿದ್ದಳು. ಈಕ ಆಕೆಗೆ ಎಚ್ಚರ ಬಂದಿದೆ. ಆಕೆ ಎಚ್ಚರ ಬರುತ್ತಿದ್ದಂತೆ ಗನ್ ಹಿಡಿದುಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ಬಂದು ನೇರವಾಗಿ ದುರ್ಗಾಳ ಹಣೆಗೆ ಹಿಡಿದಿದ್ದಾಳೆ. ‘ನಾನು ಏನೇ ಆದರೂ ಒಂದಿಚೂ ಕದಲಲ್ಲ’ ಎಂದಿದ್ದಾಳೆ ಮಾಯಾ.

ಈ ವೇಳೆ ಮಾಯಾ ಗುಂಡು ಹಾರಿಸುತ್ತಾಳಾ? ಹಾರಿಸಿದರೂ ಅಂಬಿಕಾ ತನ್ನ ಶಕ್ತಿಯಿಂದ ಅದನ್ನು ತಡೆಯುತ್ತಾಳಾ ಎಂಬುದನ್ನು ಕಾದು ನೋಡಬೇಕಿದೆ. ಹಾಗಾದಲ್ಲಿ, ಅಂಬಿಕಾ ಇರುವಿಕೆ ಎಲ್ಲರಿಗೂ ತಿಳಿಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್