AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದೇ ದಿನ ದೊಡ್ಡ ತಿರುವು

Na Ninna Bidalare serial: ‘ಅಮೃತಧಾರೆ’ ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗಿವೆ. ಗೌತಮ್ ದೀವಾನ್ ಅವರು ದೊಡ್ಡ ಬಿಸ್ನೆಸ್​ಮೆನ್ ಆಗಿದ್ದರು. ಆದರೆ, ಈಗ ಎಲ್ಲವನ್ನೂ ಬಿಟ್ಟು ಆತ ಕಾರ್ ಡ್ರೈವರ್ ಆಗಿದ್ದಾನೆ. ಇದಕ್ಕೆ ಕಾರಣ ಭೂಮಿಕಾ ಮನೆ ಬಿಟ್ಟು ಹೋಗಿರೋದು. ಈಗ ಆತ ಕಾರ್ ಚಾಲಕ ಆಗಲೂ ಇದೇ ಕಾರಣವೂ ಇರಬಹುದು. ಆತನಿಗೆ ಭೂಮಿಕಾಳನ್ನು ಹುಡುಕೋದು ಒಂದೇ ಉದ್ದೇಶ.

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದೇ ದಿನ ದೊಡ್ಡ ತಿರುವು
Serial (1)
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 11, 2025 | 2:41 PM

Share

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿವೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇವೆ ಎಂಬುದು ಗೊತ್ತಿರುವ ವಿಚಾರ. ಈಗ ಈ ಎರಡೂ ಧಾರಾವಾಹಿಗಳಲ್ಲಿ ದೊಡ್ಡ ತಿರುವು ಒಂದೇ ದಿನ ಬಂದಿದೆ ಎಂದೇ ಹೇಳಬಹುದು. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದುರ್ಗಾ ಪ್ರಾಣಕ್ಕೆ ಕುತ್ತು ಬಂದಿದೆ. ಅತ್ತ ‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಬಾಳು ಸಂಪೂರ್ಣ ಬದಲಾಗಿದೆ.

‘ಅಮೃತಧಾರೆ’ ಧಾರಾವಾಹಿ

‘ಅಮೃತಧಾರೆ’ ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗಿವೆ. ಗೌತಮ್ ದೀವಾನ್ ಅವರು ದೊಡ್ಡ ಬಿಸ್ನೆಸ್​ಮೆನ್ ಆಗಿದ್ದರು. ಆದರೆ, ಈಗ ಎಲ್ಲವನ್ನೂ ಬಿಟ್ಟು ಆತ ಕಾರ್ ಡ್ರೈವರ್ ಆಗಿದ್ದಾನೆ. ಇದಕ್ಕೆ ಕಾರಣ ಭೂಮಿಕಾ ಮನೆ ಬಿಟ್ಟು ಹೋಗಿರೋದು. ಈಗ ಆತ ಕಾರ್ ಚಾಲಕ ಆಗಲೂ ಇದೇ ಕಾರಣವೂ ಇರಬಹುದು. ಆತನಿಗೆ ಭೂಮಿಕಾಳನ್ನು ಹುಡುಕೋದು ಒಂದೇ ಉದ್ದೇಶ.

ಗೌತಮ್ ಕಾರು ಬಾಡಿಗೆ ಓಡಿಸಿಕೊಂಡು ವಿವಿಧ ಕಡೆ ತೆರಳುತ್ತಿದ್ದಾನೆ. ಅಲ್ಲಿ ಭೂಮಿಕಾಳನ್ನು ಹುಡುಕುವ ಪ್ರಯತ್ನದಲ್ಲಿ ಇದ್ದಾನೆ. ಈಗ ಆತ ಕುಶಾಲನಗರಕ್ಕೆ ಹೋಗುವ ಪರಿಸ್ಥಿತಿ ಬರುತ್ತದೆ. ಈ ವೇಳೆ ಭೂಮಿಕಾ ಎದುರಾಗುವ ಎಲ್ಲಾ ಸಾಧ್ಯತೆ ಇದೆ.

ನಾ ನಿನ್ನ ಬಿಡಲಾರೆ

‘ನಾ ನಿನ್ನ ಬಿಡಲಾರೆ‘ ಧಾರಾವಾಹಿಯಲ್ಲಿ ದುರ್ಗಾ ಹಾಗೂ ಶರತ್ ವಿವಾಹ ಆಗಿದೆ. ಮಾಯಾಳು ಶರತ್​ನ ಮದುವೆ ಆಗಬೇಕಿತ್ತು. ಆದರೆ, ಅದು ಉಲ್ಟಾ ಆಗಿದೆ. ಮದುವೆ ಬಳಿಕ ಮಾಯಾ ಕೋಮಾ ಹೋಗಿದ್ದಳು. ಈಕ ಆಕೆಗೆ ಎಚ್ಚರ ಬಂದಿದೆ. ಆಕೆ ಎಚ್ಚರ ಬರುತ್ತಿದ್ದಂತೆ ಗನ್ ಹಿಡಿದುಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ಬಂದು ನೇರವಾಗಿ ದುರ್ಗಾಳ ಹಣೆಗೆ ಹಿಡಿದಿದ್ದಾಳೆ. ‘ನಾನು ಏನೇ ಆದರೂ ಒಂದಿಚೂ ಕದಲಲ್ಲ’ ಎಂದಿದ್ದಾಳೆ ಮಾಯಾ.

ಈ ವೇಳೆ ಮಾಯಾ ಗುಂಡು ಹಾರಿಸುತ್ತಾಳಾ? ಹಾರಿಸಿದರೂ ಅಂಬಿಕಾ ತನ್ನ ಶಕ್ತಿಯಿಂದ ಅದನ್ನು ತಡೆಯುತ್ತಾಳಾ ಎಂಬುದನ್ನು ಕಾದು ನೋಡಬೇಕಿದೆ. ಹಾಗಾದಲ್ಲಿ, ಅಂಬಿಕಾ ಇರುವಿಕೆ ಎಲ್ಲರಿಗೂ ತಿಳಿಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್
ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್