AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್

ಜೀ ಕನ್ನಡದ ಹಾರರ್ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ ವೀಕ್ಷಕರನ್ನು ಸೆಳೆದಿದೆ. ಇದರ ಮುಖ್ಯ ಪಾತ್ರಧಾರಿ ನೀತಾ ಅಶೋಕ್ (ಅಂಬಿಕಾ) ಶೂಟಿಂಗ್ ವೇಳೆ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡು, ಫ್ರ್ಯಾಕ್ಚರ್ ಆಗಿತ್ತು. ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ನೀತಾ, ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ.

ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್
ಸೀರಿಯಲ್ ನ್ಯೂಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 20, 2026 | 7:45 AM

Share

ಜೀ ಕನ್ನಡದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ವೀಕ್ಷಕರನ್ನು ಸೆಳೆದುಕೊಂಡಿದೆ. ಈ ಧಾರಾವಾಹಿ ಸಾಮಾನ್ಯ ಅತ್ತೆ ಸೊಸೆಯ ಜಗಳದಂತೆ ಇಲ್ಲ ಎಂದೇ ಹೇಳಬಹುದು. ಏಕೆಂದರೆ, ಇದು ಹಾರರ್ ಥೀಮ್​​ನಲ್ಲಿ ಮೂಡಿ ಬಂದಿದೆ. ಈ ಧಾರಾವಾಹಿ ವೀಕ್ಷಕರ ಮನ ಗೆದ್ದಿದೆ. ಈಗ ಧಾರಾವಾಹಿಯ ಮುಖ್ಯ ಪಾತ್ರಧಾರಿ ನೀತಾ ಅಶೋಕ್ ವಿಷಯದಲ್ಲಿ ಬೇಸರದ ಘಟನೆ ನಡೆದಿದೆ.

ನೀತಾ ಅವರು ಅಂಬಿಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅಂಬಿಕಾ ಪಾತ್ರ ಧಾರಾವಾಹಿಯಲ್ಲಿ ಸತ್ತು ಹೋಗಿದೆ. ಆದರೆ, ಆಕೆ ಆತ್ಮವಾಗಿ ಕಾಣಿಸಿಕೊಳ್ಳುತ್ತಿದ್ದಾಳೆ. ನಿಜ ಹೇಳಬೇಕು ಎಂದರೆ ಅವಳು ದೆವ್ವ. ಆದರೆ, ಕೆಟ್ಟ ದೆವ್ವ ಅಲ್ಲ ಒಳ್ಳೆಯ ದೆವ್ವ. ಈ ಪಾತ್ರ ಮಾಡುತ್ತಿರುವ ನೀತಾ ಅವರು ಶೂಟಿಂಗ್ ಮಾಡುವಾಗ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನೀತಾ ನೀಡಿರುವ ಮಾಹಿತಿ ಪ್ರಕಾರ, ಶೂಟ್ ವೇಳೆ ಅವ ಕಾಲು ಟ್ವಿಸ್ಟ್ ಆಗಿತ್ತಂತೆ. ನಂತರ ಅದು ಫ್ರ್ಯಾಕ್ಚರ್ ಆಗಿ ಬದಲಾಯಿತು. ಈಗ ಅವರು ಸರ್ಜರಿ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಬಂತು. ಈಗ ಸರ್ಜರಿ ಯಶಸ್ವಿಯಾಗಿದೆ. ಅಪೋಲೋ ಆಸ್ಪ್ತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿದೆ. ಅವರು ಅಭಿಮಾನಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಹೇಳಿದ್ದಾರೆ. ‘ನನ್ನನ್ನು ಕೆಲವು ಸಮಯ ಮಿಸ್ ಮಾಡಿಕೊಳ್ಳಿ’ ಎಂದು ನೀತಾ ಹೇಳಿದ್ದಾರೆ. ಹೀಗಾಗಿ, ಅಂಬಿಕಾ ಪಾತ್ರ ಕೆಲವು ದಿನ ತೆರೆಮೇಲೆ ಕಾಣಿಸಿಕೊಳ್ಳೋದಿಲ್ಲ.

ಇದನ್ನೂ ಓದಿ: ಧಾರಾವಾಹಿಯಲ್ಲಿ ದೆವ್ವ, ನಿಜ ಜೀವನದಲ್ಲಿ ಎಷ್ಟು ಕ್ಯೂಟ್ ನೋಡಿ ನೀತಾ ಅಶೋಕ್

ನೀತಾ ಅಶೋಕ್ ಅವರು ಕಿರುತೆರೆ ಹಾಗೂ ಹಿರಿತೆರೆ ಇಬ್ಬರಿಗೂ ಪರಿಚಿತರು. ಇವರು ಮೂಲತಃ ಉಡುಪಿ ಜಿಲ್ಲೆಯ ಕೋಟಾದವರು. 2014ರಲ್ಲಿ ಪ್ರಸಾರ ಕಂಡ ‘ಯಶೋಧ’ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದರು. ನೀಲಾಂಬರಿ ಹೆಸರಿನ ಧಾರಾವಾಹಿಯಲ್ಲಿಯೂ ನಟಿಸಿದ್ದಾರೆ. 2019ರ ‘ಜಬರ್ದಸ್ತ್ ಶಂಕರ’ ಹೆಸರಿನ ತುಳು ಸಿನಿಮಾದಲ್ಲಿ ನೀತಾ ಅಶೋಕ್ ನಟಿಸಿದರು. ಈ ತುಳು ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆಯಿತು. 2022ರಲ್ಲಿ ರಿಲೀಸ್ ಆದ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ದೀಪ್ ಪತ್ನಿಯ ಪಾತ್ರದಲ್ಲಿ ಅಪರ್ಣಾ ಬಲ್ಲಾಳ್ ಪಾತ್ರದಲ್ಲಿ ನೀತಾ ಮಿಂಚಿದರು. ಈಗ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಿಂಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:44 am, Fri, 20 February 26

ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ