AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮಾಯಾ ಪಾತ್ರಕ್ಕೆ ದೊಡ್ಡ ತಿರುವು ಸಿಕ್ಕಿದೆ. ಅಂಬಿಕಾ ಸಾವಿಗೆ ಮಾಳವಿಕಾಳೇ ಕಾರಣವೆಂದು ಮಾಯಾಳಿಗೆ ಗೊತ್ತಾಗಿದೆ. ತಾನು ಕೇವಲ ಮಾಳವಿಕಾಳ ಅಸ್ತ್ರವಾಗಿದ್ದೆ ಎಂದು ಅರಿತ ಮಾಯಾ, ಈಗ ಅಂಬಿಕಾಳಿಗೇ ಸಹಾಯ ಮಾಡಬೇಕೋ ಅಥವಾ ಮಾಳವಿಕಾ ಪರ ನಿಲ್ಲಬೇಕೋ ಎಂಬ ಗೊಂದಲದಲ್ಲಿದ್ದಾಳೆ. ಮಾಯಾಳ ಪಾತ್ರದಲ್ಲಿ ದೊಡ್ಡ ಬದಲಾವಣೆ ಬರಲಿದ್ದು, ಆಕೆ ಮಾಳವಿಕಾಳ ಕುತಂತ್ರಕ್ಕೆ ಮತ್ತೊಮ್ಮೆ ಅಸ್ತ್ರವಾಗುವ ಸಾಧ್ಯತೆಯೂ ಇದೆ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?
ನಾ ನಿನ್ನ ಬಿಡಲಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 11, 2026 | 7:55 AM

Share

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು ಕೆಟ್ಟವಳು ಎಂಬುದು ಮಾಯಾಗೆ ಗೊತ್ತಾಗಿ ಹೋಗಿದೆ. ಈ ಕಾರಣಕ್ಕೆ ಆಕೆಗೆ ತಲೆಬಿಸಿ ಶುರುವಾಗಿದೆ. ಅಂಬಿಕಾನ ಸಾವಿಗೆ ನಾನೇ ಕಾರಣ ಎಂದು ಆಕೆಗೆ ಅನಿಸಿತ್ತು. ಆದರೆ, ಇದರ ಹಿಂದೆ ಮಾಳವಿಕಾ ಕೈವಾಡ ಇದೆ ಎಂಬ ಅನುಮಾನ ಅವಳಿಗೆ ಬಂದಿದೆ.

ಈ ವಿಷಯವನ್ನು ಮಾಯಾ, ಅಂಬಿಕಾ ಆತ್ಮದ ಬಳಿ ಪ್ರಶ್ನೆ ಮಾಡಿದ್ದಾಳೆ. ‘ನಿನ್ನ ಕೊಲೆಯಲ್ಲಿ ಮಾಳವಿಕಾ ಕೈವಾಡ ಇದೆ ಅಲ್ಲವೆ? ನಾನು ಕೇವಲ ಅಸ್ತ್ರ ಮಾತ್ರ ಆಗಿದ್ದೆ ಅಲ್ಲವೇ’ ಎಂದು ಮಾಯಾ ಪ್ರಶ್ನೆ ಮಾಡಿದ್ದಾಳೆ. ಇದಕ್ಕೆ ಅಂಬಿಕಾ ಹೌದು ಎಂಬ ಉತ್ತರ ನೀಡಿದ್ದಾಳೆ. ಇದರಿಂದ ಅವಳಿಗೆ ಎಲ್ಲವೂ ಸ್ಪಷ್ಟವಾಗಿದೆ. ಮುಂದೇನು ಮಾಡಬೇಕು ಎಂಬ ಚಿಂತೆ ಬಹುವಾಗಿ ಕಾಡುತ್ತಿದೆ.

View this post on Instagram

A post shared by Zee Kannada (@zeekannada)

ಆಕೆಯ ಮುಂದೆ ಈಗ ಎರಡು ಆಯ್ಕೆ ಇದೆ. ಒಂದು ಆಕೆ ನೇರವಾಗಿ ಅಂಬಿಕಾಗೆ ಸಹಾಯ ಮಾಡಬೇಕು ಅಥವಾ ಮಾಳವಿಕಾ ಪರವಾಗಿ ನಿಂತು ತಾನೂ ಕಷ್ಟ ಅನುಭವಿಸಬೇಕು. ಹೀಗಾಗಿ, ಆಕೆಯ ಗುಣದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್

ಈಗ ಸದ್ಯ ಅವಳು ಅಂಬಿಕಾಳನ್ನು ದ್ವೇಷಿಸೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾಳೆ. ಆದರೆ, ದಿನ ಕಳೆದಂತೆ ಮಾಯಾ ಪಾತ್ರದಲ್ಲಿ ಬದಲಾವಣೆ ಕಾಣಬಹುದು. ಅವುಳು ಕೂಡ ಮಾಳವಿಕಾಳ ಅಸ್ತ್ರ ಆಗಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ