AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಸ್ಟೈಲ್​​ನಲ್ಲಿ ಬಿಗ್ ಬಾಸ್ ನಿರೂಪಣೆ ಮಾಡಲು ನಿರ್ಧರಿಸಿದ ನಟ ನಾಗಾರ್ಜುನ?

ಈವರೆಗೂ ತೆಲುಗಿನಲ್ಲಿ ಬಿಗ್ ಬಾಸ್ 8 ಸೀಸನ್​​​ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈಗ 9ನೇ ಸೀಸನ್ ಶುರುವಾಗುತ್ತಿದೆ. ಈ ಬಾರಿ ಕೂಡ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಅವರು ಬಿಗ್ ಬಾಸ್ ಶೋ ನಿರೂಪಣೆ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅವರ ರೀತಿ ನಾಗಾರ್ಜುನ ಸಹ ಬಹಳ ಕಟ್ಟುನಿಟ್ಟಾಗಿ ಈ ಬಾರಿ ಶೋ ನಡೆಸಿಕೊಡಲಿದ್ದಾರೆ ಎನ್ನಲಾಗಿದೆ.

ಕಿಚ್ಚ ಸುದೀಪ್ ಸ್ಟೈಲ್​​ನಲ್ಲಿ ಬಿಗ್ ಬಾಸ್ ನಿರೂಪಣೆ ಮಾಡಲು ನಿರ್ಧರಿಸಿದ ನಟ ನಾಗಾರ್ಜುನ?
Kichcha Sudeep, Nagarjuna
ಮದನ್​ ಕುಮಾರ್​
|

Updated on: Sep 07, 2025 | 7:38 AM

Share

ಬಿಗ್ ಬಾಸ್ ಕಾಲ ಆರಂಭ ಆಗಿದೆ. ಹಿಂದಿಯಲ್ಲಿ ಹೊಸ ಸೀಸನ್ ಶುರುವಾಗಿದೆ. ತೆಲುಗಿನಲ್ಲಿ ಸೆಪ್ಟೆಂಬರ್ 7ರಿಂದ ಬಿಗ್ ಬಾಸ್ 9ನೇ ಸೀಸನ್ ಪ್ರಸಾರ ಆಗಲಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ನಡೆಸಿಕೊಡಲಿದ್ದಾರೆ. ಎಲ್ಲ ಭಾಷೆಗಳಲ್ಲೂ ಬಿಗ್ ಬಾಸ್ ರಿಯಾಲಿಟಿ ಶೋಗೆ ಜನಪ್ರಿಯತೆ ಇದೆ. ಈ ಬಾರಿ ಕೂಡ ತೆಲುಗಿನಲ್ಲಿ ನಾಗಾರ್ಜುನ (Nagarjuna) ಅವರು ಬಿಗ್ ಬಾಸ್ ನಿರೂಪಣೆ ಮಾಡುತ್ತಿದ್ದಾರೆ. ಟ್ವಿಸ್ಟ್ ಏನೆಂದರೆ ಅವರು ತಮ್ಮ ನಿರೂಪಣಾ ಶೈಲಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ಸುದೀಪ್ ರೀತಿ ಖಡಕ್ ಆಗಿ ಶೋ ನಡೆಸಿಕೊಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡುವ ರೀತಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಯಾರೇ ಬಂದರೂ ಸುದೀಪ್ ಅವರು ಬೇಧ-ಭಾವ ಮಾಡುವವರಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುತ್ತಾರೆ. ಸ್ಪರ್ಧಿಗಳನ್ನು ತಮ್ಮ ಮನೆಯ ಸದಸ್ಯರಂತೆಯೇ ಪ್ರೀತಿಸುತ್ತಾರೆ. ಆದರೆ ಅದೇ ಸ್ಪರ್ಧಿಗಳು ತಪ್ಪು ಮಾಡಿದಾಗ ಮುಲಾಜಿಲ್ಲದೇ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಕಟು ಮಾತುಗಳಿಂದ ಟೀಕಿಸುತ್ತಾರೆ.

ಈ ಹಿಂದಿನ ಸೀಸನ್​​ಗಳಲ್ಲಿ ನಾಗಾರ್ಜುನ ಅವರು ಸ್ಪರ್ಧಿಗಳ ಬಗ್ಗೆ ಕೊಂಚ ಮೃದು ಧೋರಣೆ ಹೊಂದಿದ್ದರು. ಸ್ಪರ್ಧಿಗಳು ನಿಯಮ ಮುರಿದಾಗ ಅಷ್ಟೇನೂ ಗಟ್ಟಿ ಧ್ವನಿಯಲ್ಲಿ ಎಚ್ಚರಿಕೆ ನೀಡಿರಲಿಲ್ಲ. ಇದರಿಂದ ತೆಲುಗು ಬಿಗ್ ಬಾಸ್ ಮನೆಯೊಳಗೆ ಅಂಥದ್ದೇನೂ ಡ್ರಾಮಾ ನಡೆಯಲಿಲ್ಲ. ಈ ಬಾರಿ ಆ ರೀತಿ ಆಗದಂತೆ ನೋಡಿಕೊಳ್ಳಲು ಅವರು ತೀರ್ಮಾನಿಸಿದ್ದಾರೆ.

ಕಿಚ್ಚ ಸುದೀಪ್ ರೀತಿಯೇ ನಾಗಾರ್ಜುನ ಕೂಡ ಈ ಬಾರಿ ಕಟ್ಟುನಿಟ್ಟಾಗಿ ನಡೆದುಕೊಳ್ಳಲಿದ್ದಾರೆ. ಒಂದುವೇಳೆ ಸ್ಪರ್ಧಿಗಳಿಂದ ಮನೆಯ ನಿಯಮಗಳು ಉಲ್ಲಂಘನೆ ಆದರೆ ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ. ಆ ಮೂಲಕ ಶೋನಲ್ಲಿ ಹೆಚ್ಚಿನ ಕುತೂಹಲ ಇರುವಂತೆ ನೋಡಿಕೊಳ್ಳಲಿದ್ದಾರೆ ಎಂದು ತೆಲುಗಿನ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಈ ಬಾರಿ ಬಿಗ್ ಬಾಸ್ ನಿರೂಪಣೆಗೆ ನಾಗಾರ್ಜುನ ಪಡೆಯುವ ಸಂಭಾವನೆ ಎಷ್ಟು ಕೋಟಿ?

ಈಗಾಗಲೇ ‘ತೆಲುಗು ಬಿಗ್ ಬಾಸ್ 9’ ಶೂಟಿಂಗ್ ಆರಂಭ ಆಗಿದೆ. ಹೈದರಾಬಾದ್​​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಸೆಪ್ಟೆಂಬರ್ 7ರ ಸಂಜೆ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಹೊಸ ಸ್ಪರ್ಧಿಗಳ ಆಟ ನೋಡಲು ವೀಕ್ಷಕರು ಸಜ್ಜಾಗಿದ್ದಾರೆ. ಹೊಸ ಥೀಮ್​​ನಲ್ಲಿ ತೆಲುಗು ಬಿಗ್ ಬಾಸ್ ಮನೆ ಸಿದ್ಧವಾಗಿದೆ. ಹೆಚ್ಚಿನ ಎನರ್ಜಿಯೊಂದಿಗೆ ನಾಗಾರ್ಜುನ ಅವರು ನಿರೂಪಣೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!