AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮನೆ ಯುವರಾಣಿ’ ಅಂಕಿತಾಗೆ ಹೊಗಳಿಕೆಯೋ ಹೊಗಳಿಕೆ; ಆದರೆ ಇದು ನಟನೆ ವಿಚಾರಕ್ಕಲ್ಲ

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ಅವರು ಜಡ್ಜ್​​ ಆಗಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು.

‘ನಮ್ಮನೆ ಯುವರಾಣಿ’ ಅಂಕಿತಾಗೆ ಹೊಗಳಿಕೆಯೋ ಹೊಗಳಿಕೆ; ಆದರೆ ಇದು ನಟನೆ ವಿಚಾರಕ್ಕಲ್ಲ
ಅಂಕಿತಾ
TV9 Web
| Edited By: |

Updated on:Sep 23, 2021 | 12:17 PM

Share

‘ನಮ್ಮನೆ ಯುವರಾಣಿ’ ಧಾರಾವಾಹಿ ಮೂಲಕ ಹೆಚ್ಚು ಮನೆ ಮಾತಾದವರು ಅಂಕಿತಾ. ಮೀರಾ ಪಾತ್ರದಲ್ಲಿ ನಟಿಸುವ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿಕೊಂಡರು. ಈಗ ಅವರನ್ನು ಅಭಿಮಾನಿಗಳು ಬಾಯ್ತುಂಬ ಹೊಗಳುತ್ತಿದ್ದಾರೆ. ಹಾಗಂತ ಇದು ನಟನೆ ವಿಚಾರಕ್ಕಲ್ಲ. ಹಾಗಾದರೆ ಮತ್ತಿನ್ನೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ಅವರು ಜಡ್ಜ್​​ ಆಗಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸಿದೆ. ಆಗಸ್ಟ್​ 14ರಿಂದ ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಭಿನ್ನ ಟ್ಯಾಲೆಂಟ್​ಗಳು ವೇದಿಕೆ ಏರಿದ್ದು, ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಕ್ಕೆ ಅಂಕಿತಾ ನಿರೂಪಕಿ.

ಅಂಕಿತಾ ಅವರ ನಿರೂಪಣೆ ಅನೇಕರಿಗೆ ಇಷ್ಟವಾಗಿದೆ. ಅವರನ್ನು ಅಭಿಮಾನಿಗಳು ಬಾಯ್ತುಂಬ ಹೊಗಳುತ್ತಿದ್ದಾರೆ. ‘ಅಂಕಿತಾ ಮೇಡಮ್​ ನೀವು ಈ ಮೊದಲು ಆ್ಯಂಕರಿಂಗ್​ ಮಾಡಿದ್ರಾ? ಎಷ್ಟು ಚೆನ್ನಾಗಿ ನಿರೂಪಣೆ ಮಾಡುತ್ತಾ ಇದ್ದೀರಿ. ಜಡ್ಜ್​ ಹಾಗೂ ಸ್ಪರ್ಧಿಗಳ ಜತೆಗಿನ ಸಂಭಾಷಣೆ ತುಂಬಾನೇ ಸಿಂಪಲ್​ ಮತ್ತು ನ್ಯಾಚುರಲ್​ ಆಗಿದೆ. ಎದೆ ತುಂಬಿ ಹಾಡುವೆನು ಶೋ ಈಸ್​ ದಿ ಬೆಸ್ಟ್​’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಅಂಕಿತಾ ನಟನೆ ಮೂಲಕ ಹೆಚ್ಚು ಗುರುತಿಸಿಕೊಂಡವರು. ನಿರೂಪಣೆ ಅವರಿಗೆ ಹೊಸದು. ಆದಾಗ್ಯೂ ಹೆಚ್ಚು ಆತ್ಮವಿಶ್ವಾಸದಿಂದ ಅವರು ಶೋ ನಡೆಸಿಕೊಡುತ್ತಿದ್ದಾರೆ. ಈ ಮೂಲಕ ಹೊಸ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆ. ಅಂಕಿತಾ ನೃತ್ಯ ಮತ್ತು ಸಂಗೀತದ ಬಗ್ಗೆ ಹೆಚ್ಚು ಒಲವು ಹೊಂದಿದ್ದಾರೆ. ನಟನೆಯಲ್ಲಿ ಪಳಗಲು ನೃತ್ಯ ತುಂಬಾನೇ ಸಹಕಾರಿಯಾಗಿದೆ ಎಂದು ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಇನ್ನು, ಸಂಗೀತದ ಬಗ್ಗೆ ಅವರಿಗೆ ಎಲ್ಲಿಲ್ಲದ ಆಸಕ್ತಿ. ಹೀಗಿರುವಾಗಲೇ ಸಂಗೀತ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಶೋ ಅನ್ನು ನಡೆಸಿಕೊಡುತ್ತಿರುವುದಕ್ಕೆ ಅವರು ಸಾಕಷ್ಟು ಖುಷಿಯಾಗಿದ್ದಾರೆ.

ಇದನ್ನೂ ಓದಿ: ‘ಕೂಲಿನಾಲಿ ಮಾಡಿ ತಾಯಿಯೇ ನನ್ನನ್ನು ಸಾಕಿದ್ದು’; ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಕಣ್ಣೀರಿಟ್ಟ ಸೂರ್ಯಕಾಂತ್​

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

Published On - 7:51 am, Thu, 23 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ