AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮನೆ ಯುವರಾಣಿ’ ಅಂಕಿತಾಗೆ ಹೊಗಳಿಕೆಯೋ ಹೊಗಳಿಕೆ; ಆದರೆ ಇದು ನಟನೆ ವಿಚಾರಕ್ಕಲ್ಲ

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ಅವರು ಜಡ್ಜ್​​ ಆಗಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು.

‘ನಮ್ಮನೆ ಯುವರಾಣಿ’ ಅಂಕಿತಾಗೆ ಹೊಗಳಿಕೆಯೋ ಹೊಗಳಿಕೆ; ಆದರೆ ಇದು ನಟನೆ ವಿಚಾರಕ್ಕಲ್ಲ
ಅಂಕಿತಾ
TV9 Web
| Edited By: |

Updated on:Sep 23, 2021 | 12:17 PM

Share

‘ನಮ್ಮನೆ ಯುವರಾಣಿ’ ಧಾರಾವಾಹಿ ಮೂಲಕ ಹೆಚ್ಚು ಮನೆ ಮಾತಾದವರು ಅಂಕಿತಾ. ಮೀರಾ ಪಾತ್ರದಲ್ಲಿ ನಟಿಸುವ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿಕೊಂಡರು. ಈಗ ಅವರನ್ನು ಅಭಿಮಾನಿಗಳು ಬಾಯ್ತುಂಬ ಹೊಗಳುತ್ತಿದ್ದಾರೆ. ಹಾಗಂತ ಇದು ನಟನೆ ವಿಚಾರಕ್ಕಲ್ಲ. ಹಾಗಾದರೆ ಮತ್ತಿನ್ನೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ಅವರು ಜಡ್ಜ್​​ ಆಗಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ಈಗ ಕಲರ್ಸ್​ ಕನ್ನಡ ವಾಹಿನಿ ಈ ಶೋನ ಹೊಸ ಸೀಸನ್​ ಆರಂಭಿಸಿದೆ. ಆಗಸ್ಟ್​ 14ರಿಂದ ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಭಿನ್ನ ಟ್ಯಾಲೆಂಟ್​ಗಳು ವೇದಿಕೆ ಏರಿದ್ದು, ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಕ್ಕೆ ಅಂಕಿತಾ ನಿರೂಪಕಿ.

ಅಂಕಿತಾ ಅವರ ನಿರೂಪಣೆ ಅನೇಕರಿಗೆ ಇಷ್ಟವಾಗಿದೆ. ಅವರನ್ನು ಅಭಿಮಾನಿಗಳು ಬಾಯ್ತುಂಬ ಹೊಗಳುತ್ತಿದ್ದಾರೆ. ‘ಅಂಕಿತಾ ಮೇಡಮ್​ ನೀವು ಈ ಮೊದಲು ಆ್ಯಂಕರಿಂಗ್​ ಮಾಡಿದ್ರಾ? ಎಷ್ಟು ಚೆನ್ನಾಗಿ ನಿರೂಪಣೆ ಮಾಡುತ್ತಾ ಇದ್ದೀರಿ. ಜಡ್ಜ್​ ಹಾಗೂ ಸ್ಪರ್ಧಿಗಳ ಜತೆಗಿನ ಸಂಭಾಷಣೆ ತುಂಬಾನೇ ಸಿಂಪಲ್​ ಮತ್ತು ನ್ಯಾಚುರಲ್​ ಆಗಿದೆ. ಎದೆ ತುಂಬಿ ಹಾಡುವೆನು ಶೋ ಈಸ್​ ದಿ ಬೆಸ್ಟ್​’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಅಂಕಿತಾ ನಟನೆ ಮೂಲಕ ಹೆಚ್ಚು ಗುರುತಿಸಿಕೊಂಡವರು. ನಿರೂಪಣೆ ಅವರಿಗೆ ಹೊಸದು. ಆದಾಗ್ಯೂ ಹೆಚ್ಚು ಆತ್ಮವಿಶ್ವಾಸದಿಂದ ಅವರು ಶೋ ನಡೆಸಿಕೊಡುತ್ತಿದ್ದಾರೆ. ಈ ಮೂಲಕ ಹೊಸ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆ. ಅಂಕಿತಾ ನೃತ್ಯ ಮತ್ತು ಸಂಗೀತದ ಬಗ್ಗೆ ಹೆಚ್ಚು ಒಲವು ಹೊಂದಿದ್ದಾರೆ. ನಟನೆಯಲ್ಲಿ ಪಳಗಲು ನೃತ್ಯ ತುಂಬಾನೇ ಸಹಕಾರಿಯಾಗಿದೆ ಎಂದು ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಇನ್ನು, ಸಂಗೀತದ ಬಗ್ಗೆ ಅವರಿಗೆ ಎಲ್ಲಿಲ್ಲದ ಆಸಕ್ತಿ. ಹೀಗಿರುವಾಗಲೇ ಸಂಗೀತ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಶೋ ಅನ್ನು ನಡೆಸಿಕೊಡುತ್ತಿರುವುದಕ್ಕೆ ಅವರು ಸಾಕಷ್ಟು ಖುಷಿಯಾಗಿದ್ದಾರೆ.

ಇದನ್ನೂ ಓದಿ: ‘ಕೂಲಿನಾಲಿ ಮಾಡಿ ತಾಯಿಯೇ ನನ್ನನ್ನು ಸಾಕಿದ್ದು’; ಎದೆ ತುಂಬಿ ಹಾಡುವೆನು ವೇದಿಕೆ ಮೇಲೆ ಕಣ್ಣೀರಿಟ್ಟ ಸೂರ್ಯಕಾಂತ್​

ಅಭಿಮಾನಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ‘ನಮ್ಮನೆ ಯುವರಾಣಿ’ ಅಂಕಿತಾ; ಇದು ಫ್ಯಾನ್ಸ್​ಗೆ ಖುಷಿಯಾಗೋ ವಿಚಾರ

Published On - 7:51 am, Thu, 23 September 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ