AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿ ಒಪ್ಪಿಕೊಳ್ಳಲು ಕಾರಣ ಆಯ್ತು ಒಂದು ಅಂಶ; ವಿವರಿಸಿದ ನಮ್ರತಾ ಗೌಡ  

ಜೀ ಕನ್ನಡದ ‘ಕರ್ಣ’ ಧಾರಾವಾಹಿಯಲ್ಲಿ ನಮ್ರತಾ ಗೌಡ ಅವರು ನಿತ್ಯಾ ಪಾತ್ರದಲ್ಲಿ ನಟಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಭಾಗಿ ಆಗಿದ್ದ ಅವರು ಅಪಾರ ಜನಪ್ರಿಯತೆ ಪಡೆದರು. ಇದಾದ ಬಳಿಕ ಅವರು ಯಾವುದೇ ಆಫರ್​ನ ಒಪ್ಪಿಕೊಂಡಿರಲಿಲ್ಲ. ಈಗ ಅವರು ಹೊಸ ಧಾರಾವಾಹಿಯಲ್ಲಿ ಕಾಣಿಸಿಕೊಂಡು ಮೆಚ್ಚುಗೆ ಪಡೆದಿದ್ದಾರೆ.

‘ಕರ್ಣ’ ಧಾರಾವಾಹಿ ಒಪ್ಪಿಕೊಳ್ಳಲು ಕಾರಣ ಆಯ್ತು ಒಂದು ಅಂಶ; ವಿವರಿಸಿದ ನಮ್ರತಾ ಗೌಡ  
ನಮ್ರತಾ ಗೌಡ
ರಾಜೇಶ್ ದುಗ್ಗುಮನೆ
|

Updated on:Jul 08, 2025 | 12:32 PM

Share

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ (Karna Serial) ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯಲ್ಲಿ ಕಿರಣ್ ರಾಜ್​, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ನಮ್ರತಾ ಅವರು ಈ ಧಾರಾವಾಹಿಯಲ್ಲಿ ನಿತ್ಯಾ ಹೆಸರಿನ ಪಾತ್ರ ಮಾಡಿದ್ದಾರೆ. ಈ ಧಾರಾವಾಹಿಯ ಕೆಲವು ಎಪಿಸೋಡ್​ಗಳು ಪ್ರಸಾರ ಕಂಡಿದ್ದು ಪ್ರೇಕ್ಷಕರಿಗೆ ಇಷ್ಟವಾಗಿದೆ. ಈ ಧಾರಾವಾಹಿಯಲ್ಲಿ ವಿವಿಧ ಭಾವನೆಗಳನ್ನು ತೋರಿಸಲಾಗುತ್ತಿದೆ. ‘ಕರ್ಣ’ ಇಷ್ಟ ಆಗಲು ಕಾರಣ ಏನು ಎಂಬುದನ್ನು ನಮ್ರತಾ ಗೌಡ ಅವರು ವಿವರಿಸಿದ್ದಾರೆ. ಅವರು ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ಜೊತೆ ಮಾತನಾಡಿದ್ದಾರೆ.

ಎರಡು ವರ್ಷದ ಹಿಂದೇ ಬಂದಿತ್ತು ಆಫರ್..

‘ಬಿಗ್ ಬಾಸ್ ಆದಮೇಲೆ ಸಾಕಷ್ಟು ಆಫರ್​ಗಳು ಬಂದವು. ಯಾವುದೂ ಇಷ್ಟ ಆಗಿಲ್ಲ. ಒಳ್ಳೆಯ ಪಾತ್ರ ಹಾಗೂ ಕಥೆ ಹುಡುಕುವಾಗ ಸಿಕ್ಕಿದ್ದೇ ಕರ್ಣ’ ಎಂದಿದ್ದಾರೆ ನಮ್ರತಾ ಗೌಡ. ಇಲ್ಲೊಂದು ಟ್ವಿಸ್ಟ್ ಇದೆ. ಈ ಧಾರಾವಾಹಿಯ ಆಫರ್​ ನಮ್ರತಾಗೆ ಎರಡು ವರ್ಷಗಳ ಹಿಂದೇ ಬಂದಿತ್ತಂತೆ. ‘ಬಿಗ್ ಬಾಸ್​ಗೆ ಹೋಗುವ ಮೊದಲೇ ನನಗೆ ನಿತ್ಯಾ ಪಾತ್ರದ ಆಫರ್ ಬಂದಿತ್ತು. ಆದರೆ, ಧಾರಾವಾಹಿ ಸೆಟ್ಟೇರಲಿಲ್ಲ. ಈಗ ಮತ್ತೆ ನನ್ನನ್ನು ಅಪ್ರೋಚ್ ಮಾಡಿದರು. ನಾನು ಓಕೆ ಎಂದೆ. ಆರಂಭದ ಎಪಿಸೋಡ್​ನಲ್ಲಿ ನಾನು ಹೆಚ್ಚು ತೆರೆಮೇಲೆ ಕಾಣಿಸಿಕೊಳ್ಳೋದಿಲ್ಲ. ಆದಾಗ್ಯೂ ಜನರು ಹೆಚ್ಚಿನ ಪ್ರೀತಿ ಕೊಟ್ಟಿದ್ದಾರೆ’ ಎಂದಿದ್ದಾರೆ ಅವರು.

ಭವ್ಯಾ ಜೊತೆ ಬಾಂಡಿಂಗ್..

ಈ ಧಾರಾವಾಹಿಯಲ್ಲಿ ನಮ್ರತಾ ಅವರು ಭವ್ಯಾ ಗೌಡನ ಅಕ್ಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರನ್ನು ತೆರೆಮೇಲೆ ನೋಡಿದಾಗ ಇವರು ನಿಜವಾದ ಸಹೋದರಿಯರು ಎನ್ನುವ ಫೀಲ್ ಬರುತ್ತದೆ. ‘ನಾನು ಭವ್ಯಾ ಈ ಮೊದಲು ಒಂದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಕೆಲಸ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯೆ ಒಳ್ಳೆಯ ಪರಿಚಯ ಇದೆ. ನಮ್ಮಿಬ್ಬರ ಮಧ್ಯೆ ಒಳ್ಳೆಯ ಒಡನಾಟ ಇದ್ದಿದ್ದರಿಂದ ಆ ಕೆಮಿಸ್ಟ್ರಿ ತರೋಕೆ ಸುಲಭ ಆಯ್ತು’ ಎನ್ನುತ್ತಾರೆ ನಮ್ರತಾ.

ಇದನ್ನೂ ಓದಿ
Image
ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
Image
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ
Image
PHOTOS: ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್
Image
ರಿಲೀಸ್​ಗೆ ಒಂದು ತಿಂಗಳಿರುವಾಗ ಶೂಟ್ ಮುಗಿಸಿದ ‘ವಾರ್ 2’

ಧಾರಾವಾಹಿ ಇಷ್ಟ ಆಗೋಕೆ ಒಂದು ಕಾರಣ..

ಈ ಧಾರಾವಾಹಿಯಲ್ಲಿ ನಿತ್ಯಾ ಹೆಸರಿನ ಕ್ಯಾರೆಕ್ಟರ್ ನೋಡಿ ನಮ್ರತಾ ನಿಜಕ್ಕೂ ಖುಷಿಪಟ್ಟರಂತೆ. ‘ನಾನು ನಿಜ ಜೀವನದಲ್ಲಿ ತುಂಬಾನೇ ಪ್ರ್ಯಾಕ್ಟಿಕಲ್ ಆಗಿ ಆಲೋಚಿಸುತ್ತೇನೆ. ಭಾವನೆಗಳನ್ನು ತೋರಿಸಿಕೊಳ್ಳೋದಿಲ್ಲ. ಆ ಪಾತ್ರ ಕೂಡ ಹಾಗೆಯೇ ಇದೆ. ಕೆಲವು ಧಾರಾವಾಹಿಗಳಲ್ಲಿ ಕಥಾ ನಾಯಕಿ ಸ್ವಲ್ಪ ಅಳುಮುಂಜಿ ಆಗಿರುತ್ತಾಳೆ ಅಥವಾ ಸಾಫ್ಟ್ ಆಗಿರುತ್ತಾಳೆ. ಆದರೆ, ನಿತ್ಯಾ ಪಾತ್ರ ಇದಕ್ಕೆ ಸಂಪೂರ್ಣ ಭಿನ್ನವಾಗಿದೆ. ಈ ಕಾರಣಕ್ಕೆ ನನಗೆ ಪಾತ್ರ ಸಖತ್ ಇಷ್ಟ ಆಯ್ತು. ಹೀಗಾಗಿ ಧಾರಾವಾಹಿ ಒಪ್ಪಿಕೊಂಡೆ’ ಎನ್ನುತ್ತಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:28 pm, Tue, 8 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​