AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆಗಿ ಅಂತ ಕೂತ್ಕೋತಿನಿ, ಆಗ್ತೀರಾ?’; ಕಾರ್ತಿಕ್​ಗೆ ನಮ್ರತಾ ನೇರ ಪ್ರಶ್ನೆ

ನಮ್ರತಾ ಜೊತೆ ಡೇಟ್​ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ.

‘ಮದುವೆ ಆಗಿ ಅಂತ ಕೂತ್ಕೋತಿನಿ, ಆಗ್ತೀರಾ?’; ಕಾರ್ತಿಕ್​ಗೆ ನಮ್ರತಾ ನೇರ ಪ್ರಶ್ನೆ
ನಮ್ರತಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Dec 30, 2023 | 8:11 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಕಾರ್ತಿಕ್ (Karthik Mahesh) ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ನಮ್ರತಾ ಕೂಡ ಇತ್ತೀಚೆಗೆ ಮೆಚ್ಚುಗೆ ಪಡೆಯುತ್ತಿದ್ದಾರೆ. ಕಾರ್ತಿಕ್ ಅವರು ಮೊದಲಿನಿಂದಲೂ ನಮ್ರತಾ ಜೊತೆ ಕ್ಲೋಸ್ ಆಗೋಕೆ ಪ್ರಯತ್ನಿಸಿದ್ದರು. ಸ್ನೇಹಿತ್ ಹೋದ ಮೇಲೆ ಇಬ್ಬರ ಮಧ್ಯೆ ಒಳ್ಳೆಯ ರ‍್ಯಾಪೋ ಬೆಳೆಯುತ್ತಿದೆ. ಕಾರ್ತಿಕ್ ಹಾಗೂ ನಮ್ರತಾ ಕ್ಲೋಸ್ ಆಗುತ್ತಿದ್ದಾರೆ. ಈಗ ಇಬ್ಬರೂ ಓಪನ್ ಆಗಿ ಫ್ಲರ್ಟ್ ಮಾಡಿದ್ದಾರೆ. ಇದು ಸಖತ್ ಫನ್ನಿ ಆಗಿತ್ತು.

ನಮ್ರತಾ ಜೊತೆ ಡೇಟ್​ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ. ತಮ್ಮ ತಾಯಿ ಬಂದಾಗಲೂ ಕಾರ್ತಿಕ್ ಈ ವಿಚಾರ ತೆಗೆದಿದ್ದರು. ‘ನಾನು ನಮ್ರತಾ ಜೊತೆ ಡೇಟ್​ಗೆ ಹೋಗಲೇ’ ಎಂದು ಕೇಳಿದ್ದರು. ಈಗ ಕಾರ್ತಿಕ್ ಹಾಗೂ ನಮ್ರತಾ ಆಡಿದ ಮಾತು ಗಮನ ಸೆಳೆಯುತ್ತಿದೆ.

ಕಾರ್ತಿಕ್ ಅವರು ಅಡುಗೆ ಮನೆಗೆ ಹೊರಟಿದ್ದರು. ಈ ವೇಳೆ ಕಾರ್ತಿಕ್​ ಅವರನ್ನು ನಮ್ರತಾ ಕರೆದರು. ‘ಐದು ನಿಮಿಷ ಇಲ್ಲಿ ಬನ್ನಿ. ಕುಳಿತು ನನ್ನನ್ನು ನೋಡಿ’ ಎಂದಿದ್ದಾರೆ. ಕಾರ್ತಿಕ್ ಈ ಮಾತನ್ನು ಗಂಭೀರವಾಗಿ ಸ್ವೀಕರಿಸಿದ್ದಾರೆ. ಜೊತೆಗೆ ನಮ್ರತಾ ಇದ್ದಲ್ಲಿ ಹೋಗಿ ಕುಳಿತಿದ್ದಾರೆ. ‘ನಾನು ಜೋಕ್ ಮಾಡಿದ್ದು. ನೀವು ಗಂಭೀರವಾಗಿ ಸ್ವೀಕರಿಸಿದ್ರಲ್ಲ’ ಎಂದರು ನಮ್ರತಾ.

ಇದನ್ನೂ ಓದಿ: ಬೇರೆಯವರ ಜೊತೆ ನಮ್ರತಾ ಗೌಡ ಮದುವೆ ಫಿಕ್ಸ್​ ಆದರೆ ಸ್ನೇಹಿತ್​ ಹೀಗೆಲ್ಲ ಮಾಡ್ತಾರಾ?

‘ರೋಗಿ ಬಯಸಿದ್ದು ಹಾಲು ಅನ್ನ.. ವೈದ್ಯ ಹೇಳಿದ್ದೂ ಅದೇ. ಸುಮ್ನೆ ಹೋಗ್ತಾ ಇದ್ದವನ್ನ ಕರೆದ್ರೆ ಏನು ಮಾಡೋದು’ ಎಂದು ಕಾರ್ತಿಕ್ ಕೇಳಿದರು. ‘15 ದಿನದಲ್ಲಿ ಲವ್ ಆಗಿ, ಕಾರ್ತಿಕ್​ನೇ ಬೇಕು ಅಂತ ಅತ್ತು ಕರೆದರೆ ಏನು ಮಾಡ್ತೀರಿ? ಮದುವೆ ಆಗಿ ಅಂತ ಕೂತ್ಕೋತಿನಿ ಆಗ್ತೀರಾ’ ಎಂದು ನಮ್ರತಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕಾರ್ತಿಕ್​ಗೆ ಏನು ಉತ್ತರ ಹೇಳಬೇಕು ಎಂಬುದೇ ತಿಳಿದಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!