AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆಗಿ ಅಂತ ಕೂತ್ಕೋತಿನಿ, ಆಗ್ತೀರಾ?’; ಕಾರ್ತಿಕ್​ಗೆ ನಮ್ರತಾ ನೇರ ಪ್ರಶ್ನೆ

ನಮ್ರತಾ ಜೊತೆ ಡೇಟ್​ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ.

‘ಮದುವೆ ಆಗಿ ಅಂತ ಕೂತ್ಕೋತಿನಿ, ಆಗ್ತೀರಾ?’; ಕಾರ್ತಿಕ್​ಗೆ ನಮ್ರತಾ ನೇರ ಪ್ರಶ್ನೆ
ನಮ್ರತಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Dec 30, 2023 | 8:11 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಕಾರ್ತಿಕ್ (Karthik Mahesh) ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ನಮ್ರತಾ ಕೂಡ ಇತ್ತೀಚೆಗೆ ಮೆಚ್ಚುಗೆ ಪಡೆಯುತ್ತಿದ್ದಾರೆ. ಕಾರ್ತಿಕ್ ಅವರು ಮೊದಲಿನಿಂದಲೂ ನಮ್ರತಾ ಜೊತೆ ಕ್ಲೋಸ್ ಆಗೋಕೆ ಪ್ರಯತ್ನಿಸಿದ್ದರು. ಸ್ನೇಹಿತ್ ಹೋದ ಮೇಲೆ ಇಬ್ಬರ ಮಧ್ಯೆ ಒಳ್ಳೆಯ ರ‍್ಯಾಪೋ ಬೆಳೆಯುತ್ತಿದೆ. ಕಾರ್ತಿಕ್ ಹಾಗೂ ನಮ್ರತಾ ಕ್ಲೋಸ್ ಆಗುತ್ತಿದ್ದಾರೆ. ಈಗ ಇಬ್ಬರೂ ಓಪನ್ ಆಗಿ ಫ್ಲರ್ಟ್ ಮಾಡಿದ್ದಾರೆ. ಇದು ಸಖತ್ ಫನ್ನಿ ಆಗಿತ್ತು.

ನಮ್ರತಾ ಜೊತೆ ಡೇಟ್​ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ. ತಮ್ಮ ತಾಯಿ ಬಂದಾಗಲೂ ಕಾರ್ತಿಕ್ ಈ ವಿಚಾರ ತೆಗೆದಿದ್ದರು. ‘ನಾನು ನಮ್ರತಾ ಜೊತೆ ಡೇಟ್​ಗೆ ಹೋಗಲೇ’ ಎಂದು ಕೇಳಿದ್ದರು. ಈಗ ಕಾರ್ತಿಕ್ ಹಾಗೂ ನಮ್ರತಾ ಆಡಿದ ಮಾತು ಗಮನ ಸೆಳೆಯುತ್ತಿದೆ.

ಕಾರ್ತಿಕ್ ಅವರು ಅಡುಗೆ ಮನೆಗೆ ಹೊರಟಿದ್ದರು. ಈ ವೇಳೆ ಕಾರ್ತಿಕ್​ ಅವರನ್ನು ನಮ್ರತಾ ಕರೆದರು. ‘ಐದು ನಿಮಿಷ ಇಲ್ಲಿ ಬನ್ನಿ. ಕುಳಿತು ನನ್ನನ್ನು ನೋಡಿ’ ಎಂದಿದ್ದಾರೆ. ಕಾರ್ತಿಕ್ ಈ ಮಾತನ್ನು ಗಂಭೀರವಾಗಿ ಸ್ವೀಕರಿಸಿದ್ದಾರೆ. ಜೊತೆಗೆ ನಮ್ರತಾ ಇದ್ದಲ್ಲಿ ಹೋಗಿ ಕುಳಿತಿದ್ದಾರೆ. ‘ನಾನು ಜೋಕ್ ಮಾಡಿದ್ದು. ನೀವು ಗಂಭೀರವಾಗಿ ಸ್ವೀಕರಿಸಿದ್ರಲ್ಲ’ ಎಂದರು ನಮ್ರತಾ.

ಇದನ್ನೂ ಓದಿ: ಬೇರೆಯವರ ಜೊತೆ ನಮ್ರತಾ ಗೌಡ ಮದುವೆ ಫಿಕ್ಸ್​ ಆದರೆ ಸ್ನೇಹಿತ್​ ಹೀಗೆಲ್ಲ ಮಾಡ್ತಾರಾ?

‘ರೋಗಿ ಬಯಸಿದ್ದು ಹಾಲು ಅನ್ನ.. ವೈದ್ಯ ಹೇಳಿದ್ದೂ ಅದೇ. ಸುಮ್ನೆ ಹೋಗ್ತಾ ಇದ್ದವನ್ನ ಕರೆದ್ರೆ ಏನು ಮಾಡೋದು’ ಎಂದು ಕಾರ್ತಿಕ್ ಕೇಳಿದರು. ‘15 ದಿನದಲ್ಲಿ ಲವ್ ಆಗಿ, ಕಾರ್ತಿಕ್​ನೇ ಬೇಕು ಅಂತ ಅತ್ತು ಕರೆದರೆ ಏನು ಮಾಡ್ತೀರಿ? ಮದುವೆ ಆಗಿ ಅಂತ ಕೂತ್ಕೋತಿನಿ ಆಗ್ತೀರಾ’ ಎಂದು ನಮ್ರತಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕಾರ್ತಿಕ್​ಗೆ ಏನು ಉತ್ತರ ಹೇಳಬೇಕು ಎಂಬುದೇ ತಿಳಿದಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?