AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆಗಿ ಅಂತ ಕೂತ್ಕೋತಿನಿ, ಆಗ್ತೀರಾ?’; ಕಾರ್ತಿಕ್​ಗೆ ನಮ್ರತಾ ನೇರ ಪ್ರಶ್ನೆ

ನಮ್ರತಾ ಜೊತೆ ಡೇಟ್​ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ.

‘ಮದುವೆ ಆಗಿ ಅಂತ ಕೂತ್ಕೋತಿನಿ, ಆಗ್ತೀರಾ?’; ಕಾರ್ತಿಕ್​ಗೆ ನಮ್ರತಾ ನೇರ ಪ್ರಶ್ನೆ
ನಮ್ರತಾ-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Dec 30, 2023 | 8:11 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಕಾರ್ತಿಕ್ (Karthik Mahesh) ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ನಮ್ರತಾ ಕೂಡ ಇತ್ತೀಚೆಗೆ ಮೆಚ್ಚುಗೆ ಪಡೆಯುತ್ತಿದ್ದಾರೆ. ಕಾರ್ತಿಕ್ ಅವರು ಮೊದಲಿನಿಂದಲೂ ನಮ್ರತಾ ಜೊತೆ ಕ್ಲೋಸ್ ಆಗೋಕೆ ಪ್ರಯತ್ನಿಸಿದ್ದರು. ಸ್ನೇಹಿತ್ ಹೋದ ಮೇಲೆ ಇಬ್ಬರ ಮಧ್ಯೆ ಒಳ್ಳೆಯ ರ‍್ಯಾಪೋ ಬೆಳೆಯುತ್ತಿದೆ. ಕಾರ್ತಿಕ್ ಹಾಗೂ ನಮ್ರತಾ ಕ್ಲೋಸ್ ಆಗುತ್ತಿದ್ದಾರೆ. ಈಗ ಇಬ್ಬರೂ ಓಪನ್ ಆಗಿ ಫ್ಲರ್ಟ್ ಮಾಡಿದ್ದಾರೆ. ಇದು ಸಖತ್ ಫನ್ನಿ ಆಗಿತ್ತು.

ನಮ್ರತಾ ಜೊತೆ ಡೇಟ್​ಗೆ ಹೋಗಬೇಕು ಎಂಬುದು ಕಾರ್ತಿಕ್ ಕನಸು. ಮೊದಲಿನಿಂದಲೂ ಈ ಬಗ್ಗೆ ಮಾತನಾಡುತ್ತಲೇ ಬರುತ್ತಿದ್ದಾರೆ. ಇದನ್ನು ನಮ್ರತಾ ಹಾಗೂ ಕಾರ್ತಿಕ್ ಇಬ್ಬರೂ ಫನ್ ಆಗಿಯೇ ಸ್ವೀಕರಿಸಿದ್ದಾರೆ. ತಮ್ಮ ತಾಯಿ ಬಂದಾಗಲೂ ಕಾರ್ತಿಕ್ ಈ ವಿಚಾರ ತೆಗೆದಿದ್ದರು. ‘ನಾನು ನಮ್ರತಾ ಜೊತೆ ಡೇಟ್​ಗೆ ಹೋಗಲೇ’ ಎಂದು ಕೇಳಿದ್ದರು. ಈಗ ಕಾರ್ತಿಕ್ ಹಾಗೂ ನಮ್ರತಾ ಆಡಿದ ಮಾತು ಗಮನ ಸೆಳೆಯುತ್ತಿದೆ.

ಕಾರ್ತಿಕ್ ಅವರು ಅಡುಗೆ ಮನೆಗೆ ಹೊರಟಿದ್ದರು. ಈ ವೇಳೆ ಕಾರ್ತಿಕ್​ ಅವರನ್ನು ನಮ್ರತಾ ಕರೆದರು. ‘ಐದು ನಿಮಿಷ ಇಲ್ಲಿ ಬನ್ನಿ. ಕುಳಿತು ನನ್ನನ್ನು ನೋಡಿ’ ಎಂದಿದ್ದಾರೆ. ಕಾರ್ತಿಕ್ ಈ ಮಾತನ್ನು ಗಂಭೀರವಾಗಿ ಸ್ವೀಕರಿಸಿದ್ದಾರೆ. ಜೊತೆಗೆ ನಮ್ರತಾ ಇದ್ದಲ್ಲಿ ಹೋಗಿ ಕುಳಿತಿದ್ದಾರೆ. ‘ನಾನು ಜೋಕ್ ಮಾಡಿದ್ದು. ನೀವು ಗಂಭೀರವಾಗಿ ಸ್ವೀಕರಿಸಿದ್ರಲ್ಲ’ ಎಂದರು ನಮ್ರತಾ.

ಇದನ್ನೂ ಓದಿ: ಬೇರೆಯವರ ಜೊತೆ ನಮ್ರತಾ ಗೌಡ ಮದುವೆ ಫಿಕ್ಸ್​ ಆದರೆ ಸ್ನೇಹಿತ್​ ಹೀಗೆಲ್ಲ ಮಾಡ್ತಾರಾ?

‘ರೋಗಿ ಬಯಸಿದ್ದು ಹಾಲು ಅನ್ನ.. ವೈದ್ಯ ಹೇಳಿದ್ದೂ ಅದೇ. ಸುಮ್ನೆ ಹೋಗ್ತಾ ಇದ್ದವನ್ನ ಕರೆದ್ರೆ ಏನು ಮಾಡೋದು’ ಎಂದು ಕಾರ್ತಿಕ್ ಕೇಳಿದರು. ‘15 ದಿನದಲ್ಲಿ ಲವ್ ಆಗಿ, ಕಾರ್ತಿಕ್​ನೇ ಬೇಕು ಅಂತ ಅತ್ತು ಕರೆದರೆ ಏನು ಮಾಡ್ತೀರಿ? ಮದುವೆ ಆಗಿ ಅಂತ ಕೂತ್ಕೋತಿನಿ ಆಗ್ತೀರಾ’ ಎಂದು ನಮ್ರತಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕಾರ್ತಿಕ್​ಗೆ ಏನು ಉತ್ತರ ಹೇಳಬೇಕು ಎಂಬುದೇ ತಿಳಿದಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ