AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ನಮ್ರತಾನ ಅನ್​ಫಾಲೋ ಮಾಡಿದ ಸ್ನೇಹಿತ್; ಜೋರಾಯ್ತು ಚರ್ಚೆ

ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸ್ನೇಹಿತ್ ಅವರು ನಮ್ರತಾನ ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಈಗ ಅವರನ್ನು ಅನ್​ಫಾಲೋ ಮಾಡಿದ್ದಾರೆ. ನಮ್ರತಾ ಕೂಡ ಸ್ನೇಹಿತ್​ನ ಫಾಲೋ ಮಾಡುತ್ತಿಲ್ಲ.

ಇನ್​ಸ್ಟಾಗ್ರಾಮ್​ನಲ್ಲಿ ನಮ್ರತಾನ ಅನ್​ಫಾಲೋ ಮಾಡಿದ ಸ್ನೇಹಿತ್; ಜೋರಾಯ್ತು ಚರ್ಚೆ
ಸ್ನೇಹಿತ್-ನಮ್ರತಾ
ರಾಜೇಶ್ ದುಗ್ಗುಮನೆ
|

Updated on: Jan 05, 2024 | 7:05 AM

Share

ಬಿಗ್ ಬಾಸ್ ಮನೆಯಲ್ಲಿ ನಮ್ರತಾ (Namratha Gowda) ಹಾಗೂ ಸ್ನೇಹಿತ್ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಕೆಲವು ವಾರಗಳ ಹಿಂದೆ ಸ್ನೇಹಿತ್ ಎಲಿಮಿನೇಟ್ ಆದರು. ಈ ವೇಳೆ ನಮ್ರತಾ ಹಾಗೂ ಸ್ನೇಹಿತ್ ಇಬ್ಬರೂ ಕಣ್ಣೀರು ಹಾಕಿದ್ದರು. ಈಗ ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಹಾಗೂ ಕಾರ್ತಿಕ್ ಕ್ಲೋಸ್ ಆಗಿದ್ದಾರೆ. ಇಬ್ಬರೂ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಒಂದು ನಡೆಯುತ್ತಿದೆ. ಸ್ನೇಹಿತ್ ಗೌಡ ಅವರು ಇನ್​ಸ್ಟಾಗ್ರಾಂನಲ್ಲಿ ನಮ್ರತಾ ಅವರನ್ನು ಅನ್​ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಮನೆ ಒಳಗೆ ಹೋಗುವುದಕ್ಕೂ ಮೊದಲು ಸೋಶಿಯಲ್ ಮೀಡಿಯಾ ಖಾತೆ ನಿರ್ವಹಣೆ ಜವಾಬ್ದಾರಿಯನ್ನು ಸ್ಪರ್ಧಿಗಳು ಬೇರೆಯವರಿಗೆ ವಹಿಸಿ ಹೋಗುತ್ತಾರೆ. ನಮ್ರತಾ ಕೂಡ ಹಾಗೆಯೇ ಮಾಡಿದ್ದಾರೆ. ಸ್ನೇಹಿತ್ ಕೂಡ ಇದೇ ರೀತಿ ಮಾಡಿದ್ದರು ಎನ್ನಲಾಗಿದೆ. ಈಗ ಸ್ನೇಹಿತ್ ಗೌಡ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ದು, ಇನ್​ಸ್ಟಾಗ್ರಾಮ್ ಖಾತೆಯನ್ನು ತಾವೇ ಹ್ಯಾಂಡಲ್ ಮಾಡುತ್ತಿದ್ದಾರೆ.

ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸ್ನೇಹಿತ್ ಅವರು ನಮ್ರತಾನ ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಈಗ ಅವರನ್ನು ಅನ್​ಫಾಲೋ ಮಾಡಿದ್ದಾರೆ. ನಮ್ರತಾ ಕೂಡ ಸ್ನೇಹಿತ್​ನ ಫಾಲೋ ಮಾಡುತ್ತಿಲ್ಲ. ಈ ಬೆಳವಣಿಗೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಿಗ್ ಬಾಸ್ ಮನೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಚಾರಗಳೇ ಇದಕ್ಕೆ ಕಾರಣವೇ ಎನ್ನುವ ಪ್ರಶ್ನೆ ಮೂಡಿದೆ.

ನಮ್ರತಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಸ್ವತಂತ್ರವಾಗಿ ಅವರು ಗುರುತಿಸಿಕೊಳ್ಳುತ್ತಿದ್ದಾರೆ. ಇನ್ನು, ಕಾರ್ತಿಕ್ ಅವರು ಸಮಯ ಸಿಕ್ಕಾಗ ನಮ್ರತಾ ಜೊತೆ ಫ್ಲರ್ಟ್ ಮಾಡುತ್ತಾರೆ. ಗುರುವಾರದ (ಜನವರಿ 4) ಎಪಿಸೋಡ್​ನಲ್ಲಿ ನಮ್ರತಾ ಅವರು ಕಾರ್ತಿಕ್​ಗೆ ‘ಐ ಲೈಕ್ ಯೂ’ ಎಂದಿದ್ದಾರೆ. ಈ ಎಪಿಸೋಡ್ ಗಮನ ಸೆಳೆದಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪುರುಷ-ಮಹಿಳೆ ಅನ್ನೋ ತಾರತಮ್ಯ? ವಿನಯ್ ವಿರುದ್ಧ ಸಿಡಿದೆದ್ದ ಸಂಗೀತಾ ಶೃಂಗೇರಿ

ಈ ಬಾರಿ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ. ಈ ವಾರ ಸಂಗೀತಾ ಕ್ಯಾಪ್ಟನ್ ಆಗಿದ್ದಾರೆ. ಮೈಕಲ್ ಕಳಪೆ ಪಡೆದರೆ, ಕಾರ್ತಿಕ್ ಉತ್ತಮ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್