AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಎದುರೇ ಒಡೆದು ಹೋಯ್ತು ಸ್ನೇಹಿತ್ ಹೃದಯ; ಕಿಚ್ಚ​ ಈ ರೀತಿ ಮಾಡಬಾರದಿತ್ತು..

ಸ್ನೇಹಿತ್ ಬಿಗ್ ಬಾಸ್​ ಮನೆ ಒಳಗೆ ಬಂದಾಗ ಸಂಗೀತಾ ಜೊತೆ ಕ್ಲೋಸ್ ಆಗೋಕೆ ನೋಡಿದ್ದರು. ಆದರೆ ಈ ವೇಳೆ ಕಾರ್ತಿಕ್ ಎಂಟ್ರಿ ಆಯಿತು. ಆ ಬಳಿಕ ಈಶಾನಿ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಳ್ಳಲು ಹೋದರು. ಆಗ ಮೈಕೆಲ್ ಅವರು ಬಂದರು. ಈಗ ನಮ್ರತಾ ಗೌಡ ಜೊತೆ ಕ್ಲೋಸ್ ಆಗಲು ಪ್ರಯತ್ನಿಸುತ್ತಿದ್ದಾರೆ.

ಸುದೀಪ್​ ಎದುರೇ ಒಡೆದು ಹೋಯ್ತು ಸ್ನೇಹಿತ್ ಹೃದಯ; ಕಿಚ್ಚ​ ಈ ರೀತಿ ಮಾಡಬಾರದಿತ್ತು..
ಸ್ನೇಹಿತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Nov 19, 2023 | 12:03 PM

Share

ಬಿಗ್ ಬಾಸ್​ನಲ್ಲಿ ನಮ್ರತಾ ಗೌಡ (Namrata Gowda) ಜೊತೆ ಸ್ನೇಹಿತ್​ ಸದಾ ಫ್ಲರ್ಟ್ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಇದು ಇಡೀ ಮನೆಗೆ ಗೊತ್ತಿದೆ. ‘ನನಗೆ ಈ ಬಗ್ಗೆ ಆಸಕ್ತಿ ಇಲ್ಲ’ ಎಂದು ನಮ್ರತಾ ಎಷ್ಟೋ ಬಾರಿ ಹೇಳಿಕೊಂಡಿದ್ದಿದೆ. ಆದರೆ, ಸ್ನೇಹಿತ್ ಮಾತ್ರ ಪ್ರಯತ್ನ ನಿಲ್ಲಿಸಲೇ ಇಲ್ಲ. ಈಗ ಸುದೀಪ್ ಆಡಿದ ಒಂದು ಮಾತಿನಿಂದ ಸ್ನೇಹಿತ್ ಹೃದಯವೇ ಒಡೆದು ಹೋಗಿದೆ. ಈ ಮಾತಿನಿಂದ ಮನೆ ಮಂದಿ ಸಖತ್ ನಕ್ಕಿದ್ದಾರೆ.

ಸ್ನೇಹಿತ್ ಗೌಡ ಅವರು ನಮ್ರತಾ ಜೊತೆ ಸಾಕಷ್ಟು ಫ್ಲರ್ಟ್ ಮಾಡಿದ್ದಾರೆ. ‘ನನ್ನ ಜಾಗದಲ್ಲಿ ಬೇರೆ ಹುಡುಗಿ ಇದ್ದಿದ್ದರೆ ಬಹುಶಃ ನಿಮ್ಮ ಮಾತಿಗೆ ಒಲಿಯುತ್ತಿದ್ದರೇನೋ’ ಎಂದು ನಮ್ರತಾ ಈ ಮೊದಲು ಹೇಳಿದ್ದರು. ಇದಕ್ಕೆ ಉತ್ತರಿಸಿದ್ದ ಸ್ನೇಹಿತ್, ‘ನಮ್ಮ ಪ್ರಯತ್ನ ನಾವು ಮಾಡುತ್ತಾ ಇರಬೇಕು. ಎಲ್ಲಾ ದೇವರ ಇಚ್ಛೆ ಅಂತೆ ಆಗುತ್ತದೆ’ ಎಂದು ಹೇಳಿದ್ದರು. ಈಗ ನಮ್ರತಾ ಹಾಗೂ ಸ್ನೇಹಿತ್ ಮಧ್ಯೆ ಅಣ್ಣ ತಂಗಿ ಸಂಬಂಧ ಕಲ್ಪಿಸಿದ್ದಾರೆ ಸುದೀಪ್.

ನಮ್ರತಾ ಅವರನ್ನು ಮಾತನಾಡಿಸುತ್ತಾ, ‘ನಿಮ್ಮ ಅಣ್ಣ ಹೇಗಿದ್ದಾರೆ, ಅವರನ್ನು ಇನ್ನಮುಂದೆ ನೀವು ಅಣ್ಣ ಎಂದೇ ಕರೆಯಬೇಕು’ ಎಂದರು ಸುದೀಪ್. ಇದಕ್ಕೆ ಉತ್ತರಿಸಿದ ನಮ್ರತಾ, ‘ಅವರಿಗೆ ಹಾಗೆ ಕರೆಯೋದು ಇಷ್ಟವಿಲ್ಲವಂತೆ’ ಎಂದರು. ‘ಇರಲಿಬಿಡಿ, ಇನ್ಮುಂದೆ ಹಾಗೆಯೇ ಕರೆಯಿರಿ. ಅಣ್ಣ, ಸ್ನೇಹಿತ್ ಅಣ್ಣ ಎಂದು ಜೋರಾಗಿ ಕರೆದರೆ ಸಾಕು ಅವರು ಪ್ರತ್ಯಕ್ಷರಾಗಿಬಿಡುತ್ತಾರೆ’ ಎಂದರು ಸುದೀಪ್. ಈ ವೇಳೆ ಕೆಲವರು, ‘ಬಹುಶಃ ಸ್ನೇಹಿತ್ ಹೃದಯ ಒಡೆದು ಹೋಯಿತು’ ಎಂದು ಮಾತನಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುದೀಪ್ ಬುದ್ಧಿವಾದಕ್ಕೂ ಇಲ್ಲ ಬೆಲೆ; ನಳಿಕೆ ತೆಗೆದ ಬಳಿಕ ಮೊದಲಿನಂತೇ ಆದ ನಮ್ರತಾ ಗೌಡ

ಸ್ನೇಹಿತ್ ಬಿಗ್ ಬಾಸ್​ ಮನೆ ಒಳಗೆ ಬಂದಾಗ ಸಂಗೀತಾ ಜೊತೆ ಕ್ಲೋಸ್ ಆಗೋಕೆ ನೋಡಿದ್ದರು. ಆದರೆ ಈ ವೇಳೆ ಕಾರ್ತಿಕ್ ಎಂಟ್ರಿ ಆಯಿತು. ಆ ಬಳಿಕ ಈಶಾನಿ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಳ್ಳಲು ಹೋದರು. ಆಗ ಮೈಕೆಲ್ ಅವರು ಬಂದರು. ಈಗ ನಮ್ರತಾ ಗೌಡ ಜೊತೆ ಕ್ಲೋಸ್ ಆಗಲು ಪ್ರಯತ್ನಿಸುತ್ತಿದ್ದಾರೆ. ಸದಾ ಅವರ ಜೊತೆಯೇ ಸುತ್ತಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು