AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚನ ಚಪ್ಪಾಳೆ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ ನಮ್ರತಾ ಗೌಡ; ಫ್ಯಾನ್ಸ್ ಅಸಮಧಾನ

ಒಂದು ವಾರದ ಪರ್ಫಾರ್ಮೆನ್ಸ್​ನ ಗಮನದಲ್ಲಿ ಇಟ್ಟುಕೊಂಡು ಈ ಚಪ್ಪಾಳೆ ಕೊಡಲಾಗುತ್ತದೆ. ಹೀಗಿರುವಾಗ ಅದರ ಬಗ್ಗೆಯೇ ಅನುಮಾನ ವ್ಯಕ್ತಪಡಿಸೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಕಿಚ್ಚನ ಚಪ್ಪಾಳೆ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ ನಮ್ರತಾ ಗೌಡ; ಫ್ಯಾನ್ಸ್ ಅಸಮಧಾನ
ಸುದೀಪ್​-ನಮ್ರತಾ
ರಾಜೇಶ್ ದುಗ್ಗುಮನೆ
|

Updated on:Dec 11, 2023 | 9:25 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಪ್ರತಿ ವಾರ ಕಿಚ್ಚನ ಚಪ್ಪಾಳೆ ನೀಡುತ್ತಾರೆ. ಆ ವಾರ ಪೂರ್ತಿ ಯಾರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದರೋ ಅವರಿಗೆ ಈ ಚಪ್ಪಾಳೆ ಸಿಗುತ್ತದೆ. ಎಂಟನೇ ವಾರ ಈ ಚಪ್ಪಾಳೆ ನಮ್ರತಾಗೆ ಸಿಕ್ಕಿತ್ತು. ಒಂಭತ್ತನೇ ವಾರ ಕಾರ್ತಿಕ್ ಮಹೇಶ್ ಅವರು ಸುದೀಪ್ ನೀಡುವ ಈ ಗೌರವವನ್ನು ಪಡೆದರು. ಈಗ ನಮ್ರತಾ ಗೌಡ ಅವರು ಕಿಚ್ಚನ ಚಪ್ಪಾಳೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ವಿನಯ್ ಹಾಗೂ ನಮ್ರತಾ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ಕಳೆದವಾರ ಕಾರ್ತಿಕ್ ಅವರಿಂದ ಕೆಲವು ತಪ್ಪುಗಳು ಆಗಿದ್ದವು. ಉಳಿದ ಎಲ್ಲರಿಗೆ ಹೋಲಿಸಿದರೆ ಅವರ ಪರ್ಫಾರ್ಮೆನ್ಸ್ ಉತ್ತಮವಾಗಿತ್ತು. ಈ ವಾರ ಯಾರಿಗೂ ಕಿಚ್ಚನ ಚಪ್ಪಾಳೆ ಸಿಗುವುದಿಲ್ಲ ಎಂದು ಕೆಲವರು ಭಾವಿಸಿದ್ದರು. ಆದರೆ, ಸುದೀಪ್ ಅವರು ಕಾರ್ತಿಕ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಿದರು. ಇದನ್ನು ನೋಡಿ ವಿನಯ್ ಅವರು ಸಾಕಷ್ಟು ಉರಿದುಕೊಂಡರು. ನಮ್ರತಾ ಅವರಿಗಂತೂ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಶನಿವಾರದ ಎಪಿಸೋಡ್ ಮುಗಿದ ಬಳಿಕ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ನಮ್ರತಾ, ವಿನಯ್ ಹಾಗೂ ಮೈಕಲ್ ಕುಳಿತಿದ್ದರು. ಈ ವೇಳೆ ಕಿಚ್ಚನ ಚಪ್ಪಾಳೆ ಬಗ್ಗೆ ಚರ್ಚೆ ಆಗಿದೆ. ‘ಕಿಚ್ಚನ ಚಪ್ಪಾಳೆಯನ್ನು ಯಾರೂ ಇಲ್ಲ ಎಂದು ಅವರಿಗೆ ನೀಡಿದ್ರಾ ಅಥವಾ ನಿಜವಾಗಲೂ ಅವರ ಸಾಮರ್ಥ್ಯ ನೋಡಿ ಕೊಟ್ರಾ’ ಎಂದು ನಮ್ರತಾ ಪ್ರಶ್ನೆ ಮಾಡಿದ್ದಾರೆ. ಆಗ ವಿನಯ್, ‘ನಾನು ಕೆಟ್ಟದಾಗಿ ಆಡಿದೆ, ಅದಕ್ಕೆ ಕಾರ್ತಿಕ್​ಗೆ ಸಿಕ್ತು’ ಎಂದಿದ್ದಾರೆ. ಸದ್ಯ ನಮ್ರತಾ ಹೇಳಿಕೆಗೆ ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಕೊಟ್ಟ ಮಾತನ್ನು ಉಳಿಸಿಕೊಂಡ್ರಿ’; ನಮ್ರತಾಗೆ ಕಿಚ್ಚನ ಚಪ್ಪಾಳೆ ಕೊಟ್ಟು ಪ್ರತಾಪ್​ನ​ ಕಾಲೆಳೆದ ಸುದೀಪ್

ಕಿಚ್ಚನ ಚಪ್ಪಾಳೆ ಸುಖಾಸುಮ್ಮನೆ ಯಾರಿಗೂ ಸಿಗುವುದಿಲ್ಲ. ಒಂದು ವಾರದ ಪರ್ಫಾರ್ಮೆನ್ಸ್​ನ ಗಮನದಲ್ಲಿ ಇಟ್ಟುಕೊಂಡು ಈ ಚಪ್ಪಾಳೆ ಕೊಡಲಾಗುತ್ತದೆ. ಹೀಗಿರುವಾಗ ಅದರ ಬಗ್ಗೆಯೇ ಅನುಮಾನ ವ್ಯಕ್ತಪಡಿಸೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ನಮ್ರತಾಗೆ ಚಪ್ಪಾಳೆ ನೀಡಿದ್ದಕ್ಕೆ ಸುದೀಪ್ ಅವರಿಗೆ ವಿಷಾದ ಉಂಟಾಗಿರಬಹುದು’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Mon, 11 December 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ