AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊರ ಹೋದ್ಮೇಲೂ ಮಾತನಾಡಲ್ಲ’; ಸ್ನೇಹಿತ್ ಜೊತೆ ಗೆಳೆತನ ಮುರಿದುಕೊಂಡು ಮೂರು ಕಾರಣ ನೀಡಿದ ನಮ್ರತಾ

ನಮ್ರತಾ ಜೊತೆ ಸ್ನೇಹಿತ್ ಮೊದಲಿನಂತೆ ಮಾತನಾಡಿಲ್ಲ. ಇದು ನಮ್ರತಾಗೆ ಬೇಸರ ತಂದಿದೆ. ಮೂರು ಕಾರಣ ನೀಡಿ ಅವರು ಸ್ನೇಹಿತ್ ಜೊತೆ ಗೆಳೆತನ ಮುರಿದುಕೊಂಡಿದ್ದಾರೆ. ‘ಹೊರ ಹೋದಮೇಲೆ ಬಹುಶಃ ನಿಮ್ಮ ಜೊತೆ ಮತ್ತೆ ಮಾತನಾಡಲ್ಲ’ ಎಂದು ನಮ್ರತಾ ನೇರವಾಗಿ ಹೇಳಿದ್ದಾರೆ.

‘ಹೊರ ಹೋದ್ಮೇಲೂ ಮಾತನಾಡಲ್ಲ’; ಸ್ನೇಹಿತ್ ಜೊತೆ ಗೆಳೆತನ ಮುರಿದುಕೊಂಡು ಮೂರು ಕಾರಣ ನೀಡಿದ ನಮ್ರತಾ
ನಮ್ರತಾ-ಸ್ನೇಹಿತ್
ರಾಜೇಶ್ ದುಗ್ಗುಮನೆ
|

Updated on:Jan 19, 2024 | 10:16 AM

Share

ನಮ್ರತಾ ಗೌಡ (Namratha Gowda) ಹಾಗೂ ಸ್ನೇಹಿತ್ ಗೌಡ ಬಿಗ್ ಬಾಸ್ ಜರ್ನಿಯಲ್ಲಿ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ನಮ್ರತಾ ಎದುರು ಮದುವೆ ಪ್ರಪೋಸಲ್ ಕೂಡ ಇಟ್ಟಿದ್ದರು ಸ್ನೇಹಿತ್. ಆದರೆ, ಇದಕ್ಕೆಲ್ಲ ನಮ್ರತಾ ಸೊಪ್ಪು ಹಾಕಿಲ್ಲ. ಆ ಬಳಿಕ ಸ್ನೇಹಿತ್ ಎಲಿಮಿನೇಟ್ ಆದರು. ಇದು ದುಃಖದ ಬೀಳ್ಕೊಡುಗೆ ಆಗಿತ್ತು. ಸ್ನೇಹಿತ್ ಹಾಗೂ ನಮ್ರತಾ ಇಬ್ಬರೂ ಕಣ್ಣೀರು ಹಾಕಿದ್ದರು. ಇದೆಲ್ಲ ಘಟಿಸಿ ಹಲವು ವಾರಗಳು ಕಳೆದಿವೆ. ಇತ್ತೀಚೆಗೆ ಸ್ನೇಹಿತ್ ಅವರು ದೊಡ್ಮನೆಗೆ ಅಥಿತಿಯಾಗಿ ಮರಳಿದ್ದಾರೆ. ಎಲಿಮಿನೇಟ್ ಆದ ಸ್ಪರ್ಧಿಗಳ ರೀಯೂನಿಯನ್ ಆಗಿದೆ. ಈ ವೇಳೆ ಸ್ನೇಹಿತ್ ಜೊತೆ ಫ್ರೆಂಡ್​ಶಿಪ್ ಮುರಿದುಕೊಳ್ಳೋ ನಿರ್ಧಾರ ತೆಗೆದುಕೊಂಡಿದ್ದಾರೆ ನಮ್ರತಾ.

ಸ್ನೇಹಿತ್ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ. ನಮ್ರತಾ ಜೊತೆ ಅವರು ಕ್ಲೋಸ್ ಆಗಿದ್ದನ್ನೂ ಕೆಲವರು ಟೀಕೆ ಮಾಡಲಾಗಿದೆ. ಇದರಿಂದ ಸ್ನೇಹಿತ್ ಅವರು ಅಂಜಿದ್ದಾರೆ. ಹೀಗಾಗಿ ನಮ್ರತಾ ಜೊತೆ ಮೊದಲಿನಂತೆ ಮಾತನಾಡಿಲ್ಲ. ಇದು ನಮ್ರತಾಗೆ ಬೇಸರ ಮೂಡಿಸಿದೆ. ಮೂರು ಕಾರಣ ನೀಡಿ ಅವರು ಸ್ನೇಹಿತ್ ಜೊತೆ ಗೆಳೆತನ ಮುರಿದುಕೊಂಡಿದ್ದಾರೆ. ‘ಹೊರ ಹೋದಮೇಲೆ ಬಹುಶಃ ನಿಮ್ಮ ಜೊತೆ ಮತ್ತೆ ಮಾತನಾಡಲ್ಲ’ ಎಂದಿದ್ದಾರೆ ನಮ್ರತಾ.

ಇದನ್ನೂ ಓದಿ: ತಮ್ಮ ಬಗ್ಗೆ ಹೊರಗಿರೋ ಅಭಿಪ್ರಾಯ ಕೇಳಿ ಕಣ್ಣೀರು ಹಾಕಿದ ನಮ್ರತಾ

‘ನೀವು ಎಲ್ಲಾ ಫ್ಯಾಮಿಲಿಯವರನ್ನು ಕಾಂಟ್ಯಾಕ್ಟ್ ಮಾಡಿದ್ದೀರಿ. ಆದರೆ, ನನ್ನ ಕುಟುಂಬದವರನ್ನು ನೀವು ಸಂಪರ್ಕಿಸಿಲ್ಲ. ಇದು ನನ್ನ ಮೊದಲ ಕಾರಣ. ವಿನಯ್​ ಗೆಲ್ಲಬೇಕು ಎಂದು ಪೂಜೆ ಮಾಡಿಸಿ, ಲಾಕೆಟ್ ತಂದಿದ್ದೀರಿ. ಹೊರಗೆ ನಿಂತು ಸಪೋರ್ಟ್ ಮಾಡ್ತೀನಿ ಅಂದ್ರಿ. ನಂಗೆ ಹೇಗೆ ಅನಿಸಿರುತ್ತದೆ ನೀವೆ ಯೋಚಿಸಿ. ಇದು ಎರಡನೇ ಕಾರಣ. ನಾನು ಕಾರ್ತಿಕ್ ಕ್ಲೋಸ್ ಆಗಿರೋದನ್ನು ನೀವು ಜಡ್ಜ್ ಮಾಡಿದ್ರಿ. ಈ ಮೂರು ಕಾರಣಕ್ಕೆ ನನಗೆ ನಿಮ್ಮ ಜೊತೆ ಮಾತನಾಡಬೇಕು ಅನಿಸುತ್ತಿಲ್ಲ. ಹೊರ ಹೋದಮೇಲೂ ಬಹುಶಃ ನಿಮ್ಮ ಜೊತೆ ಮಾತನಾಡಲ್ಲ’ ಎಂದರು ನಮ್ರತಾ. ಈ ಬಗ್ಗೆ ಸ್ನೇಹಿತ್ ಸ್ಪಷ್ಟನೆ ನೀಡೋಕೆ ಹೋದರು. ‘ಶಟಪ್​’ ಎಂದು ಬೈದರು ನಮ್ರತಾ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Fri, 19 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು